ಶಿಕ್ಷಕನಿಗೆ ಚಪ್ಪಲಿಹಾರ ಪ್ರಕರಣ, ಉರ್ದು ಶಾಲೆ ಮುಖ್ಯಗುರು ಅಮಾನತು

KannadaprabhaNewsNetwork |  
Published : Dec 23, 2025, 02:15 AM IST
22ಎಸ್‌ವಿಆರ್‌01 | Kannada Prabha

ಸಾರಾಂಶ

ಪಟ್ಟಣದ ಉರ್ದು ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಡಿ ಶಿಕ್ಷಕ ಜಗದೀಶ ಒಗ್ಗಣ್ಣನವರ ಮೇಲೆ ಹಲ್ಲೆ ನಡೆಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಶಾಲೆಯ ಮುಖ್ಯಗುರು ರಾಜೇಸಾಬ ಸಂಕನೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ ಆದೇಶ ಹೊರಡಿಸಿದ್ದಾರೆ.

ಸವಣೂರು: ಪಟ್ಟಣದ ಉರ್ದು ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಡಿ ಶಿಕ್ಷಕ ಜಗದೀಶ ಒಗ್ಗಣ್ಣನವರ ಮೇಲೆ ಹಲ್ಲೆ ನಡೆಸಿ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ ಶಾಲೆಯ ಮುಖ್ಯಗುರು ರಾಜೇಸಾಬ ಸಂಕನೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಮೋಹನ ದಂಡಿನ ಆದೇಶ ಹೊರಡಿಸಿದ್ದಾರೆ. 2025ನೇ ಶೈಕ್ಷಣಿಕ ವರ್ಷಕ್ಕೆ ಶಾಲೆಯಲ್ಲಿ ಎಸ್‌ಡಿಎಂಸಿ ರಚನೆ ಗೊಂದಲ, ಶಾಲೆಯಲ್ಲಿನ ಕರ್ತವ್ಯ ನಿರತ ಸಹ ಶಿಕ್ಷಕರ ನಡುವೆ ಹೊಂದಾಣಿಕೆ ಇಲ್ಲದಿರುವುದು ಹಾಗೂ ಘಟನೆ ನಡೆದ ಡಿ.10ರಂದು ರಜೆಯ ಮೇಲೆ ಇರುವುದು, ಕಳೆದ ಮೂರು, ನಾಲ್ಕು ತಿಂಗಳಿನಿಂದ ಘಟನೆ ಮಾಹಿತಿ ಇದ್ದರೂ ಇದನ್ನು ಗಮನಿಸದೆ ಸುಮ್ಮನಿರುವುದು, ಇಲಾಖೆಗೆ ವಿಷಯವನ್ನು ಗಮನಕ್ಕೆ ತರದೆ ಇರುವುದು ಸೇರಿದಂತೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ.

ಶಿಕ್ಷಣ ಇಲಾಖೆಗೆ ಮುಜುಗರ ಪಡಿಸಿರುವ ಹಿನ್ನೆಲೆಯಲ್ಲಿ ಸವಣೂರ ಬಿಇಒ ಎಂ.ಎಫ್. ಬಾರ್ಕಿ ಅವರ ವರದಿ ಹಾಗೂ ಶಿಫಾರಸ್ಸಿನ ಹಿನ್ನೆಲೆಯಲ್ಲಿ ನಾಗರಿಕ ಸೇವಾ ನಿಯಮಗಳ ಕರ್ತವ್ಯ ಲೋಪದ ಆಧಾರದ ಮೇಲೆ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತು ಆದೇಶ ಹೊರಡಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಗೆಹರಿಸಿಕೊಳ್ಳಲು ನಮ್ಮಲ್ಲಿ ಸಮಸ್ಯೆಗಳೇ ಇಲ್ಲ : ಡಿಕೆಶಿ!
ರಾಜಣ್ಣ ನೇಮಿಸಿದ್ದು ನಾನೇ ಎಂದ ಡಿಕೆಗೆ ಸಿದ್ದು ಟಾಂಗ್‌