ಹೊಸಪೇಟೆ: ತುಂಗಭದ್ರಾ ಮಂಡಳಿ ನೌಕರರಿಗೆ ಎರಡು ತಿಂಗಳ ವೇತನ ಮತ್ತು ಪಿಂಚಣಿ ಬಾಕಿ ಉಳಿಸಿಕೊಂಡಿರುವುದನ್ನು ವಿರೋಧಿಸಿ, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಟಿ.ಬಿ.ಬೋರ್ಡ್ ವರ್ಕ್ ಚಾರ್ಜ್ಡ್ ನೌಕರರ ಸಂಘದಿಂದ ಇಲ್ಲಿನ ಟಿಬಿ ಬೋರ್ಡ್ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಮಾಜಿ ಸಚಿವ ಹಾಗೂ ಸಂಘದ ಅಧ್ಯಕ್ಷ ದಿವಾಕರ ಬಾಬು ಮಾತನಾಡಿ, ಈ ಹಿಂದೆ ಯಾವಾಗಲೂ ವೇತನ ವಿಳಂಬವಾಗಿಲ್ಲ. ಆದರೆ, ಕಳೆದ ಎರಡು ತಿಂಗಳಿಂದ ವಿಳಂಬವಾಗಿದ್ದು, ಈವರೆಗೆ ಬಂದಿಲ್ಲ. ಈ ಕುರಿತು ಯಾರಿಂದಲೂ ಸ್ಪಷ್ಟವಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಇದರಿಂದ ನೌಕರರಿಗೆ ದೈನಂದಿನ ಜೀವನ ನಡೆಸಲು ಸಮಸ್ಯೆಯಾಗಿದ್ದು, ಕೂಡಲೇ ವೇತನ ನೀಡಬೇಕು ಎಂದು ಒತ್ತಾಯಿಸಿದರು.
165 ನೌಕರರಿಗೆ ವೇತನ ಬಾಕಿ ಉಳಿದಿದ್ದು, ಕಾರಣ ಏನೆಂದು ಗೊತ್ತಾಗಿಲ್ಲ. ಕೂಡಲೇ ಸಂಬಂಧಪಟ್ಟವರು ಸಮಸ್ಯೆ ಬಗೆಹರಿಸಬೇಕು. ನೌಕರರ ವೇತನ ಬಿಡುಗಡೆ ಮಾಡಿ ಆತಂಕ ದೂರವಾಗಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಟಿಬಿ ಬೋರ್ಡ್ನ ಹಿರಿಯ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಇನ್ನು ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.
ಸಂಘದ ಗೌರವಾಧ್ಯಕ್ಷ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಹಾಗೂ ನೌಕರರು ಇದ್ದರು.
ಹೊಸಪೇಟೆಯ ತುಂಗಭದ್ರಾ ಮಂಡಳಿ ಕಚೇರಿ ಎದುರು ನಡೆದ ಪ್ರತಿಭಟಡನೆಯನ್ನುದ್ದೇಶಿಸಿ ಮಾಜಿ ಸಚಿವ ದಿವಾಕರಬಾಬು ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.