ಶಿಕ್ಷಕರ ಗೈರು ವಿರುದ್ಧ ಶಾಲೆಗೆ ಬೀಗ ಜಡಿದು ಪ್ರತಿಭಟನೆ

KannadaprabhaNewsNetwork |  
Published : Nov 08, 2023, 01:01 AM IST
ಗುಬ್ಬಿ ತಾಲೂಕಿನ ಕೆ ಮತ್ತಿಘಟ್ಟ ಕಾಲೋನಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಸುಮಾರು 30 ವರ್ಷಗಳಿಂದಲೂ ಸರಿಯಾಗಿ ಪಾಠಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ | Kannada Prabha

ಸಾರಾಂಶ

ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಗುಬ್ಬಿ: ಕೆ ಮತ್ತಿಘಟ್ಟ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ 30 ವರ್ಷಗಳಿಂದಲೂ ಶಿಕ್ಷಕರು ಪಾಠ ಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಎಸ್ ಡಿಎಂಸಿ ಅಧ್ಯಕ್ಷ ಲೋಕೇಶ್ ಈ ಪಾಠ ಶಾಲೆಗೆ 30 ವರ್ಷಗಳಿಂದಲೂ ಒಬ್ಬರೇ ಶಿಕ್ಷಕರಿದ್ದು, ಮಕ್ಕಳಿಗೆ ಪಾಠ ಮಾಡುತ್ತಿಲ್ಲ. ಮಕ್ಕಳ ಭವಿಷ್ಯ ಹಾಳಾಗಿದೆ ಎಂದ ಸಂಬಂಧಪಟ್ಟ ಅಧಿಕಾರಿಗಳಿಗೂ ದೂರು ನೀಡಿದರು ಸಹ ಕ್ರಮ ತೆಗೆದುಕೊಂಡಿಲ್ಲ.

ಈ ಶಿಕ್ಷಕರನ್ನೇ ಮುಂದುವರಿಸಿದರೆ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಬೇಕಾಗುತ್ತದೆ. ಹೊಸ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ಸದಸ್ಯೆ ಮುನಿಯಪ್ಪ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುತ್ತಿಲ್ಲ. ಈ ಕಾರಣಕ್ಕೆ ಬೇರೆ ಶಿಕ್ಷಕರನ್ನು ನೇಮಿಸಿ, ಮುಂದಿನ ದಿನಗಳಲ್ಲಿ ಮಕ್ಕಳು ಚೆನ್ನಾಗಿ ಓದಲಿ ಅವರ ಭವಿಷ್ಯ ರೂಪಿಸಲಿ ಎಂದರು.

ದಲಿತ ಮುಖಂಡ ಕೃಷ್ಣಮೂರ್ತಿ ಮಾತನಾಡಿ, ಈ ಶಾಲೆಯ ಬಗ್ಗೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಇದೇ ರೀತಿ ಮುಂದುವರಿದಲ್ಲಿ ಮಕ್ಕಳ ಭವಿಷ್ಯಕ್ಕಾಗಿ ತಾಲೂಕು ಮಟ್ಟದಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ಮುನಿಯಪ್ಪ, ನಾಗರಾಜು, ಡಿಎಸ್ ಕೃಷ್ಣಮೂರ್ತಿ, ಚನ್ನಬಸವಯ್ಯ, ಚೆನ್ನೇಗೌಡ, ದೇವರಾಜು, ಮುನಿರಾಜು, ಧರ್ಮಣ್ಣ, ಕಮಲಮ್ಮ, ಲಾವಣ್ಯ ಹಾಗೂ ಪೋಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

7 ಜಿ ಯು ಬಿ 1

ಗುಬ್ಬಿ ತಾಲೂಕಿನ ಕೆ ಮತ್ತಿಘಟ್ಟ ಕಾಲೋನಿನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಸುಮಾರು 30 ವರ್ಷಗಳಿಂದಲೂ ಸರಿಯಾಗಿ ಪಾಠಶಾಲೆಗೆ ಬರುತ್ತಿಲ್ಲವೆಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಗೆ ಬೀಗ ಜಡಿದು ಪ್ರತಿಭಟನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು