ಟ್ಯಾಂಕರ್ ಪಲ್ಟಿ, ಡೀಸೆಲ್‌ ಸೋರಿಕೆ; ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌

KannadaprabhaNewsNetwork |  
Published : Jan 15, 2025, 12:46 AM IST
11 | Kannada Prabha

ಸಾರಾಂಶ

ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ದವು. ಬಳಿಕ ಸ್ಥಳದಲ್ಲಿದ್ದ ಟ್ರಾಫಿಕ್ ಎಸ್.ಐ ಸುತೇಶ್ ಅವರು ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿದ ನಂತರ ಟ್ರಾಫಿಕ್ ಜಾಮ್‌ ಸುಗಮಗೊಳಿಸಿದರು.

ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್‌ ಲೋಡ್ ಟ್ಯಾಂಕರ್ ಒಂದು ಪಲ್ಟಿಯಾಗಿ ಡೀಸೆಲ್‌ ಸೋರಿಕೆಯಾದ ಘಟನೆ ನಡೆಯಿತು. ಘಟನೆಯಿಂದ ಗಂಟೆಗಳಿಗೂ‌ ಅಧಿಕ ಹೊತ್ತು ಸಂಚಾರಕ್ಕೆ ಅಡಚಣೆಯಾಗಿತ್ತು. ಟ್ಯಾಂಕರ್ ಪಲ್ಟಿಯಾದ ಘಟನೆಯಲ್ಲಿ ಚಾಲಕನಿಗೆ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಮಂಗಳೂರಿನಿಂದ ಚೆನ್ನೈಗೆ ಡೀಸೆಲ್ ತುಂಬಿಸಿಕೊಂಡು ಹೋಗುತ್ತಿದ್ದ ಚಾಲಕ ಕಲ್ಲಡ್ಕ ಸರ್ವೀಸ್ ರೋಡ್‌ನಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಎಡವಟ್ಟು ಮಾಡಿಕೊಂಡು ಕೊನೆಗೆ ಚರಂಡಿಗೆ ಪಲ್ಟಿಯಾಗಿದೆ. ಪಲ್ಟಿಯಾದ ಕೂಡಲೇ ಟ್ಯಾಂಕರ್‌ನಲ್ಲಿ ಸಣ್ಣದಾದ ತೂತು ಆಗಿದ್ದು, ಡೀಸೆಲ್‌ ಸೋರಿಕೆ ಕಂಡುಬಂದಿದೆ. ಹಾಗಾಗಿ ಕೆಲ ಹೊತ್ತು ಕಲ್ಲಡ್ಕ ಪರಿಸರದಲ್ಲಿ ಆತಂಕದ ವಾತವರಣ ನಿರ್ಮಾಣವಾಗಿತ್ತು.ಜೊತೆಗೆ ಕಾಮಗಾರಿ ನಡೆಯುತ್ತಿದ್ದ ಕಾರಣಕ್ಕೆ ಇಲ್ಲಿ ಮೊದಲೇ ವಾಹನಗಳು ಸಂಚಾರ ಮಾಡುವುದು ಸಂಕಷ್ಟದ ಸ್ಥಿತಿಯಲ್ಲಿ. ಇದೀಗ ಲಾರಿ ಪಲ್ಟಿಯಾದ ಕಾರಣ ಸುಮಾರು ಒಂದು ಗಂಟೆಗಳ ಕಾಲ ವಾಹನಗಳು ಅಲ್ಲೇ ಬಾಕಿಯಾಗಿದ್ದವು. ಬಳಿಕ ಸ್ಥಳದಲ್ಲಿದ್ದ ಟ್ರಾಫಿಕ್ ಎಸ್.ಐ ಸುತೇಶ್ ಅವರು ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿದ ನಂತರ ಟ್ರಾಫಿಕ್ ಜಾಮ್‌ ಸುಗಮಗೊಳಿಸಿದರು. ಮಧ್ಯಾಹ್ನ ಸುಮಾರು 12 ಗಂಟೆ ವೇಳೆ ಘಟನೆ ನಡೆದಿದ್ದು, 1.30ರ ವರೆಗೆ ಟ್ರಾಫಿಕ್ ವ್ಯತ್ಯಾಸ ಕಂಡು ಬಂದಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ