ಪ್ರತಿಭಾ ಪುರಸ್ಕಾರಗಳಿಂದ ವಿದ್ಯಾರ್ಥಿಗಳ ಹೊಣೆ ಹೆಚ್ಚಲಿದೆ: ಬಿಇಒ ಸೋಮಲಿಂಗೇಗೌಡ ಸಲಹೆ

KannadaprabhaNewsNetwork |  
Published : Jun 02, 2025, 01:06 AM IST
1ಎಚ್ಎಸ್ಎನ್10 : ಹೊಳೆನರಸೀಪುರದ ಶಂಕರಮಠದಲ್ಲಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವೈಷ್ಣವಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜನೆ ಮಾಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಎಚ್.ಕೆ.ಪ್ರಸನ್ನ, ಆರ್.ಡಿ.ರವೀಶ್, ನಗೇಶ್ ಕೌಂಡಿನ್ಯ, ವೆಂಕಟೇಶ್ ಎಚ್.ಬಿ., ಮಹಮದ್ ಖಾಲಿದ್ ಇದ್ದರು. | Kannada Prabha

ಸಾರಾಂಶ

ಡಾ. ಗಗನ್ ಹಾಗೂ ನಾಟಕಕಾರ ಗಂಗಾಚರಣ್ ಜನಪದ ಗೀತೆಗಳನ್ನು ಹಾಡಿದರು. ವೈಷ್ಣವಿ ಪ್ರಾರ್ಥಿಸಿದರು, ಮಹಮದ್ ಖಾಲಿದ್ ಸ್ವಾಗತಿಸಿದರು, ಕೃಷ್ಣಮೂರ್ತಿ ನಿರೂಪಿಸಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಪ್ರತಿಭಾವಂತ ವಿದ್ಯಾರ್ಥಿಗಳ ಸ್ಥಾನಮಾನವನ್ನು ಹೆಚ್ಚಿಸಿ, ಅವರ ಜವಾಬ್ದಾರಿಯನ್ನು ಹೆಚ್ಚಿಸುತ್ತವೆ. ಆದ್ದರಿಂದ ವಿದ್ಯಾರ್ಥಿಗಳು ನಿರೀಕ್ಷೆಗೆ ತಕ್ಕಂತೆ ಹಾಗೂ ಜವಾಬ್ದಾರಿಯನ್ನು ನಿರ್ವಹಿಸುವ ಸಲುವಾಗಿ ಕಲಿಕೆಗೆ ಹೆಚ್ಚಿನ ಒತ್ತು ನೀಡಿ, ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡದೇ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಕಾಳಜಿ ನೀಡುವಂತೆ ಬಿಇಒ ಸೋಮಲಿಂಗೇಗೌಡ ಸಲಹೆ ನೀಡಿದರು.

ಪಟ್ಟಣದ ರಥಬೀದಿಯಲ್ಲಿರುವ ಶಂಕರಮಠದಲ್ಲಿ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಹಾಗೂ ವೈಷ್ಣವಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜನೆ ಮಾಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪದವಿ ಪೂರ್ವ ಶಿಕ್ಷಣದಲ್ಲಿ ನೀವು ತೋರುವ ಕಲಿಕಾ ಸಾಮರ್ಥ್ಯ ಹಾಗೂ ಜ್ಞಾನವು ನಿಮ್ಮ ಜೀವನ ಶೈಲಿಯನ್ನೇ ಬದಲಿಸುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಮೊಬೈಲ್ ಗೀಳು ಎಂಬುದು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಯಿಂದ ಮಕ್ಕಳನ್ನು ವಿಮುಖ ಗೊಳಿಸುವ ಜತೆಗೆ ಅವರ ಆರೋಗ್ಯ, ಕಲಿಕಾ ಸಾಮರ್ಥ್ಯ ಹಾಗೂ ಸರ್ವಸ್ವವನ್ನು ನಾಶ ಮಾಡುತ್ತಿದೆ. ಆದ್ದರಿಂದ ಕಲಿಕೆಗೆ ಪೂರಕವಾಗಿ ಜ್ಞಾನಾರ್ಜನೆಗೆ ಮಾತ್ರ ಮೊಬೈಲ್ ಬಳಸಿಕೊಂಡು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಜೀವನ ರೂಪಿಸಿಕೊಂಡು, ಸಮಾಜಕ್ಕೆ ಆಸ್ತಿಯಾಗುವಂತೆ ಕರೆಕೊಟ್ಟರು.

ಕಾರ್ಯಕ್ರಮಕ್ಕೂ ಮುನ್ನ ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಎಚ್.ಎಸ್.ವೆಂಕಟೇಶ್‌ಮೂರ್ತಿ ಹಾಗೂ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ಮಡಿದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿ, ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

೨೦೨೪- ೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೯೫ ಕ್ಕಿಂತ ಹೆಚ್ಚಿನ ಅಂಕ ಪಡೆದ ೫೩ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಡಾ. ಗಗನ್ ಹಾಗೂ ನಾಟಕಕಾರ ಗಂಗಾಚರಣ್ ಜನಪದ ಗೀತೆಗಳನ್ನು ಹಾಡಿದರು. ವೈಷ್ಣವಿ ಪ್ರಾರ್ಥಿಸಿದರು, ಮಹಮದ್ ಖಾಲಿದ್ ಸ್ವಾಗತಿಸಿದರು, ಕೃಷ್ಣಮೂರ್ತಿ ನಿರೂಪಿಸಿದರು.

ಪುರಸಭಾಧ್ಯಕ್ಷ ಎಚ್.ಕೆ.ಪ್ರಸನ್ನ, ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಆರ್.ಡಿ.ರವೀಶ್, ವೈಷ್ಣವಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಕಾಮಾಕ್ಷಿ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಕುಮುದಾ ರಂಗನಾಥ್, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ.ವೆಂಕಟೇಶ್, ಸಾಹಿತಿ ನಾಗೇಶ್ ಕೌಂಡಿನ್ಯ, ನಿ. ಪ್ರಾಂಶುಪಾಲ ಪ್ರಭುಶಂಕರ್, ನಿ. ಶಿಕ್ಷಕಿ ರಮಾಮಣಿ, ಶಂಕರನಾರಾಯಣ ಐತಾಳ್, ಜಿ.ಪಿ.ಮಂಜುನಾಥ್ ಗುಪ್ತ, ವಕೀಲರಾದ ರಾಮಪ್ರಸನ್ನ, ಪೋಷಕರು, ಇತರರು ಇದ್ದರು.

PREV

Recommended Stories

ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಮಂಗಳಮುಖಿಯರು, ಮಹಿಳೆಯರಿಗೆ ಸರ್ಕಾರದಿಂದಲೇ ಉಚಿತ ಆಟೋ