ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರು ತಮ್ಮ ಬೆನ್ನಿಗೆ ಚೂರಿ ಹಾಕಿ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಿಜೆಪಿ ನಾಯಕರನ್ನು ಆದಿ ಚುಂಚನಗಿರಿ ಮಠಕ್ಕೆ ಕರೆದುಕೊಂಡು ಹೋಗಿದ್ದಾರೆ. ನಾನು ವಿಷ ಹಾಕಿದೆ ಎಂದು ಹೇಳುತ್ತಿದ್ದಾರೆ. ನಾನು ಯಾವ ರೀತಿ ವಿಷ ಹಾಕಿದೆ ಎಂದು ಅವರು ಹೇಳಬೇಕಲ್ಲವೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದರು.
ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಜಾತ್ಯತೀತ ತತ್ವದ ಮೇಲೆ ನಾವು ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿ ಎಲ್ಲರ ವಿರೋಧದ ನಡುವೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದೆವು. ಆದರೆ ಅದನ್ನು ಉಳಿಸಿಕೊಳ್ಳಲು ಕುಮಾರಸ್ವಾಮಿ ಅವರಿಂದ ಸಾಧ್ಯವಾಗಲಿಲ್ಲ. ಈಗ ವಿಷ ಹಾಕಿದರೆಂದು ನನ್ನ ಮೇಲೆಯೇ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಸುರೇಶ್ ಪ್ರತಿ ಪಂಚಾಯ್ತಿಗೆ ಭೇಟಿ ನೀಡಿ ಪಂಚಾಯ್ತಿ ಸದಸ್ಯನಂತೆ ಕೆಲಸ ಮಾಡಿಕೊಂಡು ಬಂದಿದ್ದಾರೆ. ಈ ಕ್ಷೇತ್ರದಲ್ಲಿ ಕುಮಾರಸ್ವಾಮಿ, ದೇವೇಗೌಡರು ಸಂಸದರಾಗಿದ್ದರು. ಅವರು ಅಧಿಕಾರದಲ್ಲಿದ್ದಾಗ ರಾಮನಗರ, ಮಾಗಡಿ ಭಾಗದ ಬಡವರಿಗಾಗಿ ಏನಾದರೂ ಮಾಡಿದ್ದಾರಾ? ಬಡವರಿಗೆ ನಿವೇಶನ ಹಂಚಿದ್ದಾರಾ? ಕುಡಿಯುವ ನೀರನ್ನು ಕೊಟ್ಟಿದ್ದಾರಾ? ಎಂದು ಪ್ರಶ್ನಿಸಿದರು.ಕುಮಾರಸ್ವಾಮಿ 2 ಬಾರಿ ಸಂಸದರು, 2 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ತಂದೆ ಒಮ್ಮೆ ಮುಖ್ಯಮಂತ್ರಿ, ಒಮ್ಮೆ ಪ್ರಧಾನಿಯಾಗಿದ್ದಾರೆ. ಈ ಭಾಗದ ಜನ ದೇವೇಗೌಡರು, ಅವರ ಮಗ ಹಾಗೂ ಸೊಸೆಗೆ ಅಧಿಕಾರ ಕೊಟ್ಟಿದ್ದಾರೆ. ಈಗ ಅಳಿಯನನ್ನು ಕರೆದುಕೊಂಡು ಬಂದಿದ್ದಾರೆ. ಜೆಡಿಎಸ್ ಪಕ್ಷ ಇದ್ದರೂ ಗೌಡರ ಅಳಿಯನನ್ನು ದಳದಿಂದ ಯಾಕೆ ನಿಲ್ಲಿಸಲಿಲ್ಲ. ಅವರ ಪಕ್ಷ ಹಾಗೂ ಚಿಹ್ನೆಗೆ ಶಕ್ತಿ ಇಲ್ಲವೇ? ಇನ್ನು ಕುಮಾರಸ್ವಾಮಿ ಇಲ್ಲಿನ ಜನರನ್ನು ಬಿಟ್ಟು ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಏಕೆಂದು ಪ್ರಶ್ನೆ ಮಾಡಿದರು.
ಸುರೇಶ್ ಅವರು ಸಂಸದರಾಗಿದ್ದಾಗ ನಾನು ಇಂಧನ ಸಚಿವರಾಗಿದ್ದಾಗ ಇಲ್ಲಿ ಶಾಸಕರಿಲ್ಲದಿದ್ದರೂ ಪ್ರತಿ ಇಬ್ಬರು ರೈತರನ್ನು ಸೇರಿಸಿ ಒಂದೊಂದು ಟ್ರಾನ್ಸ್ ಫಾರ್ಮರ್ ಅನ್ನು ಉಚಿತವಾಗಿ ಹಾಕಿಸಬೇಕು ಎಂದು ಕೇಳಿದರು. ನಾನು ಇಲ್ಲಿನ ರೈತರಿಗೆ ಈ ಸೌಲಭ್ಯ ಕಲ್ಪಿಸಿದ್ದೇವೆ. ಅದರಿಂದ ನಿಮಗೆ ಪ್ರಯೋಜನ ಆಗಿದೆಯಲ್ಲವೇ? ನೀವು ನಮಗೆ ಅಧಿಕಾರ ನೀಡುವುದೇ ನಿಮಗೆ ಅನುಕೂಲವಾಗಲಿ, ಒಳ್ಳೆಯದಾಗಲಿ ಎಂದಲ್ಲವೆ ಎಂದು ಹೇಳಿದರು.
ಡಿ.ಕೆ.ಸುರೇಶ್ 3 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ. ಪಕ್ಕದಲ್ಲಿ ದಳದ ಮನೆಯವರಿದ್ದರೂ ಅವರಿಗೆ ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಹೇಳಿ ಕಾಂಗ್ರೆಸ್ಗೆ ಮತಹಾಕಿಸಬೇಕು. ಹೆಂಗಸರು ಮತ ಹಾಕುತ್ತಾರೆ. ಆದರೆ, ಗಂಡು ಮಕ್ಕಳ ಮೇಲೆ ನನಗೆ ಡೌಟು. ನೀವೆಲ್ಲಾ ಡಿ.ಕೆ.ಸುರೇಶ್ ಗೆ ಮತ ಹಾಕಿಸಬೇಕು ಎಂದು ಮಹಿಳೆಯರಲ್ಲಿ ಮನವಿ ಮಾಡಿದರು.
ಕೋಟ್ ...............
- ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಬಾಕ್ಸ್.............
ರಾಮನಗರ: ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಕೆಲಸದ ಮುಂದೆ ಗಾಳಿಯಲ್ಲಿ ತೂರಿ ಹೋಗುತ್ತೇವೆ ಎಂಬ ಭಯ ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಸಿಎಂ ಕುಮಾರಸ್ವಾಮಿಗೆ ಕಾಡಿದ್ದರಿಂದಲೇ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. ಜನ ಮೂರ್ಖರಲ್ಲ, ಅವರೇ ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಪ್ರಧಾನಮಂತ್ರಿಗೆ ಚೊಂಬು ತೋರಿಸಿ ಶೂನ್ಯ ಕೊಡುಗೆ ಅಂತ ಹೇಳಿದ್ದೇವೆ. ಈಗ ಬೇರೆ ಏನೋ ತಿರುಗಿಸಿ ಹೇಳುತ್ತಿದ್ದಾರೆ. ಜಿಲ್ಲೆಗೆ ಏನಾದರು ಅಭಿವೃದ್ಧಿ ಮಾಡಿದ್ದರೆ ತೋರಿಸಲಿ. ಈ ಹಿಂದೆ ಇದೇ ರೀತಿ ಡಿ.ಕೆ.ಸುರೇಶ್ ವಿರುದ್ಧ ಅನಿತಾ ಕುಮಾರಸ್ವಾಮಿ ಅವರನ್ನು ನಿಲ್ಲಿಸಿದ್ದರು. ಈಗ ಬೇರೆ ಏನು ನಡೆಯುತ್ತಿಲ್ಲ. ಚಿಹ್ನೆ ಬದಲಾಗಿದೆ ಅಷ್ಟೇ. ಚನ್ನಪಟ್ಟಣದಲ್ಲಿ ಹೆಚ್ಚು ಕಾರ್ಯಕರ್ತರು ಬರುತ್ತಿದ್ದಾರೆ. ಜೆಡಿಎಸ್ - ಬಿಜೆಪಿ ನಡುವೆ ಹೊಂದಾಣಿಕೆ ಸಮರ್ಪಕವಾಗಿ ಆಗಿಲ್ಲ ಅಂತ ಯೋಗೇಶ್ವರ್ಗೂ ಗೊತ್ತಾಗಿದೆ ಎಂದು ವ್ಯಂಗ್ಯವಾಡಿದರು.
ಚುನಾವಣೆ ಸಂದರ್ಭದಲ್ಲಿ ಐಟಿ ದಾಳಿ ವಿಚಾರದ ಪ್ರಶ್ನೆಗೆ ದಾಳಿ ಮಾಡುತ್ತಲೇ ಇದ್ದಾರೆ. ಮಾಡಿಸುತ್ತಲೇ ಇದ್ದಾರೆ. ನಿನ್ನೆ ದುಡ್ಡು ಸಿಕ್ಕಿತ್ತು ಅದನ್ನು ಬಿಜೆಪಿಯವರು 3 ವರ್ಷಗಳ ಹಿಂದೆ ಡ್ರಾ ಮಾಡಿದ್ದರಂತ ಲೆಟರ್ ಕೊಟ್ಟಿದ್ದಾರೆ. ನೋಡೋಣ ಇನ್ನೂ ಐಟಿಯವರು ಏನೇನ್ ಮಾಡುತ್ತಾರೆ. ಅದೊಂದು ಕಾಗದ ತೋರಿಸಿ 100 ಕಡೆ ಹಣ ಹಂಚಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದರು.21ಕೆಆರ್ ಎಂಎನ್ 5,6.ಜೆಪಿಜಿ
5.ಬಿಡದಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರ ನಡೆಸಿದರು.6.ಬಿಡದಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚುನಾವಣಾ ಪ್ರಚಾರದಲ್ಲಿ ಸೇರಿರುವ ಜನಸ್ತೋಮ.