ಹಿಂದೂ ದೇವಾಲಯಗಳ ವಶಕ್ಕೆ ಪಡೆಯುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ-ಶಾಸಕ ಡಾ. ಲಮಾಣಿ

KannadaprabhaNewsNetwork |  
Published : Aug 24, 2025, 02:00 AM IST
23ಎಂಡಿಜಿ1, ಮುಂಡರಗಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.23ಎಂಡಿಜಿ1ಎ, ಮುಂಡರಗಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯನ್ನು ಗಣೇಶ ದೇವಸ್ಥಾನದ ಎದುರಿನಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ಕೇವಲ ಹಿಂದೂ ದೇವಸ್ಥಾನಗಳನ್ನು ಟಾರ್ಗೆಟ್ ಮಾಡುತ್ತಾ ಬಂದಿದ್ದು, ಇದೀಗ ಧರ್ಮಸ್ಥಳದ ವಿಚಾರದಲ್ಲಿಯೂ ಅದನ್ನೇ ಮಾಡಿ ಹಿಂದೂ ದೇವಾಲಯಗಳನ್ನು ವಶಕ್ಕೆ ಪಡೆಯುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು.

ಮುಂಡರಗಿ: ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ಕೇವಲ ಹಿಂದೂ ದೇವಸ್ಥಾನಗಳನ್ನು ಟಾರ್ಗೆಟ್ ಮಾಡುತ್ತಾ ಬಂದಿದ್ದು, ಇದೀಗ ಧರ್ಮಸ್ಥಳದ ವಿಚಾರದಲ್ಲಿಯೂ ಅದನ್ನೇ ಮಾಡಿ ಹಿಂದೂ ದೇವಾಲಯಗಳನ್ನು ವಶಕ್ಕೆ ಪಡೆಯುವುದು ಕಾಂಗ್ರೆಸ್ ಸರ್ಕಾರದ ಅಜೆಂಡಾ ಆಗಿದೆ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಆರೋಪಿಸಿದರು.

ಶನಿವಾರ ಪಟ್ಟಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳವು ಕೇವಲ ಕರ್ನಾಟಕದಲ್ಲಷ್ಟೇ ಅಲ್ಲ, ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿದ್ದು, ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಇದಾಗಿದೆ. ಭಾರತದ ನ್ಯಾಯ ಸಂಹಿತೆ ಅಡಿಯಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರ ಲಕ್ಷಾಂತರ ರು.ಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳೆಲ್ಲೆಲ್ಲಾ ಗುಂಡಿ ತೋಡಿದೆ. ಈ ಅನಾಮಿಕನ ಹಿಂದಿರುವ ವ್ಯಕ್ತಿಗಳು ಯಾರು? ಮತ್ತು ಅವರ ಸಂಚುಗಳು ಏನೆನ್ನುವುದನ್ನು ಸರ್ಕಾರ ಈ ವರೆಗೂ ಬಹಿರಂಗಪಡಿಸಿಲ್ಲ ಎಂದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಲ್ಲಾಪುರ, ದೇಶದಲ್ಲಿ ಕಾಂಗ್ರೆಸ್ ಅವಸಾನದ ಅಂಚಿಗೆ ತಲುಪುತ್ತಿದ್ದು, ಜಾತಿ ಜಾತಿಗಳ ಮಧ್ಯೆ, ಧರ್ಮ ಧರ್ಮಗಳ ಮಧ್ಯದಲ್ಲಿ ಬೆಂಕಿ ಹಚ್ಚುವ ಕಾರ್ಯ ಇದಾಗಿದೆ. ಇದೊಂದು ಸರ್ಕಾರದ ಪ್ರಾಯೋಜಕ ಕೃತ್ಯವಾಗಿದೆ. ಸತ್ಯ ಯಾವಾಗಲೂ ಎದ್ದು ನಿಲ್ಲುತ್ತದೆ. ಹಾಗೆ ಧರ್ಮಸ್ಥಳಕ್ಕೆ ಯಾರೇ ಹೆಸರು ಕೆಡಿಸಲು ನೋಡಿದರೂ ಅದು ಕೆಡುವುದಿಲ್ಲ ಎಂದರು.

ಮುಖಂಡ ಕರಬಸಪ್ಪ ಹಂಚಿನಾ‍ಳ, ಕುಮಾರಸ್ವಾಮಿ ಹಿರೇಮಠ, ಮಂಜುನಾಥ ಇಟಗಿ, ನಾಗೇಶ ಹುಬ್ಬಳ್ಳಿ ಮಾತನಾಡಿ, ಧರ್ಮಸ್ಥಳ ಹಾಗೂ ಹಿಂದೂ ಧರ್ಮದ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗಡೆ ವಿರುದ್ಧ ಅವಹೇಳನಕಾರಿ ಮಾತು ಆಡುತ್ತಿರುವುದನ್ನು ನೋಡಿದರೆ ಇದು ಸರ್ಕಾರದ ಷಡ್ಯಂತ್ರ ಎಂದು ತಿಳಿಯುತ್ತದೆ. ಇಂತಹ ಘಟನೆಗಳನ್ನು ಸೃಷ್ಟಿಸಿ ದೇವಸ್ಥಾನವನ್ನು ಸರ್ಕಾರಕ್ಕೆ ಮಾಡಿಕೊಳ್ಳುವ ಹುನ್ನಾರ ಇದಾಗಿದೆ. ಒಂದು ಸರ್ಕಾರ ಮಾಡಲು ಆಗದ ಕಾರ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸುವ ಮೂಲಕ ಕೋಟ್ಯಂತರ ಕುಟುಂಬಗಳಿಗೆ ಆಸರೆಯಾಗುತ್ತಿದೆ ಎಂದರು.

ಆನಂದಗೌಡ ಪಾಟೀಲ, ರವೀಂದ್ರ ಉಪ್ಪಿನಬೆಟಗೇರಿ, ಎಸ್.ವಿ. ಪಾಟೀಲ, ಕೊಟ್ರೇಶ ಅಂಗಡಿ, ರಜನೀಕಾಂತ ದೇಸಾಯಿ, ಎಸ್.ಎಸ್.ಗಡ್ಡದ, ಬಸವರಾಜ ಬಿಳಿಮಗ್ಗದ, ನಾಗರಾಜ ಗುಡಿಮನಿ, ದೇವು ಹಡಪದ, ಸೋಮು ಹಕ್ಕಂಡಿ, ಆರ್.ಎಂ. ತಪ್ಪಡಿ, ಮೈಲಾರಪ್ಪ‌ ಕಲಕೇರಿ, ಸುನಿಲರಡ್ಡಿ ನೀರಲಗಿ, ವೀರಣ್ಣ ವಾಲಿ, ಕೊಪ್ಪಣ್ಣ ಕೊಪ್ಪಣ್ಣವರ, ಪವನ್ ಮೇಟಿ, ಜ್ಯೋತಿ ಹಾನಗಲ್, ರಂಗಪ್ಪ ಕೋಳಿ, ಶ್ರೀನಿವಾಸ ಅಬ್ಬಿಗೇರಿ, ಶಂಕರ ಉಳ್ಳಾಗಡ್ಡಿ, ಪ್ರಶಾಂತ ಗುಡದಪ್ಪನವರ, ಮಹೇಶ ಜಂತ್ಲಿ, ಯಲ್ಲಪ್ಪ ಗಣಾಚಾರಿ, ವೀರಣ್ಣ ತುಪ್ಪದ, ಆನಂದ ನಾಡಗೌಡ್ರ, ರವೀಂದ್ರಗೌಡ ಪಾಟೀಲ, ಅಶೊಕ ಚೂರಿ, ಕುಮಾರ ಡೊಳ್ಳಿನ, ಸುಭಾಸ ಕ್ವಾಟಿ, ನಾಗರಾಜ ಹಾನಗಲ್, ಅನಂತ ಕಂಚಗಾರ, ನಾಗರಾಜ ಹೊಸಮನಿ, ನಿಂಗರಾಜ ಸ್ವಾಗಿ, ಯಂಕಪ್ಪ ಪುರದ, ಮಂಜುನಾಥ ಮುಧೋಳ, ಪವಿತ್ರಾ ಕಲ್ಲುಕುಟಗರ್, ಅರುಣಾ ಪಾಟೀಲ, ಬನ್ನೆಪ್ಪ ಚೂರಿ ಉಪಸ್ಥಿತರಿದ್ದರು.

ಪಟ್ಟಣದ ಗಣೇಶ ದೇವಸ್ಥಾನದಿಂದ ಪ್ರಾರಂಭವಾದ ಮೆರವಣಿಗೆ ಬಸ್ ನಿಲ್ದಾಣ, ಅಂಬಾಭವಾನಿ ನಗರ, ಬಜಾರ್, ಜಾಗೃತ ವೃತ್ತದಿಂದ ಕೊಪ್ಪಳ ವೃತ್ತಕ್ಕೆ ತಲುಪಿ ಅಲ್ಲಿಂದ ತಹಸೀಲ್ದಾರ್ ಕಚೇರಿಗೆ ತಲುಪಿತು. ಸಿಪಿಐ ಮಂಜುನಾಥ ಕುಸಗಲ್ ತಮ್ಮ ಸಿಬ್ಬಂದಿಯೊಂದಿಗೆ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಮಗಳೂರು ಗಿರಿಧಾಮಗಳಲ್ಲಿ ಪ್ರವಾಸಿಗರ ಕಾರುಬಾರು
ನಾಲ್ಕೈದು ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಡಿಕೆಶಿ