ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಕ್ರೀಡಾಂಗಣದ ಒಳಾಂಗಣ ನವೀಕರಣ ಮತ್ತು ಹೊರ ಆವರಣದ ಅಭಿವೃದ್ಧಿ ಕುರಿತಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾಲೂಕು ಕ್ರೀಡಾಂಗಣದ ಒಳಾಂಗಣ ಮತ್ತು ಹೊರಾಂಗಣದ ಅವ್ಯವಸ್ಥೆ ಕುರಿತಂತೆ ಕ್ರೀಡಾಭಿಮಾನಿಗಳು ಈ ಹಿಂದೆ ನನ್ನ ಗಮನ ಸೆಳೆದಿದ್ದರು. ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಅಭಿವೃದ್ಧಿಗೆ ಅಗತ್ಯ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಂಗಣದ ಅಭಿವೃದ್ಧಿಗಾಗಿ ಮೊದಲ ಹಂತದಲ್ಲಿ 7 ಕೋಟಿ ರು. ಅನುದಾನ ಮಂಜೂರು ಮಾಡಿದ್ದಾರೆ. ಅನುದಾನದಲ್ಲಿ ಪ್ರಥಮವಾಗಿ ಕ್ರೀಡಾಂಗಣದ ಒಳಾಂಗಣ ನವೀಕರಣದೊಂದಿಗೆ ಹೈಟೆಕ್ ಸ್ಪರ್ಶ ನೀಡಲಾಗುವುದು ಎಂದು ತಿಳಿಸಿದರು.ಆ ನಂತರ ತೆರೆದ ಕ್ರೀಡಾಂಗಣದ ಸುತ್ತ ಕಾಂಪೌಂಡ್ ನಿರ್ಮಾಣ ಹಾಗೂ ಪ್ರೇಕ್ಷಕರ ಗ್ಯಾಲರಿ ಮೇಲ್ಭಾಗದಲ್ಲಿ ಮಳೆ ಮತ್ತು ಬಿಸಿಲಿನ ರಕ್ಷಣೆ ಪಡೆಯಲು ಅನುಕೂಲವಾಗುವಂತೆ ಮಂಡ್ಯ ಕ್ರೀಡಾಂಗಣದ ಮಾದರಿಯಲ್ಲಿ ಮೇಲ್ಚಾವಣಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ತರುವಾಯು ಕ್ರೀಡಾಂಗಣದ ಸಂಕೀರ್ಣದಲ್ಲಿರುವ ವ್ಯಾಯಾಮ ಶಾಲೆಗೆ ಭೇಟಿ ನೀಡಿದ ಶಾಸಕರು, ವ್ಯಾಯಾಮ ಉಪಕರಣಗಳು ಹಾಗೂ ಕಟ್ಟಡ ಪರಿಶೀಲನೆ ನಡೆಸಿದರು. ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಪೇಟೆ ಬೀದಿ ರಸ್ತೆ ಶೀಘ್ರ ಅಭಿವೃದ್ಧಿ: ಶಾಸಕ ಉದಯ್ : ಮದ್ದೂರು: ಪಟ್ಟಣದ ಪೇಟೆ ಬೀದಿಯಲ್ಲಿ ಗುಂಡಿ ಬಿದ್ದಿರುವ ರಸ್ತೆಯನ್ನು ಶೀಘ್ರ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಉದಯ್ ಭರವಸೆ ನೀಡಿದರು.