ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ । ಕರವಸೂಲಿಗಾರರಿಗೆ ಸನ್ಮಾನಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಶೇ.100ರಷ್ಟು ಕರ ವಸೂಲಾತಿ ಮಾಡಿದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಹಾಗೂ ಕರ ವಸೂಲಿಗಾರರಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಕರ ವಸೂಲಾತಿ ಅಂದೋಲನ, ಜಾಗೃತಿ, ಸಮನ್ವಯತೆ, ಯೋಜಿತ ಯೋಜನೆ, ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಜಿಲ್ಲೆಯ ವಿವಿಧ ಗ್ರಾಪಂ ಗಳಲ್ಲಿ ಶೇ.100ರಷ್ಟು ಕರ ವಸೂಲಾತಿ ಮಾಡಿರುವುದು ಉತ್ತಮ ಬೆಳೆವಣಿಗೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಗ್ರಾಪಂ ತೆರಿಗೆಯಿಂದ ಸಂಗ್ರಹಿಸುವ ಆದಾಯವನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುವ ನೌಕರರ ಸಂಬಳ, ಗ್ರಾಮದ ಅಭಿವೃದ್ಧಿಗೆ ಮತ್ತು ಅಲ್ಲಿನ ನಿವಾಸಿಗಳ ಮೂಲಭೂತ ಸೌಕರ್ಯ ಒದಗಿಸಲು ಬಳಸಲಾಗುತ್ತಿದೆ ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಶೇ.100ರಷ್ಟು ಕರ ವಸೂಲಾತಿ ಸಾಧನೆ ತೋರಿದ ಇಂಗಳದಾಳ ಗ್ರಾಪಂ ಪಿಡಿಒ ವಿದ್ಯಾಶ್ರೀ, ಕರ ವಸೂಲಿಗಾರ ಎಚ್.ನಾಗರಾಜ್, ಮಾಡನಾಯಕನ ಹಳ್ಳಿ ಪಿಡಿಒ ಟಿ.ಲಲಿತಾ, ಕರವಸೂಲಿಗಾರ ಎಸ್.ಎನ್.ಮಲ್ಲಿಕಾ, ಮಲ್ಲಾಡಿಹಳ್ಳಿ ಪಿಡಿಒ ಈ.ಚೂಡಾಮಣಿ ಕರವಸೂಲಿಗಾರ ಎಂ.ನವೀನ್ ಕುಮಾರ್, ಗುಂಡೇರಿ ಪಿಡಿಒ ಎಸ್.ಉಷಾ, ಕರವಸೂಲಿಗಾರ ಜಿ.ಕೆ.ಶಿವಕುಮಾರ್, ಮತ್ತೊಡು ಪಿಡಿಒ ಜಿ.ಶೇಖರಪ್ಪ, ಕರ ವಸೂಲಿಗಾರ ಎಸ್.ಈಶ್ವರಪ್ಪ, ಲಕ್ಕಿಹಳ್ಳಿ ಪಿಡಿಒ ಎನ್.ಹನುಮಂತಪ್ಪ, ಕರ ವಸೂಲಿಗಾರ ಕುಮಾರ್, ಕಂಗುವಳ್ಳಿ ಪಿಡಿಒ ಎಸ್.ಗೋವಿಂದ ರಾಜು, ಕರವಸೂಲಿಗಾರ ಟಿ.ಧನಂಜಯ, ಬೋಕಿಕೆರೆ ಪಿಡಿಒ ಬಿ.ಆರ್.ಜಯಣ್ಣ, ಕರ ವಸೂಲಿಗಾರ ಟಿ.ಮಂಜುನಾಥ್, ದೊಡ್ಡ ಉಳ್ಳಾರ್ತಿ ಪಿಡಿಒ ಸುರೇಶ್, ಕರವಸೂಲಿಗಾರ ಬಿ.ಜಯರಾಮ್, ಅಬ್ಬೇನಹಳ್ಳಿ ಪಿಡಿಒ ಎಂ.ಮೋಹನ್ ದಾಸ್, ಕರವಸೂಲಿಗಾರ ಶೇಖರಪ್ಪ ಹಾಗೂ 2024-25ನೇ ಸಾಲಿನಲ್ಲಿ ಕರವಸೂಲಿಯಲ್ಲಿ ಜಿಲ್ಲೆಯಲ್ಲಿ ಶೇ.77.58ರಷ್ಟು ಸಾಧನೆ ಮಾಡಿರುವ ಚಿತ್ರದುರ್ಗ ತಾಪಂ ಇಒ ಅಧಿಕಾರಿ ವೈ.ರವಿಕುಮಾರ್ ಹಾಗೂ ನರೇಗಾ ಸಹಾಯಕ ನಿರ್ದೇಶಕ ಎಚ್.ಯರ್ರಿಸ್ವಾಮಿ ಅವರನ್ನು ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಿದರು.