ಮಕ್ಕಳಿಗೆ ನೈತಿಕ ಶಿಕ್ಷಣ, ಸಂಸ್ಕಾರ ಕಲಿಸಿ

KannadaprabhaNewsNetwork |  
Published : Jun 02, 2025, 12:18 AM IST
ಹೊನ್ನಾಳಿ ಫೋಟೋ 1ಎಚ್.ಎಲ್.ಐ1. ಪಟ್ಟಣದ ಹೊರವಲಯದ ಬಲಮುರಿ ಕ್ರಾಸ್‌ನ ಆದಿತ್ಯ ಗುರುಕುಲಂ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಹೊಸ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮವನ್ನುಕೊಪ್ಪಳ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರಪ ಸ್ವಾಮಿಜಿ  ಉದ್ಘಾಟಿಸಿ  ಆಶೀರ್ವಚನ ನೀಡಿದರು.ಸಂಸ್ಥೆಯ ಅಧ್ಯಕ್ಷ ಮರಿಗೌಡ, ಗಣ್ಯರು ಇದ್ದರು,   | Kannada Prabha

ಸಾರಾಂಶ

ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದ್ದಾರೆ.

- ಆದಿತ್ಯ ಗುರುಕುಲಂ ಶಾಲೆ ಕಾರ್ಯಕ್ರಮದಲ್ಲಿ ಅಭಿನವ ಗವಿಸಿದ್ದೇಶ್ವರ ಶ್ರೀ ಸಲಹೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಮಕ್ಕಳಿಗೆ ಶಾಲೆ ಮತ್ತು ಮನೆಯಲ್ಲಿ ಕಡ್ಡಾಯವಾಗಿ ನೈತಿಕ ಶಿಕ್ಷಣವನ್ನು ಕಲಿಸಬೇಕು. ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಇಂದಿನ ದಿನಗಳಲ್ಲಿ ಅತ್ಯಗತ್ಯವಾಗಿದೆ ಎಂದು ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ನುಡಿದರು.

ಪಟ್ಟಣದ ಹೊರವಲಯದ ಬಲಮುರಿ ಕ್ರಾಸ್‌ನ ಆದಿತ್ಯ ಗುರುಕುಲಂ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಮತ್ತು ಹೊಸ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಅಕ್ಷರಾಭ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.

ದೇಶಪ್ರೇಮ, ಗುರು-ಹಿರಿಯರನ್ನು ಗೌರವಾದರಗಳಿಂದ ನೋಡಿಕೊಳ್ಳುವಂತಹ ನೈತಿಕ ಶಿಕ್ಷಣವನ್ನು ಶಾಲೆ ಮತ್ತು ಮನೆಯಲ್ಲಿ ಕಲಿಸುವ ಪರಿಪಾಠ ಬೆಳೆಸಿಕೊಳ್ಳುವುದು ಅನಿವಾರ್ಯ. ಚಲನಚಿತ್ರ ನಟರು, ಕ್ರಿಕೆಟ್ ಆಟಗಾರರು ಮತ್ತು ಸೆಲೆಬ್ರೆಟಿಗಳನ್ನು ಇಂದಿನ ಯುವಪೀಳಿಗೆ ಆರಾಧನೆ ಮತ್ತು ಅನುಕರಣೆ ಮಾಡುತ್ತಿರುವುದಕ್ಕೆ ಸಮಾಜ ಅಧಃಪತನದತ್ತ ಹೋಗುತ್ತಿದೆ ಎಂದು ವಿಷಾದಿಸಿದರು.

ಮಾಜಿ ಸಂಸದ ಆಯನೂರು ಮಂಜುನಾಥ್ ಮಾತನಾಡಿ, ಜಿ.ಮರಿಗೌಡ ಅವರು ಶಿಕ್ಷಣ ಪ್ರೇಮಿಗಳು. ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಸದುದ್ದೇಶದಿಂದ ಆದಿತ್ಯ ಗುರುಕುಲಂ ಶಾಲೆ ಪ್ರಾರಂಭ ಮಾಡಿದ್ದಾರೆ. ಸುಸಜ್ಜಿತ ಕಟ್ಟಡ ನಿರ್ಮಾಣದ ಜೊತೆಗೆ ನಾಗಾಲ್ಯಾಂಡ್, ಕೇರಳಗಳಿಂದ ತರಬೇತಿ ಹೊಂದಿದ ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣದ ವ್ಯವಸ್ಥೆ ಮಾಡುತ್ತಿದ್ದಾರೆ. ಪೋಷಕರು ಹೆಚ್ಚಾಗಿ ಈ ಸಂಸ್ಥೆಗೆ ಸಲಹೆ- ಸಹಕಾರ ನೀಡಬೇಕೆಂದು ವಿನಂತಿಸಿದರು.

ಸಂಸ್ಥೆ ಅಧ್ಯಕ್ಷ ಜಿ.ಮರಿಗೌಡ ಮಾತನಾಡಿ, ಕಳೆದ ವರ್ಷ ನಮ್ಮ ಶಾಲೆ ಶಾಲಾ ವಾರ್ಷಿಕೋತ್ಸವಕ್ಕೆ ಸ್ವಾಮೀಜಿಗಳು ವಿದೇಶ ಪ್ರವಾಸದಲ್ಲಿದ್ದ ಕಾರಣ ಬರಲಾಗಲಿಲ್ಲ. ಇಂದು ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿಗಳ ಪಾದಸ್ಪರ್ಶದಿಂದ ನಮ್ಮ ಶಾಲೆ ಪಾವನವಾಗಿದೆ. ನುರಿತ ಶಿಕ್ಷಕರ ತಂಡದಿಂದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುತ್ತಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ ಎಂದರು.

ಶಾಲೆಗೆ ನೂತನವಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ಡಾಮೀಜಿ ಅಕ್ಷರಾಭ್ಯಾಸ ಮಾಡಿಸಿದರು. ಶಿವಮೊಗ್ಗದ ಜಿಪಂ ಮಾಜಿ ಅಧ್ಯಕ್ಷ ಬಸವರಾಜಪ್ಪ, ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಮುಖಂಡ ನಾಗರಾಜ್, ಮುಖಂಡರಾದ ಎಚ್.ಎ. ಉಮಾಪತಿ, ಸಣ್ಣಕ್ಕಿ ಬಸವನಗೌಡ, ಗುಳೇದಹಳ್ಳಿ ವಿಶ್ವನಾಥ ಗೌಡ ಪಾಟೀಲ್, ಸಂಸ್ಥೆಯ ಪ್ರಾಂಶುಪಾಲ ಪರಮೇಶ್, ನಿವೃತ್ತ ಪ್ರಾಂಶುಪಾಲ ಡಿ.ಪಿ. ರಂಗನಾಥ್, ಎಡಿವಿಎಸ್ ಸಂಸ್ಥೆ ಪ್ರಾಂಶುಪಾಲ ಎಚ್.ಬಿ. ಗಣಪತಿ, ಹರ್ಲಕಟ್ಟಿ ಶಿವಕುಮಾರ್, ಅಂದಾನಿ ಗಂಗಾಧರ್, ಕೋರಿ ಪುಟ್ಟಣ್ಣ, ಕೋರಿ ಚನ್ನೇಶ್, ಜಗದೀಶ್ ಮತ್ತು ಮಕ್ಕಳ ಪೋಷಕರು ಉಪಸ್ಥಿತರಿದ್ದರು.

- - -

-1ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ಪಟ್ಟಣದ ಬಲಮುರಿ ಕ್ರಾಸ್‌ನ ಆದಿತ್ಯ ಗುರುಕುಲಂ ಶಾಲೆಯಲ್ಲಿ 2025-26ನೇ ಸಾಲಿನ ಶಾಲಾ ಪ್ರಾರಂಭೋತ್ಸವ, ಹೊಸ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ