ಕನ್ನಡಪ್ರಭ ವಾರ್ತೆ ಬೇತಮಂಗಲಕೋಲಾರ ತಾಲೂಕು ನರಸಾಪುರದಲ್ಲಿ ರಾಜ್ಯ ಸರ್ಕಾರದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿ ಶಿಕ್ಷಕಿ ಅಕ್ತರ್ಬೇಗಂ(೫೦) ಮೃತದೇಹ ಬೇತಮಂಗಲ ಹೋಬಳಿಯ ಅಯ್ಯಪಲ್ಲಿ ಅಮಾನಿ ಕೆರೆಯಲ್ಲಿ ಪತ್ತೆಯಾಗಿದ್ದಾರೆ.ಟಿ.ಕೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಅಯ್ಯಪಲ್ಲಿ ಅಮಾನಿಕೆರೆಯ ದಡದಲ್ಲಿ ಶಿಕ್ಷಕಿಯ ಬ್ಯಾಕ್ ಪತ್ತೆಯಾಗಿದ್ದು, ಸಾರ್ವಜನಿಕರು ಬ್ಯಾಗನ್ನು ಗಮನಿಸಿ ಕೆರೆ ಕಡೆ ನೋಡಿದಾಗ ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.ಮಾನಸಿಕ ಒತ್ತಡದಿಂದ ಜಿಗುಪ್ಸೆ
ಕಳೆದ ೧೫ ದಿನದಿಂದ ಇದೇ ಒತ್ತಡದಿಂದ ಚಿಂತೆಗೀಡಾಗಿದ್ದು ಅಕ್ತರ್ ಬೇಗಂ ಸೋಮವಾರ ಬೆಳಗ್ಗೆ ಮಗನ ಬೈಕ್ನಲ್ಲಿ ಬಸ್ ನಿಲ್ದಾಣದವರೆಗೆ ಡ್ರಾಪ್ ಪಡೆದುಕೊಂಡಿದ್ದಾರೆ. ಈ ವೇಳೆ ತಮ್ಮ ಮೊಬೈಲ್ನನ್ನು ಮನೆಯಲ್ಲೇ ಬಿಟ್ಟು ಹೋಗಿದ್ದಾರೆ. ಇದನ್ನು ಕಂಡ ಪೋಷಕರು ಮರೆತುಹೋಗಿರಬಹುದು ಎಂದು ಭಾವಿಸಿದ್ದರು. ರಾತ್ರಿಯಾದರೂ ಮನೆಗೆ ವಾಪಸ್ ಬರದೆ ಇದ್ದಾಗ ಕುಟುಂಬದವರು ಗಾಬರಿಗೊಂಡು ಕೋಲಾರ ನಗರ ಠಾಣೆಯಲ್ಲಿ ದೂರು ನೀಡಿದ್ದರು.
ಸಮೀಕ್ಷೆ ಕೆಲಸದಲ್ಲಿ ಹಿನ್ನಡೆಈ ಬಗ್ಗೆ ಅನೇಕ ಕಡೆ ವಿಚಾರಿಸಿದರೂ ಶಿಕ್ಷಕಿಯ ಸುಳಿವು ಸಿಕ್ಕಿರಲಿಲ್ಲ. ಸಮೀಕ್ಷೆ ಕಾರ್ಯದಲ್ಲಿ ಸಾರ್ವಜನಿಕರು ಸರಿಯಾಗಿ ಸ್ಪಂದಿಸದೆ ಸಮೀಕ್ಷೆಯ ಪ್ರಗತಿ ಸಾಧಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಹಿರಿಯ ಅಧಿಕಾರಿಗಳ ಕಡೆಯಿಂದಲೂ ಒತ್ತಡ ಹೆಚ್ಚಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.
ಮೂರು ದಿನಗಳ ನಂತರ ಬೇತಮಂಗಳ ಹೋಬಳಿಯ ಟಿ.ಗೊಲ್ಲಹಳ್ಳಿ ಗ್ರಾಪಂ ವ್ಯಾಪ್ತಿಯ ಅಯ್ಯಪಲ್ಲಿ ಅಮಾನಿಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.