- ಹಿರಿಯ ಶಿಕ್ಷಕರು ಬಡ್ತಿಯಿಲ್ಲದೇ ನಿವೃತ್ತಿ: ಕಳವಳ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಆಯುಕ್ತರ ಆದೇಶದಂತೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆ ಮನವಿ ಸಲ್ಲಿಕೆಯಾಗಿದೆ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಜಿಲ್ಲಾಡಳಿತ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಗಿದೆ.2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಕುರಿತು ಮಾ.18ರಂದು ಆಯುಕ್ತರಿಂದ ರಾಜ್ಯದ ಎಲ್ಲಾ ಜಿಲ್ಲಾ ಉಪ ನಿರ್ದೆಶಕರಿಗೆ (ಆಡಳಿತ) ಆದೇಶಿಸಲಾಗಿದೆ.
ಆದ್ದರಿಂದ, ಜಿಲ್ಲೆಯಲ್ಲಿ ಬಡ್ತಿ ನೀಡುವ ಸಮಕ್ಷಮ ಪ್ರಾಧಿಕಾರಿಗಳು ತಾವೇ ಆಗಿರುವುದರಿಂದ ದಯಮಾಡಿ ಜ.1ರಲ್ಲಿದ್ದಂತೆ ಜಿಲ್ಲೆಯ ಜ್ಯೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಿ ಪ್ರಕಟಿಸಿ, ನಂತರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ಅಂತಿಮ ಅರ್ಹತಾ ಪಟ್ಟಿ ತಯಾರಿಸಿ, ಬಡ್ತಿ ಪ್ರಕ್ರಿಯೆ ನಡೆಸುವ ವೇಳಾಪಟ್ಟಿಯನ್ನು ತಕ್ಷಣ ಬಿಡುಗಡೆ ಮಾಡಬೇಕು. ಶೀಘ್ರವಾಗಿ ಕೌನ್ಸಿಲಿಂಗ್ ಪೂರ್ಣಗೊಳಿಸಲು ಕೋರಿದ್ದಾರೆ. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್. ಮಾದಪ್ಪ, ಪ್ರಧಾನ ಕಾರ್ಯ ದರ್ಶಿ ಮಹಾದೇವಸ್ವಾಮಿ ಒತ್ತಾಯಿಸಿದ್ದಾರೆ.
---
29ಸಿಎಚ್ಎನ್13ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು.