ತಾಂಡಾ ನಿವಾಸಿಗಳು ಅಭಿವೃದ್ಧಿ ಮಾಡಿದವರ ಪರ ನಿಲ್ಲಿ: ಶಾಸಕ ಜೆ.ಟಿ. ಪಾಟೀಲ

KannadaprabhaNewsNetwork |  
Published : Jun 27, 2025, 12:53 AM IST
 ಬೀಳಗಿ ತಾಲೂಕಿನ ಸುನಗ ಎಲ್.ಟಿ.1 ಗ್ರಾಮದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಜೆ. ಟಿ. ಪಾಟೀಲ್ ಹಕ್ಕುಪತ್ರ ವಿತರಿಸಿದರು. | Kannada Prabha

ಸಾರಾಂಶ

ತಾಂಡಾಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆ ಹಾಕಿಕೊಳ್ಳಲಾಗಿದ್ದು, ತಾಂಡಾ ವಾಸಿಗಳು ಸಹ ಯಾರು ತಮ್ಮ ಅಭಿವೃದ್ಧಿ ಮಾಡಿದ್ದಾರೆ ಅಂತವರ ಪರವಿರಬೇಕು. ಕಾಂಗ್ರೆಸ್ ಸರ್ಕಾರ ತಾಂಡಾಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಮನವಿ ಮಾಡಿದರು. ತಾಲೂಕಿನ ಸುನಗ ಗ್ರಾಮದಲ್ಲಿ ಕಂದಾಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಸುನಗ ಎಲ್.ಟಿ 1,ಎಲ್.ಟಿ. 2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕನ್ನಡಪ್ರಭ ವಾರ್ತೆ ಬೀಳಗಿ

ತಾಂಡಾಗಳ ಅಭಿವೃದ್ಧಿಗಾಗಿ ಹಲವಾರು ಯೋಜನೆ ಹಾಕಿಕೊಳ್ಳಲಾಗಿದ್ದು, ತಾಂಡಾ ವಾಸಿಗಳು ಸಹ ಯಾರು ತಮ್ಮ ಅಭಿವೃದ್ಧಿ ಮಾಡಿದ್ದಾರೆ ಅಂತವರ ಪರವಿರಬೇಕು. ಕಾಂಗ್ರೆಸ್ ಸರ್ಕಾರ ತಾಂಡಾಗಳ ಅಭಿವೃದ್ಧಿಗಾಗಿ ಸಾಕಷ್ಟು ಯೋಜನೆ ಜಾರಿಗೊಳಿಸಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರು, ಶಾಸಕರಾದ ಜೆ.ಟಿ. ಪಾಟೀಲ ಮನವಿ ಮಾಡಿದರು.

ತಾಲೂಕಿನ ಸುನಗ ಗ್ರಾಮದಲ್ಲಿ ಕಂದಾಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಸುನಗ ಎಲ್.ಟಿ 1,ಎಲ್.ಟಿ. 2, ಕುಂದರಗಿ ಎಲ್.ಟಿ ಗ್ರಾಮಗಳ ಹಕ್ಕುಪತ್ರ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಲವಾರು ವರ್ಷಗಳಿಂದ ತಾಂಡಾಗಳು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗಿತ್ತು. ಸದ್ಯ ಅಂತಹ ತಾಂಡಾಗಳ ನಿವಾಸಿಗಳಿಗೆ ಸರ್ಕಾರದಿಂದ ಹಕ್ಕುಪತ್ರ ನೀಡಲಾಗಿದ್ದು, ಅವುಗಳನ್ನು ಸುರಕ್ಷಿತವಾಗಿ ಇಟ್ಟುಕೊಂಡು ಕಂದಾಯ ಇಲಾಖೆ ನೀಡುವ ಸಲಹೆಯಂತೆ ನೋಂದಣಿ ಮಾಡಿಸಿಕೊಳ್ಳಿ ಎಂದ ಅವರು, ಎಂದ ಅವರು, ತಾಂಡಾಗಳ ಯುವಕರು ದುಶ್ಚಟಗಳಿಂದ ದೂರವಿದ್ದು, ಉತ್ತಮ ಶಿಕ್ಷಣ ಪಡೆದು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಲಹೆ ನೀಡಿದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಇನ್ಮುಂದೆ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆಯಾಗುತ್ತೇವೆ. ಶಾಸಕರ ನಿಯಂತ್ರಣವಿಲ್ಲ ಎಂದುಕೊಳ್ಳಬೇಡಿ. ನಿಮ್ಮ ಕಾರ್ಯವೈಖರಿಯನ್ನು ಪ್ರತಿಕ್ಷಣವೂ ಗಮನಿಸುತ್ತಿರುತ್ತೇನೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಎಂದು ಪಿಡಿಒ ಡಿ.ಆರ್. ಅಡವಿ ಅವರಿಗೆ ಕಿವಿಮಾತು ಹೇಳಿದರು.

ತಹಸೀಲ್ದಾರ್ ವಿನೋದ ಹತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಕ್ಕುಪತ್ರಗಳನ್ನು ಸುರಕ್ಷಿತವಾಗಿ ಹಾಗೂ ಜಾಗರೂಕತೆಯಿಂದ ಇಟ್ಟುಕೊಳ್ಳಲು ಸಾರ್ವಜನಿಕರಿಗೆ ಸಲಹೆ ನೀಡಿ, ಕುಂದರಗಿ ಎಲ್.ಟಿ 1. ಗ್ರಾಮದ 202 ಹಾಗೂ ಸುನಗ ಎಲ್.ಟಿ.1 ಮತ್ತು 2 ಸೇರಿ 704 ಒಟ್ಟು 906 ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.

ಗ್ರಾಮದ ಮುಖಂಡ ಶಂಕರ ಕಾರಬಾರಿ ಮಾತನಾಡಿ, ಇಲ್ಲಿಯವರೆಗೆ ತಾಂಡಾಗಳಿಗೆ ಯಾವುದೆ ದಾಖಲಾತಿ ಇರಲಿಲ್ಲ. ಶಾಸಕರ ಮುತುವರ್ಜಿಯಿಂದ ಸರ್ಕಾರ ಹಕ್ಕುಪತ್ರ ವಿತರಿಸಿದ್ದು, ಸಂತಸವುಂಟು ಮಾಡಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಪವಿತ್ರಾ ದಳವಾಯಿ ಹಾಗೂ ಅನಗವಾಡಿ ಗ್ರಾಮ ಪಂಚಾಯತಿ ಸದಸ್ಯರಾದ ರಸೂಲ್ ಮುಜಾವರ, ಸಂಗಪ್ಪ ಕಂದಗಲ್ಲ, ಸಿದ್ದಪ್ಪ ದಳವಾಯಿ, ಕುಮಾರ ಲಮಾಣಿ, ರವಿ ಲಮಾಣಿ, ನಾರಾಯಣ ಲಮಾಣಿ, ಮಂಜುನಾಥ ಧರೆಗೊಂಡ, ಪಿಡಿಒ ಡಿ.ಆರ್.ಅಡವಿ ಇತರರು ಇದ್ದರು. ನನ್ನ ಅಧಿಕಾರವಧಿಯ ಉಳಿದ ಮೂರು ವರ್ಷಗಳಲ್ಲಿ ಅಧಿಕಾರಿಗಳೊಂದಿಗೆ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳೀಯ ಸಮಸ್ಯೆಗಳನ್ನು

ಸಾಧ್ಯವಾದಷ್ಟು ಸ್ಥಳದಲ್ಲೇ ಬಗೆಹರಿಸಲು ಪ್ರಯತ್ನಿಸುವೆ. ಕಂದಾಯ ಇಲಾಖೆ, ತಾಪಂ ಇಒ ಅವರ ತಂಡ ಪ್ರತಿ ತಾಂಡಾಗಳಿಗೆ ಭೇಟಿ ನೀಡಿ ರೇಷನ್ ಕಾರ್ಡ್, ಹಕ್ಕುಪತ್ರ , ಸೌಲಭ್ಯಗಳ ಕುರಿತಾಗಿ ಪರಿಶೀಲನೆ ಮಾಡಲಿದ್ದಾರೆ.

ಜೆ.ಟಿ. ಪಾಟೀಲ ಶಾಸಕರು ಬೀಳಗಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ