ಟಿಎಪಿಸಿಎಂಎಸ್ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಥಾಪಿಸಲು ಕ್ರಮ: ಸಂಸದ

KannadaprabhaNewsNetwork |  
Published : Jun 20, 2025, 12:34 AM IST
ಟಿ.ಎ.ಪಿ.ಸಿ.ಎಂ.ಎಸ್.ಗೆ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಪಾಪಿಸಲು ಕ್ರಮ ವಹಿಸಲಾಗುವುದು- ಸಂಸದ ಕೋಟ ಶ್ರೀನಿವಾಸ ಪೂಜಾರಿ | Kannada Prabha

ಸಾರಾಂಶ

ತರೀಕೆರೆ ಪಟ್ಟಣದ ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ ಕೈಬಿಡಲು ಉದ್ದೇಶಿಸಿರುವ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಪಟ್ಟಣದ ಟಿಎಪಿಸಿಎಂಎಸ್ ನಿಂದ ನಡೆದ ಸನ್ಮಾನ ಸಮಾರಂಭ

ಕನ್ನಡಪ್ರಭ ವಾರ್ತೆ, ತರೀಕೆರೆ

ಪಟ್ಟಣದ ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ ಕೈಬಿಡಲು ಉದ್ದೇಶಿಸಿರುವ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಥಾಪಿಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಗುರುವಾರ ಪಟ್ಟಣದ ಟಿಎಪಿಸಿಎಂಎಸ್ ನಿಂದ ನಡೆದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಸಹಕಾರಿ ಕ್ಷೇತ್ರಕ್ಕೆ ಹೆಚ್ಚು ಶಕ್ತಿ ಕೊಡಲು ಸಹಕಾರಿ ಕಾಯ್ದೆಯನ್ನು ಜಾರಿಗೆ ತರಲಾಗಿದೆ. 30 ಕೋಟಿ ಜನರು ಒಂದಲ್ಲಾ ಒಂದು ರೀತಿಯಲ್ಲಿ ಸಹಕಾರಿ ಕ್ಷೇತ್ರದಲ್ಲಿ ಇದ್ದಾರೆ. ತರೀಕೆರೆ ಟಿಎಪಿಸಿಎಂಎಸ್ ಮಾದರಿ ಸಂಸ್ಥೆಯಾಗಿದ್ದು ಜನಸಾಮಾನ್ಯರ ಸಂಸ್ಥೆ ಆಗಿದೆ. ಸಹಕಾರಿ ಸಂಸ್ಥೆಗಳಿಗೆ ಸಹಾಯ ಮಾಡುವುದು ನಮ್ಮ ಜವಾಬ್ದಾರಿ ಎಂದ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.

ಟಿಎಪಿಸಿಎಂಎಸ್ ಆಧ್ಯಕ್ಷ ಎಲ್.ಎಸ್.ಶಿವಯೋಗಿ ಮಾತನಾಡಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅತ್ಯಂತ ಸರಳ ವ್ಯಕ್ತಿ, ಆಸಾಧಾರಣವಾದ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ. ಟಿಎಪಿಸಿಎಂಎಸ್ ನಿಂದ ಕೈಬಿಡಲು ಉದ್ದೇಶಿಸಿರುವ ನ್ಯಾಯಬೆಲೆ ಅಂಗಡಿಗಳನ್ನು ಮರುಸ್ಥಾಪಿಸಿಕೊಡಬೇಕು ಎಂದು ಮನವಿ ಮಾಡಿದರು.ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಎಂ.ನರೇಂದ್ರ ಮಾತನಾಡಿ ಅಭಿವೃದ್ಧಿ ಕಾರ್ಯಗಳಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಟಿ.ಎ.ಪಿ.ಸಿ.ಎಂ.ಎಸ್.ನಿಂದ ಕೈಬಿಡಲು ಉದ್ದೇಶಿಸಿರುವ ಪಡಿತರ ವಿತರಣೆಯ ನ್ಯಾಯಬೆಲೆ ಅಂಗಡಿಗಳನ್ನು ಪುನಹ ನಮ್ಮ ಸಂಘದಲ್ಲಿ ಮುಂದುವರಿಸಿಕೊಡಲು ಅನುಮತಿ ದೊರಕಿಸಿಕೊಡಬೇಕೆಂದು ಮನವಿ ಮಾಡಿದರು.

ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್, ಟಿಎಪಿಸಿಎಂಎಸ್‌ ನಿರ್ದೇಶಕ, ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್, ತಾಲೂಕು ಬಿಜೆಪಿ ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಮುಖಂಡರಾದ ವಸಂತ ಕುಮಾರ್, ಕಲ್ಮರುಡಪ್ಪ, ರಾಜೇಶ್ವರಿ ರಾಜಶೇಖರ್, ರಾಜಶೇಖರ್ ಮತ್ತಿತರರು ಭಾಗವಹಿಸಿದ್ದರು.

19ಕೆಟಿಆರ್.ಕೆ.19ಃ

ತರೀಕೆರೆಯಲ್ಲಿ ಟಿಎಪಿಸಿಎಂಎಸ್‌ ನಿಂದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಎಲ್.ಎಸ್.ಶಿವಯೋಗಿ, ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತರಾದ ಎಂ.ನರೇಂದ್ರ, ಪುರಸಭೆ ಸದಸ್ಯ ಟಿ.ಎಂ.ಬೋಜರಾಜ್ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ