ಪ್ರತಿಭೆ ಸೋಮಾರಿಗಳ ಸ್ವತ್ತಲ್ಲ: ಡಾ.ಶಿವಕುಮಾರ್

KannadaprabhaNewsNetwork |  
Published : Jun 10, 2026, 02:00 AM IST
ಹಗರಿಬೊಮ್ಮನಹಳ್ಳಿಯ ಪಂಚಮಸಾಲಿ ಭವನದಲ್ಲಿ ತಾಲೂಕು ಗಾಣಿಗ ಸಮಾಜ ಇತ್ತೀಚೆಗೆ ಹಮ್ಮಿಕೊಂಡಿದ್ದ ಗಾಣಿಗ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಪೋಷಕರ ಕಷ್ಟಗಳನ್ನು ಪರಿಗಣಿಸಿ ವಿದ್ಯಾವಂತರಾಗಿ ಜೀವನ ರೂಪಿಸಿಕೊಳ್ಳಬೇಕು

ಹಗರಿಬೊಮ್ಮನಹಳ್ಳಿ: ಸರಿಯಾದ ಗುರಿ, ಆತ್ಮವಿಶ್ವಾಸದಿಂದ ಮಾತ್ರ ಸಾಧನೆ ಮಾಡಬಹುದು. ಪ್ರತಿಭೆ ಸೋಮಾರಿಗಳ ಸ್ವತ್ತಲ್ಲ, ಅದು ಸಾಧಕರ ಸ್ವತ್ತು. ವಿದ್ಯಾರ್ಥಿಗಳು ಪೋಷಕರ ಕಷ್ಟಗಳನ್ನು ಪರಿಗಣಿಸಿ ವಿದ್ಯಾವಂತರಾಗಿ ಜೀವನ ರೂಪಿಸಿಕೊಳ್ಳಬೇಕು ಎಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶಿವಕುಮಾರ್ ತಿಳಿಸಿದರು.

ಪಟ್ಟಣದ ಕೆಚ್ಚಿನಬಂಡಿ ರಸ್ತೆಯಲ್ಲಿರುವ ಪಂಚಮಸಾಲಿ ಭವನದಲ್ಲಿ ತಾಲೂಕು ಗಾಣಿಗ ಸಮಾಜ ಇತ್ತೀಚೆಗೆ ಹಮ್ಮಿಕೊಂಡಿದ್ದ ಗಾಣಿಗ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಗಾಣಿಗ ಸಮಾಜದ ತಾಲೂಕು ಅಧ್ಯಕ್ಷ ಸಂದೀಪ್ ಶಿವಮೊಗ್ಗ ಮಾತನಾಡಿ, ಸಮಾಜದ ಪ್ರತಿಭಾವಂತರನ್ನು ಗೌರವಿಸುವ ಸಮಾರಂಭ ಇತರರಿಗೂ ಪ್ರೇರಣೆಯಾಗುವ ಉದ್ದೇಶ ಹೊಂದಿದೆ. ರಾಜ್ಯಕ್ಕೆ ದೇಶಕ್ಕೆ ಉನ್ನತ ಕೊಡುಗೆ ನೀಡುವಲ್ಲಿ ಸಮಾಜದ ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಆಶಿಸಿದರು.

ತಾಪಂ ಇಒ ವಿಶ್ವನಾಥ್ ಪಾಲಯ್ಯನಕೋಟೆ ಮಾತನಾಡಿ, ವಿದ್ಯಾರ್ಥಿಗಳು ಉನ್ನತ ಸಾಧನೆಯತ್ತ ಗುರಿ ಹೊಂದಬೇಕು. ಆಗ ಬದುಕು ಭವ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಸಮಾಜದ ಜಿಲ್ಲಾಧ್ಯಕ್ಷ ಜಿ.ಉಮೇಶ್ ಮಾತನಾಡಿದರು. ಹಾಲಶಿದ್ದೇಶ್ವರ ಶ್ರೀ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಸಮಾರಂಭದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ೫೦ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ೬ನೇ ರ‍್ಯಾಂಕ್ ಪಡೆದ ಭೂಮಿಕಾ ನಾಗರಾಜ ಅವರನ್ನು ಸನ್ಮಾನಿಸಲಾಯಿತು.

ಮಕ್ಕಳ ತಜ್ಞ ವೈದ್ಯ ಡಾ.ತಿಪ್ಪೇಸ್ವಾಮಿ, ಸಮಾಜದ ತಾಲೂಕು ಖಜಾಂಚಿ ಮುದ್ದಪ್ಪ, ಕಾರ್ಯದರ್ಶಿ ಎಚ್.ಜಗದೀಶ್, ಡಾ.ಭಾರತಿ ಶಿವಕುಮಾರ್, ಪ್ರಕಾಶ್, ಮುಖಂಡರಾದ ಕಿನ್ನಾಳ್ ಸುಭಾಷ್, ಡಿ.ವಿಶ್ವನಾಥ, ಮಲ್ಲಾಡ ಶೇಖರಪ್ಪ, ವರ್ತಕ ಜಗದೀಶ್ ಉಪಸ್ಥಿತರಿದ್ದರು. ಎ.ನಾಗರಾಜ್, ಕೆ.ಸಂಗಪ್ಪ ನಿರ್ವಹಿಸಿದರು.

ಹಗರಿಬೊಮ್ಮನಹಳ್ಳಿಯ ಪಂಚಮಸಾಲಿ ಭವನದಲ್ಲಿ ತಾಲೂಕು ಗಾಣಿಗ ಸಮಾಜ ಇತ್ತೀಚೆಗೆ ಹಮ್ಮಿಕೊಂಡಿದ್ದ ಗಾಣಿಗ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

​ಅಕ್ರಮ ಕ್ವಾರಿ ದುರಂತ: ಕೋಟುಮಚಗಿಗೆ ಅಧಿಕಾರಿಗಳ ಭೇಟಿ
ಮಣ್ಣಿನ ಆರೋಗ್ಯ ಕಾಪಾಡಲು ರೈತರು ಆದ್ಯತೆ ನೀಡಲಿ: ಬಸವರಾಜ ಬೊಮ್ಮಾಯಿ