ರೈಲು ಇಂಜಿನ್‌ನಲ್ಲಿ ತಾಂತ್ರಿಕ ತೊಂದರೆ, 2 ಗಂಟೆ ವಿಳಂಬ

KannadaprabhaNewsNetwork |  
Published : Sep 06, 2026, 03:15 AM IST
ಫೋಟೋ- ಪ್ರಜಾ ಸೇವೆ 3 ಮತ್ತು ಪ್ರಜಾಸೇವೆ 4ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಶನಿವಾರ‌ ಜಿಲ್ಲೆಯ ಕಮಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪ್ರಜಾ ಸೇವೆ ಅಭುಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. | Kannada Prabha

ಸಾರಾಂಶ

ವಿಜಯಪುರದಿಂದ ಯಶವಂತಪುರಕ್ಕೆ ಹೊರಟಿದ್ದ ವಿಜಯಪುರ-ಯಶವಂತಪುರ (16548 ನಂಬರ್‌) ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ಸುಮಾರು 2 ಗಂಟೆಗೂ ಅಧಿಕ ಕಾಲ ವಿಳಂಬವಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ:

ವಿಜಯಪುರದಿಂದ ಯಶವಂತಪುರಕ್ಕೆ ಹೊರಟಿದ್ದ ವಿಜಯಪುರ-ಯಶವಂತಪುರ (16548 ನಂಬರ್‌) ರೈಲಿನಲ್ಲಿ ತಾಂತ್ರಿಕ ದೋಷದಿಂದಾಗಿ ಸುಮಾರು 2 ಗಂಟೆಗೂ ಅಧಿಕ ಕಾಲ ವಿಳಂಬವಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ.

ವಿಜಯಪುರ ಕೇಂದ್ರ ರೈಲ್ವೆ ನಿಲ್ದಾಣದಿಂದ ಮ. 2.50ಕ್ಕೆ ಹೊರಟಿದ್ದ ರೈಲು ಮೂರ್ನಾಲ್ಕು ಕಿಲೋ ಮೀಟರ್‌ ದೂರ ಪ್ರಮಾಣಿಸುತ್ತಿದ್ದಂತೆ ರೈಲಿನ ಇಂಜಿನ್‌ನಲ್ಲಿ ವೈಫಲ್ಯ ಕಂಡುಬಂದು, ಇಂಜಿನ್‌ ಬಂದ್ ಆಗಿದೆ. ಈ ವೇಳೆ ರೈಲಿಗೆ ಹಿಂಬದಿಯಿಂದ ಮತ್ತೊಂದು ಇಂಜಿನ್ ಹಚ್ಚಿದ ರೈಲ್ವೆ ಅಧಿಕಾರಿಗಳು ಬಂದ್ ಆಗಿದ್ದ ರೈಲು ಮತ್ತೆ ಚಲಿಸಲು ಅವಕಾಶ ಮಾಡಿಕೊಟ್ಟರು.

ಪರೀಕ್ಷಾರ್ಥಿಗಳ ಆಕ್ರೋಶ:ಇದೇ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ನಗರ ಸಶಸ್ತ್ರ ಮೀಸಲು ಪಡೆ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಸಿಟಿ ಆರ್ಮ್ಡ್ ಹಾಗೂ ಡಿಸ್ಟ್ರಿಕ್ ಆರ್ಮ್ಡ್) ಪರೀಕ್ಷೆಗಳಿಗೆ ಹಾಜರಾಗಬೇಕಿದ್ದ 500ಕ್ಕೂ ಅಧಿಕ ಪರೀಕ್ಷಾರ್ಥಿಗಳು ಆತಂಕಕ್ಕೊಳಗಾದರು. ಭಾನುವಾರ ನಡೆಯಲಿರುವ ಪರೀಕ್ಷೆ ಬರೆಯಲೆಂದು ಬೆಂಗಳೂರು, ತುಮಕೂರು ಹಾಗೂ ಇತರೆ ಜಿಲ್ಲೆಗಳಿಗೆ ತೆರಳುತ್ತಿದ್ದ ಪರೀಕ್ಷಾರ್ಥಿಗಳು ಭಾನುವಾರ ಬೆಳಗ್ಗೆ 10ಕ್ಕೆ ಆರಂಭವಾಗಲಿರುವ ಪರೀಕ್ಷೆಗಳ ಪರೀಕ್ಷಾ ಕೇಂದ್ರಗಳಿಗೆ 9.30ರ ಒಳಗಾಗಿ ತಲುಪಬೇಕಿದೆ. ಹೀಗಾಗಿ ಈ ಸಮಯದಲ್ಲಿ ವಿಜಯಪುರ-ಯಶವಂತಪುರ ರೆಲ್ವೇ ಇಂಜಿನ್ ಬಂದ್ ಆಗಿದ್ದಕ್ಕೆ ಪರೀಕ್ಷಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ರೈಲಿನಿಂದ ಕೆಳಗಿಳಿದು ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು. ಈ ವೇಳೆ ರೈಲ್ವೆ ಪೊಲೀಸರು ಹಾಗೂ ಸಿಬ್ಬಂದಿ ಯುವಕರನ್ನು ಸಮಾಧಾನ ಮಾಡಿ ಕಳುಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಣ್ಣನ ಸಾವಿನ ನಂತ್ರ ತಂಗಿ ಸಾವು!
ಕೃಷ್ಣಾ ಮಡಿಲಲ್ಲಿ ಭಕ್ತಿ ಬೆಳಕು; ವೈಭವದ ಕೃಷ್ಣಾರತಿ