ಅರ್ಯಭಟ್ಟ ಅಂತಾರಾಷ್ಟ್ರೀಯ ಅಕಾಡೆಮಿ ಶಿಕ್ಷಣ ಸಂಸ್ಥೆ 6ನೇ ಸಂಸ್ಥಾಪನಾ ದಿನಾಚರಣೆಯಲ್ಲಿರುಸ್ತುವಾರಿ ಸಚಿವ ಕರೆಕನ್ನಡಪ್ರಭ ವಾರ್ತೆ ಯಾದಗಿರಿ
ಯಾದಗಿರಿ ಹೊರವಲಯದಲ್ಲಿರುವ ಆರ್ಯಭಟ್ಟ ಅಂತಾರಾಷ್ಟ್ರೀಯ ಅಕಾಡೆಮಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಂಸ್ಥೆಯ 6ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸಕ್ತ ದಿನಗಳಲ್ಲಿ ನಾವೆಲ್ಲರು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಆಗ ದೈನಂದಿನ ಬದುಕಿನಲ್ಲಿ ಎದುರಾಗುವ ಎಲ್ಲ ಸಮಸ್ಯೆಗಳನ್ನು ಎದುರಿಸುವ ಜೊತೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು.ಇಂದು ದೇಶದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಅಪಾರ ಬದಲಾವಣೆಯನ್ನು ಕಾಣುತ್ತಿದ್ದೇವೆ. ಆಡಳಿತ ಮಂಡಳಿ ಹಾಗೂ ಶಿಕ್ಷಕರು ಶಿಕ್ಷಣಕ್ಕೆ ಹೊಸ ದಿಕ್ಕನ್ನು ತೋರಿಸುವ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡಿಸಿ. ಸ್ಪರ್ಧಾ ಮನೋಭಾವನೆ ಮೂಡಿಸಬೇಕು. ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಪರಿಶ್ರಮದ ಮೂಲಕ ಉನ್ನತ ಗುರಿ ಸಾಧಿಸುತ್ತಾರೆ ಎಂದು ತಿಳಿಸಿದರು.
ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಪ್ರಮುಖವಾಗಿದೆ. ಸ್ವಲ್ಪ ಸಮಯ ಮಕ್ಕಳ ಅಭ್ಯಾಸ, ಹವ್ಯಾಸ, ಚಟುವಟಿಕೆಗಳ ಮೇಲೆ ಗಮನ ಹರಿಸಿ, ಕಾಲ ಕಾಲಕ್ಕೆ ಅವರಿಗೆ ಅಗತ್ಯ ಎಚ್ಚರಿಕೆ ಸಲಹೆಗಳನ್ನು ನೀಡಬೇಕು. ಆಗ ಸನ್ಮಾರ್ಗದಲ್ಲಿ ಸಾಗಿ, ಸಮಾಜಕ್ಕೆ ಮಾದರಿಯಾಗುವ ನಾಗರಿಕರಾಗಿ ಭವಿಷ್ಯದಲ್ಲಿ ತಮ್ಮದೇ ಆದ ಕೊಡುಗೆ ನೀಡುತ್ತಾರೆ ಎಂದು ಸಲಹೆ ನೀಡಿದರು.
ಶಾಲೆಯ ಆವರಣದಲ್ಲಿ ಉತ್ತಮ ಪರಿಸರ ನಿರ್ಮಾಣ ಮಾಡಿರುವುದು ಪ್ರಮುಖವಾಗಿದೆ, ಇದು ಮಕ್ಕಳ ಬೋದನೆ ಮೇಲೆ ಸಕರಾತ್ಮಕ ಪರಿಣಾಮ ಬೀರುತ್ತದೆ. ಬರುವ ದಿನಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಸಾಧನೆ ಮಾಡಿ, ನಾಡಿನ ಗಮನ ಸೆಳೆದು ಜಿಲ್ಲೆಯ ಕೀರ್ತಿ ಬೆಳಗಿಸಲಿ ಎಂದು ಹಾರೈಸಿದರು.
ಪ್ರಾಂಶುಪಾಲ ಪಿ. ಅರವಿಂದಾಕ್ಷಣ ಮಾತನಾಡಿ, 5 ವರ್ಷಗಳಲ್ಲಿ ಶಾಲೆಯಲ್ಲಿ ಕೈಗೊಂಡಿರುವ ಚಟುವಟಿಕೆಗಳನ್ನು ಹಾಗೂ ವಿದ್ಯಾರ್ಥಿಗಳ ಸಾಧನೆಗಳನ್ನು ವಿವರಿಸಿದರು.
ವೇದಿಕೆ ಮೇಲೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪೂರ, ವೆಂಕಟರಡ್ಡಿ ಪಾಟೀಲ್ ಉಪಸ್ಥಿತರಿದ್ದರು. ಶಿಕ್ಷಕಿ ಮಾಧವಿ ಸ್ವಾಗತಿಸಿ, ಅರವಿಂದರಡ್ಡಿ ವಂದಿಸಿದರು. ನಂತರ ಶಾಲೆಯ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು.