ಕಾಫಿ ಸಮಸ್ಯೆ ಪರಿಹಾರಕ್ಕೆ ವಾಣಿಜ್ಯ ಸಚಿವರೊಂದಿಗೆ ಮಾತುಕತೆ: ಯದುವೀರ್‌

KannadaprabhaNewsNetwork |  
Published : Aug 27, 2024, 01:30 AM IST
ಚಿತ್ರ : 26ಎಂಡಿಕೆ1 : ಮೈಸೂರಿನಲ್ಲಿ ಸಂಸದ ಯದುವೀರ್, ಮೈಸೂರು ರಾಜಮಾತೆ ಅವರನ್ನು ಕೊಡಗು ಸಂರಕ್ಷಣಾ ವೇದಿಯ ಪ್ರಮುಖರು ಭೇಟಿ ಮಾಡಿದರು. | Kannada Prabha

ಸಾರಾಂಶ

ಕಾಡಾನೆ ಮಾನವ ಸಂಘರ್ಷ ನಿಯಂತ್ರಿಸಲು ಸಂಸದರ ಗಮನ ಸೆಳೆಯಲಾಯಿತು.ರೈಲ್ವೆ ಬ್ಯಾರಿಕೇಡ್‌ ಅನುಷ್ಠಾನಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಮೈಸೂರು ರಾಜಮಾತೆ ಪ್ರಮೋದ ದೇವಿ ಒಡೆಯರ್ ಅವರನ್ನು ಮೈಸೂರಿನಲ್ಲಿ ಸೋಮವಾರ ಕೊಡಗು ಸಂರಕ್ಷಣಾ ವೇದಿಕೆ ನಿಯೋಗವು ಭೇಟಿಯಾಗಿ ಸಮಾಲೋಚನೆ ನಡೆಸಿದರು.

ಮುಖ್ಯವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆ ಅನುಗುಣವಾಗಿ ಸ್ಥಳೀಯವಾಗಿ ರೋಬಸ್ಟಾ ಕಾಫಿಗೆ ಮಾರುಕಟ್ಟೆ ದರ ವಂಚಿತವಾಗಿರುವ ಬೆಳೆಗಾರರ ಸಮಸ್ಯೆ ಬಗ್ಗೆ ಸಂಸದರಿಗೆ ಮನವರಿಕೆ ಮಾಡಲಾಯಿತು. ಇದರ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆದು ಈ ಬಗ್ಗೆ ಕೇಂದ್ರ ವಾಣಿಜ್ಯ ಸಚಿವರ ಗಮನಕ್ಕೆ ತಂದು, ಸಚಿವರು ಹಾಗೂ ಕೊಡಗು ಸಂರಕ್ಷಣಾ ವೇದಿಕೆಯ ನಿಯೋಗದೊಂದಿಗೆ ಸಭೆ ನಡೆಸಿ ಈ ಸಮಸ್ಯೆಗೆ ಪರಿಹಾರ ಕಂಡು ಕಂಡುಕೊಳ್ಳಲು ನಿರ್ಧರಿಸಲಾಯಿತು.

ಭಾರತೀಯ ಕಾಫಿ ಮಂಡಳಿಯೊಂದಿಗೆ ಮತ್ತು ಬೆಳೆಗಾರರು ಎದುರಿಸುತ್ತಿರುವ ಇತರ ಸಮಸ್ಯೆಗಳ ಬಗ್ಗೆ ಪರಿಹಾರಕ್ಕಾಗಿ ನೇರ ಮಾತುಕತೆಗೆ ವೇದಿಕೆ ಕಲ್ಪಿಸಲಾಗುವುದು. ಈ ಬಗ್ಗೆ ಮುಂದಿನ ತಿಂಗಳು ಬೆಂಗಳೂರಿನಲ್ಲಿ ನಡೆಯುವ ಕಾಫಿ ಸಮ್ಮೇಳನದಲ್ಲಿ ಪ್ರತ್ಯೇಕ ವೇದಿಕೆ ನಿರ್ಮಿಸಿ ಈ ವಿಚಾರದ ಬಗ್ಗೆ ಸಮಾಲೋಚನೆ ನಡೆಸಿ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ಭರವಸೆ ನೀಡಿದರು.

ಕಾಡಾನೆ- ಮಾನವ ಸಂಘರ್ಷವನ್ನು ನಿಯಂತ್ರಿಸಲು ಸಂಸದರ ಗಮನ ಸೆಳೆದಾಗ, ಈಗಾಗಲೇ ಈ ಬಗ್ಗೆ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿದ್ದು, ಅರಣ್ಯ ಅಂಚಿನಲ್ಲಿ ರೈಲ್ವೆ ಬ್ಯಾರಿಕೇಡ್ ಯೋಜನೆ ಮೂಲಕ ಸುಮಾರು 280 ಕಿ.ಮೀ. ಕೈಗೆತ್ತಿಕೊಂಡಿರುವುದಾಗಿ ಹಾಗೂ ಅದನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮಳೆ ಹಾನಿಯಿಂದ ಕಾಫಿ ಬೆಳೆ ನಷ್ಟವಾಗಿರುವ ಬಗ್ಗೆ ಗಮನಕ್ಕೆ ತಂದಾಗ, ಈ ಬಾರಿ ಕಾಫಿ ಬೆಳೆಗೆ ದೊಡ್ಡ ನಷ್ಟವಾಗಿರುವ ಬಗ್ಗೆ ತಿಳಿದಿದೆ. ಈಗಾಗಲೇ ಕಾಫಿ ಬೆಳೆ ನಷ್ಟ ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಪೆಟ್ರೋಲಿಯಂ ನಂತರ ಅತಿ ದೊಡ್ಡ ವಿದೇಶಿ ವಿನಿಮಯಗೊಳಿಸುವ ಕಾಫಿ ಬೆಳೆಗೆ ವಿಮೆ ಸೌಲಭ್ಯ ಇಲ್ಲದ ಬಗ್ಗೆ ಸರ್ಕಾರ ಪ್ರೀಮಿಯಂ ಪಾವತಿಸುವ ರೀತಿಯಲ್ಲಿ ಕಾಫಿ ಬೆಳೆ ನಷ್ಟಕ್ಕೆ ಬೆಳೆ ವಿಮೆಯನ್ನು ಜಾರಿಗೆ ತರುವಂತೆ ಸಂಸದರ ಗಮನಕ್ಕೆ ತರಲಾಯಿತು.

ಕೊಡಗು ಸಂರಕ್ಷಣಾ ವೇದಿಕೆಯ ಸಂಚಾಲಕ ಚೊಟ್ಟೆಕ್‌ಮಾಡ ರಾಜೀವ್ ಬೋಪಯ್ಯ, ವೇದಿಕೆಯ ಪ್ರಮುಖರಾದ ಜಮ್ಮಡ ಗಣೇಶ್ ಅಯ್ಯಣ್ಣ, ಮಚ್ಚಾಮಾಡ ಅನೀಶ್ ಮಾದಪ್ಪ, ಪಂದ್ಯಂಡ ಗಿರೀಶ್, ಮಲ್ಲಮಾಡ ಪ್ರಭು ಪೂಣಚ್ಚ, ಅಣ್ಣೀರ ಹರೀಶ್ ಮಾದಪ್ಪ, ಉಳುವಂಗಡ ಲೋಹಿತ್ ಭೀಮಯ್ಯ, ಕೇಚಮಾಡ ವಿಶ್ವಾಸ್ ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ