ಕನ್ನಡಪ್ರಭ ವಾರ್ತೆ ಕೋಟ
ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಕೆ.ರಾಜಾರಾಮ್ ಐತಾಳ್ ಅವರಿಗೆ ಗುರುವಂದನೆ ಸಲ್ಲಿಸಲಾಯಿತು. ಗಿಡ ನಡುವ ಮೂಲಕ ಹಸಿರು ಪರಿಸರ ಜಾಗೃತಿ ಮೆರೆಯಲಾಯಿತು.ಸಭೆಯ ಅಧ್ಯಕ್ಷತೆಯನ್ನು ಕೋಟ ಪಂಚವರ್ಣ ಅಧ್ಯಕ್ಷ ಅಜಿತ್ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಮಾಜಿ ಅಧ್ಯಕ್ಷ ಚಂದ್ರ ನಾಯರಿ, ಸಾಮಾಜಿಕ ಕಾರ್ಯಕರ್ತ ಕೋಟ ಶ್ರೀಕಾಂತ್ ಶೆಣೈ, ವಿಪ್ರ ಮಹಿಳಾ ಸಾಲಿಗ್ರಾಮ ವಲಯ ಸಂಚಾಲಕಿ ವನೀತಾ ಉಪಾಧ್ಯಾ, ಪಂಚವರ್ಣದ ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.ಮಹಿಳಾ ಮಂಡಲದ ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸನ್ಮಾನಪತ್ರವನ್ನು ಸದಸ್ಯ ಸಂತೋಷ್ ಕುಮಾರ್ ಕೋಟ ವಾಚಿಸಿದರು. ಕಾರ್ಯಕ್ರಮವನ್ನು ಪಂಚವರ್ಣ ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರು. ಸದಸ್ಯ ಶಶಿಧರ ತಿಂಗಳಾಯ ವಂದಿಸಿದರು.