ಕನ್ನಡಪ್ರಭ ವಾರ್ತೆ ರಾಮನಗರ
ರಾಮನಗರದ ಚಿಕ್ಕೇಗೌಡನದೊಡ್ಡಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನೆನೆಗುದಿಗೆ ಬಿದ್ದ ಎತ್ತಿನ ಹೊಳೆ ಯೋಜನೆಗೆ ಮರುಜೀವ ಪಡೆಯಲು ದೇವೇಗೌಡರು ಸದನದಲ್ಲಿ ಅಂಗಲಾಚಿ ಬೇಡಿದ್ದಾರೆ. ದೇವೇಗೌಡರ ಹಿರಿತನಕ್ಕೆ ಕೇಂದ್ರ ನಾಯಕರು ಕ್ಲಿಯರೆನ್ಸ್ ಕೊಟ್ಟಿದ್ದಾರೆ. ಮೇಕೆದಾಟು ಯೋಜನೆಗೆ ಕೇಂದ್ರದ ಅನುಮತಿ ಕೊಡಿಸಲು ದೇವೇಗೌಡ ಮತ್ತು ಕುಮಾರಸ್ವಾಮಿ ಬದ್ಧರಾಗಿದ್ದಾರೆ ಎಂದು ತಿಳಿಸಿದರು.
ಸಿದ್ರಾಮಣ್ಣ ಕೇರಳದ ಮುಖ್ಯಮಂತ್ರಿನಾ?:ಮಾನ್ಯ ಸಿದ್ದರಾಮಯ್ಯನವರು ಕೇರಳದ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ? ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಅತಿವೃಷ್ಟಿಯಾಗಿತ್ತು. ಆಗ ರೈತರು ಪರಿಹಾರ ಕೇಳಿದ್ದರು, ಅವರ ಕೂಗು ಸಿದ್ದರಾಮಯ್ಯ ಅವರಿಗೆ ಕೇಳಲಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಗುಡುಗಿದರು.
ರಾಜ್ಯದ ಎರಡು ಬೈ ಎಲೆಕ್ಷನ್ ವಿಚಾರವಾಗಿ ಮಾತನಾಡಿದ ಅವರು, ಎರಡೂ ಕ್ಷೇತ್ರದ ನಾಮಪತ್ರ ಸಲ್ಲಿಕೆ ವೇಳೆ ಜೆಡಿಎಸ್ ನಾಯಕರು ಭಾಗಿಯಾಗಿದ್ದರು. ದೆಹಲಿಯಲ್ಲಿ ಅಧಿವೇಶನ ನಡೆಯುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಕುಮಾರಸ್ವಾಮಿ ಸಹ ಪ್ರಚಾರ ಮಾಡುತ್ತಾರೆ, ಜೆಡಿಎಸ್ ನಾಯಕರು ಕೂಡ ಹೋಗಿ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು.
ಜಿ.ಟಿ.ದೇವೇಗೌಡರು ಜೆಡಿಎಸ್ನಿಂದ ಮತ್ತೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ಕಳೆದ ಬಾರಿ ಜೆಡಿಎಸ್ ಚಿಹ್ನೆಯಲ್ಲಿ ನಿಂತು ಗೆದ್ದಿದ್ದಾರೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಏನು ಮಾಡಬೇಕು ಎಂಬುದನ್ನು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ , ಮುಖಂಡರಾದ ದೊರೆಸ್ವಾಮಿ, ಕೃಷ್ಣಮೂರ್ತಿ (ಕಿಟ್ಟಿ) ,ಚಂದ್ರಣ್ಣ, ಸಂತೋಷ್, ಶ್ರೀಮೂರ್ತಿ, ಮೋಹನ್ , ರವಿ ಮತ್ತಿತರರು ಹಾಜರಿದ್ದರು.-----
ರಾಮನಗರ ತಾಲೂಕಿನ ಕಸಬಾ ಹೋಬಳಿಯ ಚಿಕ್ಕೇಗೌಡನದೊಡ್ಡಿ ಗ್ರಾಮದಲ್ಲಿ ಎಸ್ ಟಿಆರ್ ಆರ್ (ಸ್ಯಾಟಲೈಟ್ ಟೌನ್ ರಿಂಗ್ ರೋಡ್) ಯೋಜನೆಯ ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಿಯನ್ನು ಕಳೆದುಕೊಂಡ ರೈತರನ್ನು ಭೇಟಿ ಮಾಡಿದ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಹವಾಲುಗಳನ್ನು ಆಲಿಸಿದರು.
ರೈತರ ಎಲ್ಲಾ ಮನವಿಗಳಿಗೆ ಸ್ಪಂದಿಸಿ 40 ಜನ ಸದಸ್ಯರನ್ನು ಒಳಗೊಂಡ ನಿಯೋಗವನ್ನು ರಚನೆ ಮಾಡಿ, ಖುದ್ದಾಗಿ ದೆಹಲಿಯಲ್ಲಿ ಕೇಂದ್ರ ಸಚಿವರಾದ ಎಚ್.ಡಿ ಕುಮಾರಣ್ಣನವರನ್ನು ಭೇಟಿ ಮಾಡಿಸುತ್ತೇನೆ. ಭೂಸ್ವಾಧೀನದ ಪರಿಹಾರದ ಹಣವನ್ನ ಶೀಘ್ರವಾಗಿ ಕೇಂದ್ರ ಸರ್ಕಾರದಿಂದ ರೈತರಿಗೆ ಪರಿಹಾರ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದರು.