ಶಿಕ್ಷಕಿಯನ್ನು ಅಡ್ಡಗಟ್ಟಿ ಅಪರಿಚಿತರಿಂದ ಚಿನ್ನದ ಸರ ಲೂಟಿ: ದೂರು ದಾಖಲು

KannadaprabhaNewsNetwork |  
Published : Mar 19, 2026, 01:30 AM IST
18ಕೆಎಂಎನ್ ಡಿ27 | Kannada Prabha

ಸಾರಾಂಶ

ಸರಗಳ ಪೈಕಿ ಕೇವಲ 10 ಗ್ರಾಂ ಸರವನ್ನು ಮಾತ್ರ ದುಷ್ಕರ್ಮಿಗಳು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ನಾಗರತ್ನಮ್ಮ ನೀಡಿದ ದೂರಿನ ಅನ್ವಯ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಮದ್ದೂರು

ಸ್ಕೂಟರ್ ನಲ್ಲಿ ತೆರಳುತ್ತಿದ್ದ ಖಾಸಗಿ ಶಾಲಾ ಶಿಕ್ಷಕಿಯನ್ನು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಆಕೆಯ ಕತ್ತಿನಲ್ಲಿದ್ದ ಲಕ್ಷಾಂತರ ರು. ಮೌಲ್ಯದ ಚಿನ್ನದ ಸರವನ್ನು ಲೂಟಿ ಮಾಡಿರುವ ಘಟನೆ ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ನಿಡಘಟ್ಟ ಬಳಿ ಮಂಗಳವಾರ ಸಂಜೆ ಜರುಗಿದೆ.

ತಾಲೂಕಿನ ಕದಲೂರು ಗ್ರಾಮದ ಭೈರವೇಶ್ವರ ಪ್ರೌಢಶಾಲೆ ಮುಖ್ಯ ಶಿಕ್ಷಕಿ ನಾಗರತ್ನಮ್ಮ ಕತ್ತಿನಲ್ಲಿದ್ದ 10 ಗ್ರಾಂ ಚಿನ್ನದ ಸರವನ್ನು ಖದೀಮರು ಅಪಹರಿಸಿ ಪರಾರಿಯಾಗಿದ್ದಾರೆ. ಮೂಲತಃ ನಾಗರತ್ನಮ್ಮ ಮಂಡ್ಯ ನಗರದ ನಿವಾಸಿಯಾಗಿದ್ದು, ಕದಲೂರಿನ ಭೈರವೇಶ್ವರ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಶಾಲೆ ಮುಗಿಸಿ ತಮ್ಮ ಸ್ಕೂಟರ್ ನಲ್ಲಿ ತೆರಳುತ್ತಿದ್ದ ನಾಗರತ್ನಮ್ಮ ಅವರನ್ನು ಹೆಲ್ಮೆಟ್ ಧರಿಸಿ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದ ಅಪರಿಚಿತ ವ್ಯಕ್ತಿಗಳು ಸ್ಕೂಟರ್ ಅಡ್ಡಗಟ್ಟಿ ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿಯಲು ಮುಂದಾದಾಗ ನಾಗರತ್ನಮ್ಮ ಪ್ರತಿರೋಧ ವ್ಯಕ್ತಪಡಿಸಿ ಸರವನ್ನು ರಕ್ಷಣೆ ಮಾಡಿಕೊಳ್ಳಲು ಮುಂದಾಗಿದ್ದಾರೆ.

ಸರಗಳ ಪೈಕಿ ಕೇವಲ 10 ಗ್ರಾಂ ಸರವನ್ನು ಮಾತ್ರ ದುಷ್ಕರ್ಮಿಗಳು ದೋಚಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಸಂಬಂಧ ನಾಗರತ್ನಮ್ಮ ನೀಡಿದ ದೂರಿನ ಅನ್ವಯ ಕೆಸ್ತೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ.

ಎಸ್ಪಿ ಡಾ.ವಿ.ಜೆ.ಶೋಭಾರಾಣಿ, ಎಎಸ್ಪಿ ಎಸ್.ಇ.ಗಂಗಾಧರ ಸ್ವಾಮಿ, ಗ್ರಾಮಾಂತರ ಸಿಪಿಐ ನಾರಾಯಣಿ, ಕೆಸ್ತೂರು ಠಾಣೆ ಪಿಎಸ್ಐ ಶ್ರವಣ್ ಎಸ್. ದಾಸರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಳೆನರಸೀಪುರದಲ್ಲಿ ಯುಗಾದಿ ಹಬ್ಬದ ವ್ಯಾಪಾರ ಬಲು ಜೋರು
ಅವಧಿ ಮುಗಿದ ಅಹಾರ ಸರಬರಾಜು: ಬ್ಲಿಂಕ್‌ಇಟ್ ಗೋದಾಮಿಗೆ ದಾಳಿ