ಬಂಗಾರಪೇಟೆ: ಇದೇ ತಿಂಗಳು ೧೨ರಂದು ನಡೆಯಲಿರುವ ಟಿಎಪಿಸಿಎಂಎಸ್ ಚುನಾವಣೆಯನ್ನು ಎನ್ಡಿಎ ಮೈತ್ರಿಕೂಟ ಪ್ರತಿಷ್ಠೆಯಾಗಿ ಸ್ವೀಕರಿಸಿ ಚುನಾವಣೆ ಎದುರಿಸಲು ಸಿದ್ಧವಾಗಿದ್ದು ೧೨ ಸ್ಥಾನಗಳನ್ನೂ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಮಹೇಶ್ ಹೇಳಿದರು.
ಅಲ್ಲದೆ ಪ್ರಧಾನಿ ನರೇಂದ್ರ ಮೋದಿಯವರ ಮುಖ ನೋಡಿ ರೈತರು ಎನ್ಡಿಎ ಬೆಂಬಲಿತ ಅಭ್ಯರ್ಥಿಗಳ ಪರ ನಿಲ್ಲುವುದು ಖಚಿತ. ಅಷ್ಟರ ಮಟ್ಟಿಗೆ ಕ್ಷೇತ್ರದಲ್ಲಿ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯಗಳಿಸಿರುವುದು, ಆದ್ದರಿಂದ ಮತದಾರರು ಆಡಳಿತ ಪಕ್ಷದ ಬೆಂಬಲಿತರ ಆಸೆ, ಆಮಿಷಗಳಿಗೆ ಮರುಳಾಗದೇ ರೈತರ ಸಂಸ್ಥೆಯನ್ನು ಉಳಿ ಬೆಳೆಸಿದವರನ್ನು ನೆನೆದು ಅವರ ಕೈಗೆ ಆಡಳಿತ ನೀಡಿದರೆ ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವುದರಲ್ಲಿ ಅನುಮಾನವಿಲ್ಲ ಎಂದರು.
ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಮಾರ್ಕಂಡೇಗೌಡ, ಬಾಲಚಂದ್ರ, ಎಚ್.ಆರ್.ಶ್ರೀನಿವಾಸ್, ಸೀತಾರಾಮಪ್ಪ, ಸತೀಶ್ ಗೌಡ, ರಾಮಪ್ಪ, ಯೂನಿಯನ್ ನಿರ್ದೇಶಕರಾದ ಹನುಮಂತು, ಮಂಜುನಾಥ್, ಹಯನ್ಕುಂದ ವೆಂಕಟೇಶ್, ಚೌಡಪ್ಪ, ದೇವರಾಜ್ ಇತರರು ಇದ್ದರು.