ಪ್ರತಿಭಾ ಪುರಸ್ಕಾರ ಸಾಧನೆಗೆ ಸಿಗುವ ಗೌರವ

KannadaprabhaNewsNetwork |  
Published : Jun 25, 2025, 01:18 AM IST
18 | Kannada Prabha

ಸಾರಾಂಶ

ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಸಾಧನೆಗೆ ನೀಡುವ ಗೌರವ ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಚಿನ್ಮಯ ಪಿಯು ಕಾಲೇಜಿನ ಪ್ರಾಂಶುಪಾಲ ಎಂ.ಎನ್. ಶರತ ಕುಮಾರ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮೈಸೂರುಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳ ಸಾಧನೆಗೆ ನೀಡುವ ಗೌರವ ಅವರನ್ನು ಅಭಿನಂದಿಸಿ ಪ್ರೋತ್ಸಾಹಿಸುವ ಕೆಲಸ ಅಭಿನಂದನಾರ್ಹ ಎಂದು ಚಿನ್ಮಯ ಪಿಯು ಕಾಲೇಜಿನ ಪ್ರಾಂಶುಪಾಲ ಎಂ.ಎನ್. ಶರತ ಕುಮಾರ್‌ ಹೇಳಿದರು.ನಗರದ ಸರಸ್ವತಿಪುರಂನ ಶ್ರೀಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣಮಿತ್ರ ಮಂಡಳಿ ಹಾಗೂ ಶ್ರೀಕೃಷ್ಣ ಟ್ರಸ್ಟ್ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅಧಿಕ ಅಂಕ ಗಳಿಸಿದ 83 ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ಅವರು, ಪುರಸ್ಕಾರವು ಇತರೆ ವಿದ್ಯಾರ್ಥಿಗಳಿಗೆ ಇದು ಪ್ರೇರಣೆಯಾಗುತ್ತದೆ ಎಂದರು.ನಂತರ ಮಾತನಾಡಿದ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ, ಪ್ರತಿಯೊಂದು ಮಕ್ಕಳಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಮಕ್ಕಳಲ್ಲಿರುವ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು. ಆಗ ಇನ್ನಷ್ಟು ಸಾಧನೆ ಮಾಡಲು ಸಹಕಾರಿಯಾಗಲಿದೆ. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ತಿರುವಿನ ಘಟ್ಟ. ಇಲ್ಲಿ ಯಶಸ್ಸು ಸಾಧಿಸಿದರೆ ಮುಂದೆ ಸುಲಭವಾಗಿ ಗುರಿ ಮುಟ್ಟಬಹುದು ಎಂದು ಹೇಳಿದರು. ಈ ವೇಳೆ ಮಂಡಳಿ ಅಧ್ಯಕ್ಷ ಎನ್. ಗೋಪಾಲಕೃಷ್ಣನ್, ಗೌರವ ಕಾರ್ಯದರ್ಶಿ ಗುರುಪ್ರಸಾದ್, ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷ ರವಿಶಾಸ್ತ್ರಿ, ಪಿ.ಎಸ್. ಚಂದ್ರಶೇಖರ್, ಕಾರ್ಯದರ್ಶಿ ಕೆ.ವಿ. ಶ್ರೀಧರ್, ಖಜಾಂಜಿ ಎಂ. ರಾಘವೇಂದ್ರ ರಾವ್, ಶ್ರೀವತ್ಸ, ಮಂಗಳಾ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!