ಕನ್ನಡಪ್ರಭ ವಾರ್ತೆ ಮಂಡ್ಯ
ತಾಲೂಕಿನ ವಿ.ಸಿ.ಫಾರ್ಮ್ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ನೈಸರ್ಗಿಕ ಕೃಷಿ ಕುರಿತು ಕೃಷಿ ಸಖಿಯರಿಗೆ ಏರ್ಪಡಿಸಿದ್ದ 5 ದಿನಗಳ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ನೈಸರ್ಗಿಕ ಕೃಷಿ ಪದ್ಧತಿಯಲ್ಲಿ ಹೆಚ್ಚಿನ ಉತ್ಪಾದನೆಗಿಂತ ಉತ್ಕೃಷ್ಟ ಗುಣಮಟ್ಟದ ಉತ್ಪನ್ನ ಬೆಳೆಯಬಹುದು. ಈ ಬಗ್ಗೆ ರೈತರಿಗೆ ಪ್ರೇರೇಪಣೆ ನೀಡಬೇಕೆಂದು ಸೂಚಿಸಿದರು.
ಮಂಡ್ಯ ಜಿಲ್ಲೆಯಲ್ಲಿ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನದಡಿ 5 ಗುಚ್ಛ ಗ್ರಾಮಗಳನ್ನು ಪ್ರಮುಖ ನದಿಗಳ ಪಾತ್ರದಲ್ಲಿ ಹಾಗೂ ಉಳಿದ 29 ಗುಚ್ಛ ಗ್ರಾಮಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಬಳಕೆ ಮಾಡುತ್ತಿರುವ ಗ್ರಾಪಂಗಳನ್ನು ಗುರುತಿಸಲಾಗಿದೆ. ಒಟ್ಟು 34 ಗುಚ್ಛ ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಎಂದರು.ಪ್ರತಿ ಗುಚ್ಛಕ್ಕೆ 2 ಕೃಷಿ ಸಖಿ ಸೇರಿದಂತೆ ಒಟ್ಟು 68 ಕೃಷಿ ಸಖಿಯರನ್ನು ಆಯ್ಕೆ ಮಾಡಲಾಗಿದೆ. ಪ್ರತಿ ಗುಚ್ಛದಡಿ 125 ಫಲಾನುಭವಿಗಳಂತೆ 34 ಗುಚ್ಛಗಳಿಗೆ ಒಟ್ಟು 4250 ಫಲಾನುಭವಿಗಳನ್ನು ಆಯ್ಕೆ ಮಾಡಿ ನೈಸರ್ಗಿಕ ಕೃಷಿ ಅಳವಡಿಕೆಗಾಗಿ ಗರಿಷ್ಠ 4 ಸಾವಿರ ರು. ಪ್ರೋತ್ಸಾಹಧನ ನೀಡಲಾಗುವುದು ಎಂದರು.
ಇದೇ ವೇಳೆ ಕೃಷಿ ಸಖಿಯರಿಗೆ ಪ್ರಮಾಣ ಪತ್ರ ವಿತರಿಸಿದ ಅವರು, ಇತ್ತೀಚಿನ ದಿನಗಳಲ್ಲಿ ತರಬೇತಿಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿಲ್ಲ. ಕಾಟಾಚಾರಕ್ಕೆ ಆಯೋಜಿಸುವುದು ಮತ್ತು ಭಾಗವಹಿಸುವುದು ನಡೆಯುತ್ತದೆ. ಆದ್ದರಿಂದಲೇ ನಾನು ಈ ತರಬೇತಿ ಉದ್ಘಾಟನೆ ಮತ್ತು ಸಮಾರೋಪ ಎರಡು ಕಾರ್ಯಕ್ರಮಗಳಿಗೂ ಖುದ್ದು ಹಾಜರಾಗಿ 2 ಗಂಟೆಗಳಿಗೂ ಹೆಚ್ಚು ಕಾಲ ತರಬೇತಿಯಲ್ಲಿ ಭಾಗವಹಿಸಿ ಕೃಷಿ ಸಖಿಯರಿಗೆ ತರಬೇತಿಯ ಕುರಿತು ಪ್ರಶ್ನೆಗಳನ್ನು ಕೇಳಿ ಉತ್ತಮ 3 ಕೃಷಿ ಸಖಿಯರಿಗೆ ಸನ್ಮಾನ ಮಾಡಲಾಗಿದೆ ಎಂದರು.
ತರಬೇತಿಗೆ ಮಾಡಿರುವ ಒಂದು ರುಪಾಯಿ ವ್ಯರ್ಥವಾಗಬಾರದು. ಆ ನಿಟ್ಟಿನಲ್ಲಿ ಕೃಷಿ ಸಖಿಯರು ತರಬೇತಿಯನ್ನು ಸದುಪಯೋಗಪಡಿಸಿಕೊಂಡು ಯೋಜನೆ ಯಶಸ್ವಿ ಅನುಷ್ಟಾನಕ್ಕೆ ಶ್ರಮಿಸಬೇಕು ಎಂದರು.