ಚನ್ನಗಿರಿ: 5ರಂದು ತಾಲೂಕು ಶಾಮಿಯಾನ ಸೌಂಡ್ಸ್, ಡೆಕೋರೇಷನ್, ದೀಪಾಲಂಕಾರ ಸಂಘ ಉದ್ಘಾಟನೆ

KannadaprabhaNewsNetwork |  
Published : Aug 01, 2025, 11:45 PM IST
ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತೀರುವ ತಾಲೂಕು ಶಾಮಿಯಾನ, ಸೌಂಡ್ಸ್, ಡೆಕೋರೇಷನ್ ಹಾಗೂ ದೀಪಾಲಂಕಾರ ಸಂಘದ ತಾಲೂಕು ಅಧ್ಯಕ್ಷ ಸಿ.ಬಿ.ಜಗದೀಶ್ | Kannada Prabha

ಸಾರಾಂಶ

ತಾಲೂಕು ಶಾಮಿಯಾನ ಸೌಂಡ್ಸ್, ಡೆಕೋರೇಷನ್ ಹಾಗೂ ದೀಪಾಲಂಕಾರ ಸಂಘ ಉದ್ಘಾಟನಾ ಸಮಾರಂಭ ಆ.5ರಂದು ಪಟ್ಟಣದ ಶ್ರೀ ವಿಠಲ ರುಕ್ಕುಮಾಯಿ ಕಲ್ಯಾಣ ಮಂಟಪದಲ್ಲಿ ಮಧ್ಯಾನ 12 ಗಂಟೆಗೆ ನಡೆಯಲಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಸಿ.ಬಿ.ಜಗದೀಶ್ ಹೇಳಿದ್ದಾರೆ.

- 190 ಅಂಗಡಿಗಳ ಮಾಲೀಕರ ಸಂಘ: ತಾಲೂಕು ಅಧ್ಯಕ್ಷ ಜಗದೀಶ್

- - -

ಚನ್ನಗಿರಿ: ತಾಲೂಕು ಶಾಮಿಯಾನ ಸೌಂಡ್ಸ್, ಡೆಕೋರೇಷನ್ ಹಾಗೂ ದೀಪಾಲಂಕಾರ ಸಂಘ ಉದ್ಘಾಟನಾ ಸಮಾರಂಭ ಆ.5ರಂದು ಪಟ್ಟಣದ ಶ್ರೀ ವಿಠಲ ರುಕ್ಕುಮಾಯಿ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಸಿ.ಬಿ.ಜಗದೀಶ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಸಂಘಟಿತ ಕಾರ್ಮಿಕ ವರ್ಗದಲ್ಲಿ ಕೆಲಸ ಮಾಡುವ ನಾವುಗಳು ಸರ್ಕಾರದ ವಿವಿಧ ಸೌಲಭ್ಯಗಳನ್ನು ಪಡೆಯಲು ಸಂಘಟಿತರಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾಲೂಕಿನಲ್ಲಿರುವ 190 ಶಾಮಿಯಾನ ಸೌಂಡ್ಸ್, ಡೆಕೋರೇಷನ್ ಹಾಗೂ ದೀಪಾಲಂಕಾರದ ಅಂಗಡಿಗಳ ಮಾಲೀಕರು ಒಗ್ಗಟ್ಟಾಗಿ ಈ ಸಂಘ ಸ್ಥಾಪಿಸಲಾಗಿದೆ ಎಂದರು.

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮಿಗಳು ವಹಿಸಲಿದ್ದಾರೆ. ಉದ್ಘಾಟನೆಯನ್ನು ಕ್ಷೇತ್ರದ ಶಾಸಕ ಬಸವರಾಜು ವಿ. ಶಿವಗಂಗಾ, ಮಾಜಿ ಶಾಸಕ ವಡ್ನಾಳ್ ರಾಜಣ್ಣ ನೆರವೇರಿಸುವರು.

ಅಧ್ಯಕ್ಷತೆಯನ್ನು ತಾಲೂಕು ಅಧ್ಯಕ್ಷ ಸಿ.ಬಿ.ಜಗದೀಶ್ ವಹಿಸಲಿದ್ದು, ಗೌರವ ಉಪಸ್ಥಿತಿಯಲ್ಲಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ, ತುಮ್ಕೋಸ್‌ ಅಧ್ಯಕ್ಷ ಎಚ್.ಎಸ್. ಶಿವಕುಮಾರ್, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್, ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಸಮಾರಂಭಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಕನ್ನಡಾಂಬೆಯ ಭಾವಚಿತ್ರವನ್ನು ಅಲಂಕೃತ ಸಾರೋಟಿನಲ್ಲಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿ, ಸಮಾರಂಭ ನಡೆಯುವ ಸ್ಥಳಕ್ಕೆ ತಲುಪಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರಮುಖರಾದ ಪವನ್ ಕುಮಾರ್, ಕುಮಾರಪ್ಪ, ವೆಂಕಟೇಶ್, ಅಫ್ರೋಜ್, ಮೊಟ್ಟೆ ನಿಖಿಲ್ ಹಾಜರಿದ್ದರು.

- - -

-1ಕೆಸಿಎನ್‌ಜಿ1.ಜೆಪಿಜಿ:

ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಶಾಮಿಯಾನ, ಸೌಂಡ್ಸ್, ಡೆಕೋರೇಷನ್, ದೀಪಾಲಂಕಾರ ಸಂಘದ ತಾಲೂಕು ಅಧ್ಯಕ್ಷ ಸಿ.ಬಿ.ಜಗದೀಶ್ ಮಾತನಾಡಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ