ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಗ್ರಾಮದ ಶಾಲೆಯಲ್ಲಿ ೩೬ ವಿದ್ಯಾರ್ಥಿಗಳು ೧ ರಿಂದ ೭ ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿದ್ದಾರೆ. ಶಾಲಾ ಮಕ್ಕಳ ಪೋಷಕರೊಂದಿಗೆ ಶಾಲಾ ಮುಖ್ಯ ಶಿಕ್ಷಕ ನಂದೀಶ್ ಚರ್ಚಿಸಿ, ಮಕ್ಕಳಿಗೆ ಗುಣಮಟ್ಟದ ಬ್ಲೇಜರ್ ಹಾಗೂ ಪ್ಯಾಂಟ್ನ್ನು ಹೊಲಿಸುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಮುಖ್ಯ ಶಿಕ್ಷಕರು ಪಾತ್ರರಾಗಿದ್ದಾರೆ.
ಮುಖ್ಯ ಶಿಕ್ಷಕ ನಂದೀಶ್ ಹಾಗೂ ಪೋಷಕರ ಸಹಕಾರದಲ್ಲಿ ಶಾಲಾ ಮಕ್ಕಳಿಗೆ ಹೊಲಿಸಿದ ಬಟ್ಟೆಯನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ ವಿತರಿಸಿ ಮುಖ್ಯ ಶಿಕ್ಷಕರ ಸೇವೆಗೆ ಸಲಾಂ ಎಂದರು.ಇದೇ ವೇಳೆ ಮುಖ್ಯ ಶಿಕ್ಷಕ ನಂದೀಶ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್.ಸ್ವಾಮಿ, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಸತೀಶ್ ಅಭಿನಂದಿಸಿದರು.ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಸತೀಶ್, ಸಿಆರ್ ಪಿ ಚಂದ್ರಶೇಖರ್, ಎಸ್ಡಿಎಂಸಿ ಅಧ್ಯಕ್ಷ ಪ್ರಸನ್ನ, ಮುಖ್ಯ ಶಿಕ್ಷಕ ನಂದೀಶ್, ಎಸ್ ಡಿಎಂಸಿ ಸದಸ್ಯರು, ಸಹ ಶಿಕ್ಷಕರು, ಪೋಷಕರು ಸೇರಿದಂತೆ ಗ್ರಾಮಸ್ಥರು ಇದ್ದರು.
ಕಾಡಂಚಿನ ದೇಶಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ೧೦ ವರ್ಷ ಸೇವೆ ಸಲ್ಲಿಸಿದ ನೆನಪಿಗಾಗಿ ಪೋಷಕರ ಸಹಕಾರದಲ್ಲಿ ಶಾಲಾ ಮಕ್ಕಳಿಗೆ ಬ್ಲೇಜರ್, ಪ್ಯಾಂಟ್ ಹೊಲಿಸಲಾಗಿದೆ.
-ನಂದೀಶ್,ಮುಖ್ಯ ಶಿಕ್ಷಕ