ಕನ್ನಡಪ್ರಭ ವಾರ್ತೆ ಹರಿಹರ
ನಗರದ ಗುರು ಭವನದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ, ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.
ಶಿಕ್ಷಕ ವೃತಿಯಲ್ಲಿರುವವರಿಗೆ ಮೊದಲು ಸಹನೆ, ತಾಳ್ಮೆ, ಸಮಯ ಪಾಲನೆ ಹಾಗೂ ಭಾಷೆಯ ಮೇಲೆ ಹಿಡಿತವಿರಬೇಕು. ಆಗ ಮಾತ್ರ ಪರಿಪೂರ್ಣ ಶಿಕ್ಷಕರಾಗಲು ಸಾಧ್ಯ. ಅಜ್ಞಾನದಿಂದ ಸುಜ್ಞಾನದ ಕಡೆ ಕರೆದುಕೊಂಡು ಹೋಗುವವರು ಮಾತ್ರ ಒಬ್ಬ ಪರಿಪೂರ್ಣ ಗುರು ಅಥವಾ ಶಿಕ್ಷಕನಾಗಿರುತ್ತಾನೆ. ಅಂತಹ ವೃತ್ತಿಯಲ್ಲಿರುವ ನಾವುಗಳು ನಿರಂತರ ಅಧ್ಯಯನದ ಮೂಲಕ ವಿದ್ಯಾರ್ಥಿಗಳಿಗೆ ಹೊಸತನವನ್ನು ತುಂಬುವ ಮೂಲಕ ಉಜ್ವಲ ಭವಿಷ್ಯ ರೂಪಿಸೋಣ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ನಗರಸಭಾ ಅಧ್ಯಕ್ಷೆ ಕವಿತಾ ಬೇಡರ ಮಾತನಾಡಿ ಹಿಂದುಳಿದ ಮಕ್ಕಳ ಅಭಿವೃದ್ಧಿಗೆ ಶಿಕ್ಷಕರು ಹಾಗೂ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಇಂತಹ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕೈಲಾದ ಸಹಕಾರ ನೀಡುತ್ತೇನೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ದುರುಗಪ್ಪ, ಪದವೀಧರೇತರ ಮುಖ್ಯಶಿಕ್ಷಕರ ಸಂಘದ ಬೀರಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕುಬೇಂದ್ರಪ್ಪ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವೀರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಎಚ್.ಚಂದ್ರಪ್ಪ, ಕಾರ್ಯದರ್ಶಿ ಶರಣ ಕುಮಾರ್ ಹೆಗಡೆ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿಜಯ ಮಹಾಂತೇಶ್, ಬಿ.ಆರ್.ಸಿ. ಕೃಷ್ಣಪ್ಪ, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಈಶಪ್ಪ ಬೂದಿಹಾಳ, ಸರ್ಕಾರಿ ನೌಕರ ಸಂಘದ ನಿಕಟ ಪೂರ್ವ ಅಧ್ಯಕ್ಷ ಎ.ಕೆ.ಭೂಮೇಶ್, ಎಂ.ಉಮ್ಮಣ್ಣ, ಡಿ.ಎಂ. ಮಂಜುನಾಥಯ್ಯ, ಆಷ್ಪಾಕ್ ಅಹಮದ್, ರೇವಣಸಿದ್ದಪ್ಪ ಅಂಗಡಿ, ಮಂಜಪ್ಪ, ಶಿಕ್ಷಕ ಶಿಕ್ಷಕಿಯರು, ಇಲಾಖೆ ಸಿಬ್ಬಂದಿ ಪಾಲ್ಗೊಂಡದ್ದರು.