ಅಜ್ರಿ ಗಾಣಿಗರಿಗೆ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಯಕ್ಷಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Oct 28, 2025, 01:00 AM IST
26ಅಜ್ರಿಪರ್ಯಾಯ ಶ್ರೀಗಳು ಅಜ್ರಿ ಗಾಣಿಗರಿಗೆ ತಲ್ಲೂರ್ಸ್  ಟ್ರಸ್ಟ್ ಯಕ್ಷಪ್ರಶಸ್ತಿ ಪ್ರದಾನ ಮಾಡಿದರು | Kannada Prabha

ಸಾರಾಂಶ

ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ 5 ದಿನಗಳ ಯಕ್ಷಗಾನ ಪ್ರದರ್ಶನ ‘ಯಕ್ಷ ಪಂಚಮಿ-2025’ ಕಾರ್ಯಕ್ರಮದ ಸಮಾರೋಪ ಇತ್ತೀಚೆಗೆ ನೆರವೇರಿತು.

ಉಡುಪಿ: ಯಕ್ಷಗಾನ ಕಲೆಗೆ ಉಡುಪಿಯ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ನೀಡುತ್ತಿರುವ ಕೊಡುಗೆ ಶ್ಲಾಘನೀಯ. ತಲ್ಲೂರು ಶಿವರಾಮ ಶೆಟ್ಟಿ ಎಂದರೆ ಯಕ್ಷಗಾನ ಎಂಬಂತೆ ಪ್ರಸಿದ್ಧಿಯಾಗಿದೆ. ಯಕ್ಷಗಾನ ಕಲೆಗೆ ಅವರು ನೀಡುತ್ತಿರುವ ಉತ್ತೇಜನ ಪ್ರೋತ್ಸಾಹ ಹೀಗೆ ಮುಂದುವರಿಯಲಿ. ನಮ್ಮ ನಾಡಿನ ಹೆಮ್ಮೆಯ ಕಲೆ ಯಕ್ಷಗಾನ ಚಿರಸ್ಥಾಯಿಯಾಗಲಿ ಎಂದು ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು ಹೇಳಿದರು.ಅವರು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಪುತ್ತಿಗೆ ಮಠ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ ಹಾಗೂ ಕುಂದಾಪುರದ ದ್ಯುತಿಪರ್ವ ಯಕ್ಷ ಟ್ರಸ್ಟ್‌ಗಳ ಸಹಭಾಗಿತ್ವದಲ್ಲಿ ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿ ವತಿಯಿಂದ ಹಮ್ಮಿಕೊಂಡ 5 ದಿನಗಳ ಯಕ್ಷಗಾನ ಪ್ರದರ್ಶನ ‘ಯಕ್ಷ ಪಂಚಮಿ-2025’ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿರುವ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಯಕ್ಷಗಾನಕ್ಕೆ ಇಂದು ಶಿಕ್ಷಕರು, ಎಂಜಿನಿಯರ್‌ಗಳು, ವೈದ್ಯರು ಸೇರಿದಂತೆ ಸುಶಿಕ್ಷಿತರು ಬರುತ್ತಿದ್ದಾರೆ. ಕಲೆಯ ಬೆಳವಣಿಗೆಯ ದೃಷ್ಟಿಯಿಂದ ಇದು ಸ್ವಾಗತಾರ್ಹವಾದರೂ, ಯಕ್ಷಗಾನವನ್ನು ಸಂಪ್ರದಾಯ ಚೌಕಟ್ಟಿನೊಳಗೆ ಬೆಳೆಸಿದ ಹಿರಿಯ ಕಲಾವಿದರನ್ನು ಗುರುತಿಸಿ, ಸನ್ಮಾನಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದ ಅಜ್ರಿ ಗೋಪಾಲ ಗಾಣಿಗ ಅವರಿಗೆ ತಲ್ಲೂರ್ಸ್ ಪ್ಯಾಮಿಲಿ ಟ್ರಸ್ಟ್ ಯಕ್ಷ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಮಠದ ದಿವಾನರಾದ ನಾಗರಾಜ ಆಚಾರ್ಯ, ಉದ್ಯಮಿ ಗೋಪಾಲ ಸಿ. ಬಂಗೇರ, ರಂಗಭೂಮಿ ಉಡುಪಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರದೀಪ್‌ಚಂದ್ರ ಕುತ್ಪಾಡಿ, ಗಿರಿಜಾ ಹೆಲ್ತ್ ಕೇರ್ ಆ್ಯಂಡ್ ಸರ್ಜಿಕಲ್‌ನ ರವೀಂದ್ರ ಶೆಟ್ಟಿ, ನಿವೃತ್ತ ರೈಲ್ವೆ ಉದ್ಯೋಗಿ ರಘುನಾಥ ನಾಯಕ್ ಶುಭ ಹಾರೈಸಿದರು.ಶ್ರೀ ಸಿದ್ಧಿವಿನಾಯಕ ಪ್ರಸಾದಿತ ಯಕ್ಷಗಾನ ಮಂಡಳಿಯ ಪ್ರವರ್ತಕ ರಂಜನ್ ಕುಮಾರ್ ಶೆಟ್ಟಿ ವಕ್ವಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಗೀತ ವಿದ್ವಾನ್ ಪಾಡಿಗಾರ್ ಲಕ್ಷ್ಮೀ ನಾರಾಯಣ ಉಪಾಧ್ಯ, ಪುತ್ತಿಗೆ ಮಠದ ರಮೇಶ್ ಭಟ್ ಇದ್ದರು.

PREV

Recommended Stories

ಅಸ್ಸಾಂನಲ್ಲಿ ಯಾವ ಪ್ರತಿಭೆ ಇದೆ ಎಂದು ಹೂಡಿಕೆ? : ಪ್ರಿಯಾಂಕ್‌
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ