ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಗುರುಭವನದಲ್ಲಿ ಶನಿವಾರ ತಾಲೂಕಿಗೆ ನೂತನವಾಗಿ ಆಯ್ಕೆಯಾಗಿರುವ ಜಿಪಿಟಿ ಹಾಗೂ ವರ್ಗಾವಣೆಯಾಗಿ ಬಂದಿರುವ ಶಿಕ್ಷಕರಿಗೆ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ಮೊದಲು ಶಿಸ್ತಿನ ಸಿಪಾಯಿಗಳಾಗಬೇಕು. ಆ ಮೂಲಕ ಮಕ್ಕಳಿಗೆ ಶಿಸ್ತನ್ನು ಕಲಿಸಿದರೆ ಅದೇ ದೊಡ್ಡ ಸಾಧನೆ. ಬಾಲ್ಯದಲ್ಲೇ ಶಿಸ್ತಿನ ಜೀವನ ಮೈಗೂಡಿಸಿಕೊಳ್ಳುವಂತೆ ಮಕ್ಕಳನ್ನು ಪ್ರೇರೇಪಿಸಬೇಕು. ಆಗ ಮಕ್ಕಳು ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.ಶಿಕ್ಷಕರು ಸಂಬಳ ಪಡೆಯುವುದಕ್ಕಾಗಿ ಮಾತ್ರ ಕೆಲಸ ಮಾಡದೆ ಮಕ್ಕಳ ಭವಿಷ್ಯವನ್ನು ರೂಪಿಸುವುದಕ್ಕಾಗಿ ಕೆಲಸ ಮಾಡಬೇಕು. ಆ ಕೆಲಸದಲ್ಲಿ ಬದ್ಧತೆ ಇರಬೇಕು. ಮಕ್ಕಳ ಶಿಕ್ಷಣದಲ್ಲಿ ಬದಲಾವಣೆ ತರಬೇಕು ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತರುವ ಕೆಲಸವನ್ನು ಶಿಕ್ಷಕರು ಮಾಡಬೇಕು ಎಂದರು.
ಈ ವೇಳೆ ಬಿಇಒ ಸಿ.ಎಚ್.ಕಾಳಿರಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ದೇವರಾಜು, ಕ್ಷೇತ್ರ ಸಮನ್ವಯ ಅಧಿಕಾರಿ ಹನುಮಶೆಟ್ಟಿ, ಶಿಕ್ಷಣಾಧಿಕಾರಿ ಲೋಕೇಶ್, ನಿವೃತ ಶಿಕ್ಷಕ ಲೋಕೇಶ್, ಶಿಕ್ಷಕರ ಸಂಘದ ವಿವಿಧ ಸಂಘಗಳ ಮುಖ್ಯಸ್ಥರಾದ ರವಿಕುಮಾರ್, ಉದಯ್, ಶಿವಲಿಂಗೇಗೌಡ, ಮಲ್ಲಿಕ್, ಜೋಗಿಗೌಡ, ಯೋಗಾನಂದ, ಪ್ರೇಮ, ಕವಿತಾ, ಕಿರಣ್, ತಿಮ್ಮೇಶ, ಶಿವಣ್ಣ ಹಾಗೂ ತಿಮ್ಮೇಗೌಡ ಇದ್ದರು.ಬಜೆಟ್ ಸರ್ವ ಜನಾಂಗಕ್ಕೂ ಆಸರೆ: ಕೆ.ಎಂ.ಉದಯ್
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಬಜೆಟ್ನಲ್ಲಿ ತಾಲೂಕಿನ ಕೆಮ್ಮಣ್ಣುನಾಲೆಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಜಿಲ್ಲೆಗೆ ಹೊಸ ಕಾರ್ಖಾನೆ ಸ್ಥಾಪಿಸಲು ಉಲ್ಲೇಖಿಸಲಾಗಿದೆ. ಕೃಷಿ ವಿಶ್ವವಿದ್ಯಾನಿಲಯ ದೊರೆತಿದೆ ಇಂತಹ ಶಾಶ್ವತ ಕಾರ್ಯಕ್ರಮಗಳ ಜತೆಗೆ ಜನಪರವಾದ ಬಜೆಟ್ ಅನ್ನು ನಮ್ಮ ಸರ್ಕಾರ ಅವಧಿಯಲ್ಲಿ ನೀಡಿದೆ ಎಂದು ಶ್ಲಾಘಿಸಿದರು.