ಕನ್ನಡಪ್ರಭ ವಾರ್ತೆ ಕನಕಪುರ
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ ಕೈವಾರ ತಾತಯ್ಯನವರ ಜಯಂತಿ ಆಚರಣೆಯಲ್ಲಿ ಭಾಗಿಯಾಗಿ ಶ್ರೀ ತಾತಯ್ಯ ನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕೈವಾರ ತಾತಯ್ಯನವರ ತತ್ವಪದ ಇಂದಿಗೂ ಪ್ರಸ್ತುತ. ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪ್ರಯತ್ನ ಮಾಡಿದವರು. ಅವರ ಆದರ್ಶಗಳನ್ನು ಜನರಿಗೆ ತಲುಪಿಸಲು ಇಂತಹ ಜಯಂತಿಗಳು ಸಹಕಾರಿ ಎಂದು ಹೇಳಿದರು.
ಬಲಿಜ ಸಮುದಾಯದ ಮುಖಂಡ ಹಾಗೂ ಉಪನ್ಯಾಸಕ ಲಕ್ಷ್ಮೀ ನಾರಾಯಣ ಮಾತನಾಡಿ, ತಾತಯ್ಯನವರಂತಹ ಮಹನೀಯರ ಬದುಕು, ತತ್ವ, ಜೀವನ ಮೌಲ್ಯವನ್ನು ಅರಿಯುವುದರ ಜೊತೆಗೆ ಅನುಸರಿಸುವುದರಿಂದ ಮಾನವನ ಬದುಕು ಹಸನಾಗುತ್ತದೆ. ಕೈವಾರ ತಾತಯ್ಯ ಸಮಾಜ ಕಟ್ಟುವ ಕೆಲಸಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ ಮಹಾನ್ ಪುರುಷರಾಗಿದ್ದು ತಮ್ಮ ಕಡೆಯ ಉಸಿರಿರುವವರೆಗೂ ಸಮಾಜದ ಏಳಿಗೆಗಾಗಿ ಶ್ರಮಿಸಿದ ಚಿಂತಕ, ದಾರ್ಶನಿಕರಾಗಿದ್ದಾರೆ, 1726 ರಲ್ಲಿ ಜನಿಸಿ 1836 ರಲ್ಲಿ ನಿಧನರಾದ ತಾತಯ್ಯ ನವರು 110 ವರ್ಷಗಳ ಕಾಲ ಸಾರ್ಥಕ ಬದುಕು ನಡೆಸಿ ಸಮಾಜಕ್ಕೆ ತಮ್ಮ ಕಾಲಜ್ಞಾನದ ಮೂಲಕ ಮೌಲ್ಯಾಧಾರಿತ ಕೊಡುಗೆಯನ್ನು ನೀಡಿ ಹೋಗಿದ್ದಾರೆ ಎಂದರು.ತಾಲೂಕು ಬಲಿಜ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಸ್. ಕೃಷ್ಣ (ಕೋಟೆ ಕಿಟ್ಟಿ) ಮಾತನಾಡಿ, ಬಲಿ ಚಕ್ರವರ್ತಿಯ ಕುಲದವರಾದ ನಮ್ಮ ಜನಾಂಗ ರಾಜ್ಯದಲ್ಲಿ ಸುಮಾರು 50 ರಿಂದ 60 ಲಕ್ಷ ಜನಸಂಖ್ಯೆಯಿದ್ದು ನಮ್ಮ ಸಮುದಾಯದ ಆರಾಧ್ಯ ದೈವವಾಗಿರುವ ಶ್ರೀ ಯೋಗಿ ನಾರಾಯಣ ಜಯಂತಿಯನ್ನು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಹಿಂದಿನ ಸರ್ಕಾರ ಆದೇಶ ಹೊರಡಿಸಿದ್ದರು. ಸಹ ಈಗಿನ ಸರ್ಕಾರ ತಾತಯ್ಯ ನವರ ಜಯಂತಿ ಆಚರಣೆಗೆ ಅಷ್ಟೇನೂ ಆಸಕ್ತಿಯನ್ನು ತೋರಿಸದೇ ಇರುವುದಕ್ಕೆ ಬೇಸರ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಆದರೂ ತಾತಯ್ಯ ನವರ ಜಯಂತಿಯನ್ನು ಇತರೆ ಸಮುದಾಯಗಳ ನಾಯಕರ ಜಯಂತಿಗಳಂತೆ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಮುದಾಗಲಿ ಎಂದು ಮನವಿ ಮಾಡಿದರು.