ಕನ್ನಡಪ್ರಭ ವಾರ್ತೆ ಮದ್ದೂರು
ಸಭೆಯಲ್ಲಿ ಬಹುತೇಕ ಮುಖಂಡರು ಮತ್ತು ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ಮಾತನಾಡಿ, ಸೆ.23 ರಂದು ನಡೆಯುವ ಟಿಎಂಪಿಸಿಎಂಎಸ್ ಚುನಾವಣೆ ವೇಳೆ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವಂತೆ, ಅಗತ್ಯ ಸಿದ್ಧತೆ ಕುರಿತಾಗಿ ಚರ್ಚಿಸಲಾಯಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕರದ ತಾಲೂಕು ಅಧ್ಯಕ್ಷ ಬಿ.ಬಸವರಾಜು ಮಾತನಾಡಿ, ಟಿಎಪಿಸಿಎಸ್ ಚುನಾವಣೆ ಮುಂಬರುವ ಜಿಪಂ, ತಾಪಂ, ನಗರಸಭೆ ಮತ್ತು ಗ್ರಾಪಂ ಚುನಾವಣೆಗಳಿಗೆ ಮೆಟ್ಟಿಲಾಗಿದೆ. ಕಾರ್ಯಕರ್ತರಿಗೆ ಶಕ್ತಿ ತುಂಬಿರುವ ಶಾಸಕ ಕೆ.ಎಂ.ಉದಯ್ ಅವರ ಅಭಿವೃದ್ದಿ ಕಾರ್ಯಗಳ ಪರಿಗಣನೆ ಮೂಲಕ ಮತದಾರರನ್ನು ಮನವೊಲಿಸುವ ಕಾರ್ಯ ಪ್ರತಿಯೊಬ್ಬರಿಂದಲೂ ಆಗಬೇಕು ಎಂದರು.ಶಾಸಕ ಕೆ.ಎಂ.ಉದಯ್ ಮಾತನಾಡಿ, ಮುಂದಿನ ಚುನಾವಣೆಗಳಲ್ಲಿ ಪ್ರತಿಯೊಬ್ಬರಿಗೂ ಪಕ್ಷದಲ್ಲಿ ಅವಕಾಶ, ಹಿರಿಯ-ಕಿರಿಯ ಕಾರ್ಯಕರ್ತರಿಗೆ, ಮುಖಂಡರಿಗೆ ಜವಾಬ್ದಾರಿಗಳು ತಾನಾಗಿಯೇ ಒದಗಿ ಬರಲಿವೆ. ಚುನಾವಣೆಯಲ್ಲಿ ಟಿಕಿಟ್ ಸಿಗಲಿ, ಸಿಗದಿರಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನ ಶಕ್ತಿ ತುಂಬುವಂತೆ ಮನವಿ ಮಾಡಿದರು.
ಸೆ.14 ರಿಂದ ಒಂದು ವಾರಗಳ ಕಾಲ ನಗರದ ಸರಕಾರಿ ಕ್ರೀಡಾಂಗಣದಲ್ಲಿ ಮದ್ದೂರು ಗಣೇಶೋತ್ಸವವನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಮನ್ಮುಲ್ ಅಧ್ಯಕ್ಷ ಹರೀಶ್ಬಾಬು ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ಅಜ್ಜಹಳ್ಳಿ ರಾಮಕೃಷ್ಣ ಮಾತನಾಡಿದರು. ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಮಮತಾ ಶಂಕರೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಲುವರಾಜು, ಅಣ್ಣೂರು ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಜೋಗಿಗೌಡ, ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ಎಸ್ಸಿ.ಎಸ್ಟಿ. ವಿಭಾಗದ ತಾಲೂಕು ಅಧ್ಯಕ್ಷ ಮಹದೇವಯ್ಯ ಇತರರಿದ್ದರು.