ಹೊಸಪೇಟೆ: ನಗರದ ಅಂಜುಮನ್ ಶಾದಿಮಹಲ್ನಲ್ಲಿ ಅಂಜುಮನ್ ಖಿದ್ಮತೆ ಇಸ್ಲಾಂ ಕಮಿಟಿಯಿಂದ ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿಯಲ್ಲಿ ಶೇ.85ಕ್ಕೂ ಅಧಿಕ ಅಂಕಗಳೊಂದಿಗೆ ಪಾಸಾದ ವಿದ್ಯಾರ್ಥಿಗಳನ್ನು ಭಾನುವಾರ ಸನ್ಮಾನಿಸಲಾಯಿತು.
ಮುಸ್ಲಿಂ ಧರ್ಮಗುರು ಮೆಹಬೂಬ್ ಪೀರಸಾಬ್, ಅಂಜುಮನ್ ಕಮಿಟಿಯ ಉಪಾಧ್ಯಕ್ಷ ಎಂ.ಎಂ. ಫೈರೋಜ್ ಖಾನ್, ಕಾರ್ಯದರ್ಶಿ ಅಬೂಬಕ್ಕರ್ ಅಶ್ರಫಿ, ಖಜಾಂಚಿ ಅನ್ಸರ್ ಬಾಷಾ, ಜಂಟಿ ಕಾರ್ಯದರ್ಶಿ ಡಾ.ದುರ್ವೆಶ್ ಮೈನುದ್ದೀನ್, ಸದ್ಯಸರಾದ ಸದ್ದಾಮ್ ಹುಸೇನ್, ಮೊಹಮ್ಮದ್ ಮೋಸಿನ್, ಗುಲಾಮ್ ರಸೂಲ್, ಖದೀರ್, ಮನ್ಸೂರ್, ವಿಜಯನಗರ ಜಿಲ್ಲೆಯ ವಕ್ಫ್ ಬೋರ್ಡ್ ಅಧ್ಯಕ್ಷ ದಾದಾಪೀರ್, ಮುಖಂಡರಾದ ಎಸ್.ಎಸ್.ಕೆ ವಲಿಸಾಬ್, ಫೈರೋಜ್ ಪಿರಾ ಸಾಬ್, ಜಾವೇದ್, ತಯ್ಯಬ್, ರಫೀಕ್, ಹಬೀಬುಲ್ಲ, ವಾಹಿದ್, ಕಲಾಂಸಾಬ್, ಹುಸೇನ್ ಸಾಬ್, ರಫೀಕ್, ಖಾದರ್ ಸಾಬ್ ಮತ್ತಿತರರಿದ್ದರು. ಹೊಸಪೇಟೆಯ ಅಂಜುಮನ್ ಶಾದಿಮಹಲ್ ನಲ್ಲಿ ಅಂಜುಮನ್ ಖಿದ್ಮತೆ ಇಸ್ಲಾಂ ಕಮಿಟಿ ವತಿಯಿಂದ ಭಾನುವಾರ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅಂಜುಮನ್ ಕಮಿಟಿ ಹಾಗೂ ಹುಡಾ ಅಧ್ಯಕ್ಷ ಎಚ್.ಎನ್. ಮಹಮ್ಮದ್ ಇಮಾಮ್ ನಿಯಾಜಿ ಅವರು ಸನ್ಮಾನಿಸಿದರು.