ಹುಬ್ಬಳ್ಳಿ:
ಇಲ್ಲಿನ ದೇಶಪಾಂಡೆ ನಗರದಲ್ಲಿರುವ ಸವಾಯಿ ಗಂಧರ್ವ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಜಿಲ್ಲಾ ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ (ಕುಪ್ಮಾ) ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ನನ್ನ ರಾಜಕೀಯ ಇತಿಹಾಸದಲ್ಲಿ ಶಿಕ್ಷಕರು ನನ್ನ ಮೇಲೆ ಇಟ್ಟಿರುವ ಭರವಸೆಗೆ ಚ್ಯುತಿ ಬಾರದಂತೆ ಕಾರ್ಯ ನಿರ್ವಹಿಸುತ್ತಿರುವೆ. ಅವರ ಏನೇ ಸಮಸ್ಯೆಗಳಿದ್ದರೂ ಅವುಗಳಿಗೆ ಪರಿಹಾರ ಕೊಡಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡುವುದಾಗಿ ತಿಳಿಸಿದರು.ಸರ್ಕಾರ ಯೋಜನೆಗಳನ್ನು ನೀಡುವುದಕ್ಕೂ ಮೊದಲು ಶಿಕ್ಷಕರು ನೆಮ್ಮದಿಯಿಂದ ಮಕ್ಕಳಿಗೆ ಪಾಠ ಮಾಡುವ ವಾತಾವರಣ ನಿರ್ಮಾಣ ಮಾಡಿಕೊಡಬೇಕಿದೆ. ಇಂದು 29 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿಯಿವೆ. ಇವುಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡಬೇಕು. ಜತೆಗೆ ಎಲ್ಲೆಡೆ ರಾಜ್ಯ ಸರ್ಕಾರ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಮುಂದಾಗಿರುವುದು ಸರಿಯಲ್ಲ. ಒಂದು ಪಬ್ಲಿಕ್ ಶಾಲೆ ಆರಂಭವಾದಲ್ಲಿ ಸುತ್ತಮುತ್ತಲಿನ 10 ಸರ್ಕಾರಿ ಶಾಲೆಗಳು ಬೀಗ ಹಾಕಲಿವೆ. ಈ ಕುರಿತು ಸರ್ಕಾರ ಯೋಚಿಸಲಿ ಎಂದರು.
ಕುಪ್ಮಾ ರಾಜ್ಯ ಸಮಿತಿ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ ಮಾತನಾಡಿದರು. ಕುಪ್ಮಾ ಧಾರವಾಡದ ಅಧ್ಯಕ್ಷ ಡಾ. ವಿಶ್ವನಾಥ ಕೊರವಿ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಧಾರವಾಡ ಡಿಡಿಪಿಯು ತೇಜಸ್ವಿನಿ ನಾರಾಯಣಕರ, ಕುಪ್ಮಾ ಕಾರ್ಯದರ್ಶಿ ಅನಿಲಕುಮಾರ ಚೌಗಲಾ, ಪ್ರಧಾನ ಕಾರ್ಯದರ್ಶಿ ನಾಗೇಶ ಅಣ್ಣಿಗೇರಿ, ಗೌರವಾಧ್ಯಕ್ಷ ಜಿ.ವಿ. ವಳಸಂಗ, ಪಿ.ಆರ್. ಹಂಚಿಮನಿ, ಮಲ್ಲಿಕಾರ್ಜುನ ಸಾವುಕಾರ, ಅಶ್ರಫಅಲಿ ಬಶೀರಅಹ್ಮದ್, ಬಸವರಾಜ ಕೊಣ್ಣೂರ, ಉಪಾಧ್ಯಕ್ಷ ವಸಂತ ಹೊರಟ್ಟಿ, ಡಾ. ವೀಣಾ ಬಿರಾದಾರ, ಸವಿತಾ ಅಮರಶೆಟ್ಟಿ, ಖಜಾಂಚಿ ನೂರಅಹ್ಮದ ಧಾರವಾಡ ಸೇರಿದಂತೆ ಹಲವರಿದ್ದರು.