ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶಿವಮೊಗ್ಗ ತಾಲೂಕಿನ ಸಂತೆಕಡೂರಿನ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯದಲ್ಲಿ ಪೋಷಕರ ಸಂಘದಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲಕ್ಕೆ ಹೋಲಿಸಿದರೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬಹಳಷ್ಟು ಬದಲಾವಣೆಗಳಾಗಿವೆ. ಆದರೆ, ಗುರುವಿನ ಸ್ಥಾನ ಯಾವತ್ತಿಗೂ ಮಹತ್ವಪೂರ್ಣವಾಗಿಯೇ ಇದೆ. ಗುರುವಿನ ಮಾರ್ಗದರ್ಶನದಲ್ಲಿ ಮುನ್ನಡೆದವರು ಯಶಸ್ಸು ಗಳಿಸುತ್ತಾರೆ ಎಂದರು.ಕೇಂದ್ರೀಯ ವಿದ್ಯಾಲಯ ಅತ್ಯುತ್ತಮ ಶೈಕ್ಷಣಿಕ ವ್ಯವಸ್ಥೆಯನ್ನು ಹೊಂದಿದೆ. ಇಲ್ಲಿ ಶಿಕ್ಷಣ ಎಂಬುದು ನಾಲ್ಕು ಗೋಡೆಗಳ ನಡುವಿನ ಕೊಠಡಿಗೆ ಸೀಮಿತವಾಗಿಲ್ಲ. ದೇಶ ಮತ್ತು ಜಗತ್ತಿನ ದರ್ಶನ ಮಾಡಿಸುವ ಶೈಕ್ಷಣಿಕ ವ್ಯವಸ್ಥೆ ಕೇಂದ್ರೀಯ ವಿದ್ಯಾಲಯದ್ದು ಎಂದು ವಿಶ್ಲೇಷಿಸಿದರು.
ಶಿವಮೊಗ್ಗ ಕೇಂದ್ರೀಯ ವಿದ್ಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪೋಷಕರ ಸಂಘವನ್ನು ಸ್ಥಾಪಿಸಲಾಗಿದೆ. ಪೋಷಕರ ಸಂಘದಿಂದಲೇ ಶಿಕ್ಷಕರ ದಿನಾಚರಣೆಯನ್ನು ಆಯೋಜಿಸಿ ಶಿಕ್ಷಕರು, ಸಿಬ್ಬಂದಿಯನ್ನು ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರ ನಡುವೆ ಉತ್ತಮ ಬಾಂಧವ್ಯ ಬೆಳೆಸುವುದು ಸಂಘದ ಉದ್ದೇಶವಾಗಿದೆ ಎಂದರು.
ಶಾಲೆಯ ಶಿಕ್ಷಕ ವರ್ಗ, ಸಿಬ್ಬಂದಿಯನ್ನು ಪೋಷಕರ ಸಂಘದಿಂದ ಗೌರವಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಸಂಘದ ಪದಾಧಿಕಾರಿಗಳಾದ ಪ್ರಿಯಾ, ಪ್ರಶಾಂತ್, ತೇಜಸ್ವಿನಿ, ರಾಘವೇಂದ್ರ, ಗೋವಿಂದರಾಜ್ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಪೋಷಕರ ಸಂಘದ ಪ್ರಧಾನ ಕಾರ್ಯದರ್ಶಿ ಗೋಸಲ್ ಬಸವರಾಜ್ ಸ್ವಾಗತಿಸಿದರು. ನಿರ್ದೇಶಕರಾದ ನಂದಿನಿ ನಿರೂಪಿಸಿ, ಚೈತ್ರ ವಂದಿಸಿದರು. ಹಿರಿಯ ಶಿಕ್ಷಕಿ ಭಾವನ ಸಿಂಗ್ ಸೇರಿ ಹಲವರು ಉಪಸ್ಥಿತರಿದ್ದರು.