ಹುಬ್ಬಳ್ಳಿ: ಮಳೆಗಾಲದ ಹಿನ್ನೆಲೆಯಲ್ಲಿ ಅಗತ್ಯ ತುರ್ತು ಕಾರ್ಯಾಚರಣೆಗೆ ಹಾಗೂ ಮುಂಜಾಗ್ರತಿಗಾಗಿ ಹು-ಧಾ ಮಹಾನಗರ ಪಾಲಿಕೆ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಕಾರ್ಯಪಡೆ ರಚಿಸಲಾಗಿದೆ. ತುರ್ತು ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಗೆ ತಕ್ಷಣ ಹಣ ನೀಡಲು ನಿರ್ಧರಿಸಲಾಗಿದೆ ಎಂದು ಮಹಾಪೌರ ರಾಮಪ್ಪ ಬಡಿಗೇರ ಹೇಳಿದರು.
ಪಾಲಿಕೆ, ಅರಣ್ಯ ಇಲಾಖೆ, ಹೆಸ್ಕಾಂ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೊಳಗೊಂಡ ಈ ಕಾರ್ಯಪಡೆಯ ನೇತೃತ್ವವನ್ನು ಪಾಲಿಕೆ ವಲಯ ಸಹಾಯಕ ಆಯುಕ್ತರು ವಹಿಸಿಕೊಳ್ಳಲಿದ್ದಾರೆ. ವಿವಿಧ ವಲಯ ವ್ಯಾಪ್ತಿಯಲ್ಲಿ ಸಂಭವಿಸುವ ತುರ್ತು ಪರಿಸ್ಥಿತಿಯನ್ನು ಈ ಕಾರ್ಯಪಡೆ ನಿಭಾಯಿಸಲಿದೆ. ತುರ್ತು ಪರಿಸ್ಥಿತಿ ನಿಭಾಯಿಸುವ ಉದ್ದೇಶದಿಂದ ಪಾಲಿಕೆಯ ಪ್ರತಿ ಸದಸ್ಯರಿಗೆ ತಲಾ ₹25 ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದರು.
ಮಳೆಗಾಲದ ಹಿನ್ನೆಲೆಯಲ್ಲಿ ಪ್ರತಿ ವರ್ಷ ಮೇ ತಿಂಗಳಿನಿಂದ ಚರಂಡಿ ಸ್ವಚ್ಛತೆ ಸೇರಿದಂತೆ ಇನ್ನಿತರ ಮುಂಜಾಗ್ರತಾ ಕಾರ್ಯ ಕೈಗೊಳ್ಳಲಾಗುತ್ತಿತ್ತು. ಆದರೆ, ಈ ಬಾರಿ ಏಪ್ರಿಲ್ನಿಂದಲೇ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದರು.ಕೈಗಾರಿಕೆ ವಸಾಹತುಗಳಲ್ಲಿನ ಕೈಗಾರಿಕೆ ಕಟ್ಟಡಗಳಿಗೆ ಇ ಸ್ವತ್ತು ನೀಡುವುದಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಈಚೆಗೆ ಸಭೆ ನಡೆದಿದೆ. ಕೈಗಾರಿಕೋದ್ಯಮಿಗಳು ಕೆಐಎಡಿಬಿಗೆ ಸರ್ವೀಸ್ ಚಾರ್ಜ್ ತುಂಬುತ್ತಾರೆ ಅಷ್ಟೇ. ಆದರೆ, ಪಾಲಿಕೆಗೆ ತೆರಿಗೆ ಪಾವತಿಸುವುದು ಕಡ್ಡಾಯ ಎಂದು ತಿಳಿಸಿದರು.
ಗುತ್ತಿಗೆದಾರರು ಸಹಕರಿಸಿ
ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಸೇರಿದಂತೆ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು.39 ದೂರು ಸಲ್ಲಿಕೆ