ತೇಕರಾಳ: ಸ್ಮಶಾನಭೂಮಿಗೆ ತೆರಳಲು ದಾರಿಗೆ ಆಗ್ರಹ

KannadaprabhaNewsNetwork |  
Published : Dec 01, 2024, 01:30 AM IST
ವಡಗೇರಾ ತಾಲೂಕಿನ ತೇಕರಾಳ ಗ್ರಾಮದ ಸಾರ್ವಜನಿಕ ಸ್ಮಶಾನ ಜಾಗಕ್ಕೆ ತೆರಳಲು ದಾರಿ ಮಾಡಿಕೊಡುವಂತೆ ಆಗ್ರಹಿಸಿ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

Tekerala: Demand for way to go to graveyard

-ಮಾಜಿ ತಾಪಂ ಸದಸ್ಯ ಅನಿಲ್‌ ಗೌಡ ಮಾಲಿಪಾಟೀಲ್ ಗ್ರಾಮಸ್ಥರೊಂದಿಗೆ ಪ್ರತಿಭಟನೆ

-----

ಕನ್ನಡಪ್ರಭ ವಾರ್ತೆ ವಡಗೇರಾ ತಾಲೂಕಿನ ತೇಕರಾಳ ಗ್ರಾಮದ ಸಾರ್ವಜನಿಕ ಸ್ಮಶಾನ ಜಾಗಕ್ಕೆ ತೆರಳಲು ದಾರಿ ಮಾಡಿಕೊಡುವಂತೆ ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಅನಿಲ್‌ ಗೌಡ ಮಾಲಿಪಾಟೀಲ್ ಆಗ್ರಹಿಸಿದ್ದಾರೆ.

ಇಲ್ಲಿನ ಸ್ಮಶಾನಕ್ಕೆ ಹೋಗುವ ಜಾಗದಲ್ಲಿ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸಿ ಮಾತನಾಡಿ, ನಮ್ಮ ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನಭೂಮಿ ಮಂಜೂರಾಗಿ 10 ವರ್ಷ ಕಳೆದರೂ ಸ್ಮಶಾನ ಜಾಗಕ್ಕೆ ಹೋಗಲು ರಸ್ತೆ ಇಲ್ಲ. ಖಾಸಗಿ ಜಮೀನಿನ ವ್ಯಕ್ತಿಗಳು ದಾರಿ ಬಿಡದ ಕಾರಣ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಇದಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನೋವು ತೋಡಿಕೊಂಡರು.

ಜಮೀನು ಉಳ್ಳವರು ತಮ್ಮ ಹೊಲಗಳಲ್ಲಿ ಅಂತ್ಯಸಂಸ್ಕಾರ ನೆರವೇರಿಸುತ್ತಾರೆ. ಜಮೀನು ಇಲ್ಲದವರು ಅಂತ್ಯಸಂಸ್ಕಾರ ಮಾಡಲು ಖಾಸಗಿ ಭೂಮಿ ಖರೀದಿಸಿ ಅಂತ್ಯಸಂಸ್ಕಾರ ಮಾಡುವಂತ ಪರಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಸ್ಮಶಾನ ಭೂಮಿಗೆ ದಾರಿ ವ್ಯವಸ್ಥೆ ಮಾಡಿಕೊಡಬೇಕು. ಇಲ್ಲವೆ ಬೇರೆಡೆ ಸ್ಥಳ ಗುರುತಿಸಿ, ಜಮೀನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

ಒಂದು ವೇಳೆ ವಿಳಂಬ ಮಾಡಿದಲ್ಲಿ ಗ್ರಾಮಸ್ಥರೆಲ್ಲರೂ ಸೇರಿ ತಹಸೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರಾದ ಬನ್ನಪ್ಪ ಪೊಲೀಸ್ ಪಾಟೀಲ್, ರೆಡ್ಡಪ್ಪ ನಾಯ್ಕೋಡಿ, ಬಸನಗೌಡ ಮಾಲಿ ಪಾಟೀಲ್, ದೇವಪ್ಪ ಸಗರ, ಬಸಪ್ಪ ಹೊಸ್ಮನಿ, ದೇವಪ್ಪ ನಾಟೇಕರ್, ರಾಚಪ್ಪ ಪೂಜಾರಿ, ಮಲ್ಲಪ್ಪ ಜಡಿ ವಡಗೇರಾ, ಹಣಮಂತ ಬುಸ್ಸನ್ನೂರ್, ಸಾಬಣ್ಣ ಮೀರಾಪುರ್, ಭೀಮಣ್ಣ ಇದ್ದರು.

----

30ವೈಡಿಆರ್7: ವಡಗೇರಾ ತಾಲೂಕಿನ ತೇಕರಾಳ ಗ್ರಾಮದ ಸಾರ್ವಜನಿಕ ಸ್ಮಶಾನ ಜಾಗಕ್ಕೆ ತೆರಳಲು ದಾರಿ ಮಾಡಿಕೊಡುವಂತೆ ಆಗ್ರಹಿಸಿ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದರು.

PREV

Recommended Stories

ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅಡ್ಡಿ: 9ರಂದು ಬೃಹತ್ ಜನಾಗ್ರಹ ಸಭೆ
ಮೋದಿ ಸರ್ಕಾರದಿಂದ ಜಿಎಸ್‌ಟಿ ಇಳಿಕೆ ಐತಿಹಾಸಿಕ ಕೊಡುಗೆ: ಶಾಸಕ ವೇದವ್ಯಾಸ್‌ ಕಾಮತ್