ಕಿಕ್ಕೇರಿ:
ಹೋಬಳಿಯ ಶೆಟ್ಟಹಳ್ಳಿಯಲ್ಲಿ ಜರುಗಿದ ನೂತನ ಹುರುಚಲಮ್ಮ ದೇಗುಲ ಉದ್ಘಾಟನೆ ಸಮಾರಂಭದಲ್ಲಿ ದೇಗುಲ ಅಭಿವೃದ್ಧಿಗಾಗಿ 50 ಸಾವಿರ ರು. ದೇಣಿಗೆ ನೀಡಿ ಮಾತನಾಡಿ, ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಲಭಿಸಲು ದೇಗುಲಗಳ ಶಕ್ತಿಯೇ ಕಾರಣ ಎಂದರು.
ಬೆಡದಹಳ್ಳಿ ಪಂಚಭೂತೇಶ್ವರ ಪೀಠದ ಪೀಠಾಧ್ಯಕ್ಷ ರುದ್ರಮುನಿ ಸ್ವಾಮೀಜಿ ಆಶೀರ್ವಚನ ನೀಡಿ, ದೇಗುಲಗಳು ಲೋಕಕಲ್ಯಾಣಕ್ಕೆ ಶಕ್ತಿಪೀಠವಾಗಿದೆ. ಗ್ರಾಮಗಳಲ್ಲಿ ಒಗ್ಗಟ್ಟು, ಐಕ್ಯತೆ ಮೂಡಲು ಶ್ರದ್ಧಾಕೇಂದ್ರ ಅವಶ್ಯವಿದೆ. ನಮ್ಮ ಬದುಕು ನಡೆ ನುಡಿಯನ್ನು ತಿದ್ದಿ ತೀಡಲು ಸಂಸ್ಕಾರ ಕಲಿಸಲು ಭಗವಂತನ ಆರಾಧನೆ ಕಾರಣವಾಗಿದೆ ಎಂದರು.ಮಹಿಳೆಯರು ಪೂರ್ಣ ಕುಂಭದೊಂದಿಗೆ ಮಂಗಳವಾದ್ಯದೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ದೇವಿಗೆ 108 ಕಳಸದ ಗಂಗಾಜಲಾಭಿಷೇಕ ನೆರವೇರಿಸಲಾಯಿತು. ವಿವಿಧ ಪೂಜಾ ಕೈಂಕರ್ಯಗಳು ನಡೆದ ನಂತರ ಭಕ್ತರಿಗೆ ಅನ್ನದಾಸೋಹ ಜರುಗಿತು.
ಶ್ರೀರಂಗಪಟ್ಟಣ:
ರೋಟರಿ ಸಂಸ್ಥೆ ಅಧ್ಯಕ್ಷ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ.ರಾಘವೇಂದ್ರ ಮಾತನಾಡಿ, ಹೊಲಿಗ ತರಬೇತಿಗಳು ಮಹಿಳೆಯರಲ್ಲಿ ಆತ್ಮವಿಶ್ವಾಸ, ಸೃಜನಶೀಲತೆ ಮತ್ತು ಸಾಮಾಜಿಕ ಸ್ಥಾನಮಾನವನ್ನು ಹೆಚ್ಚಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಮಧೇನು ಸ್ವಸಹಾಯ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೇಗೌಡ, ಶ್ರೀ ರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ವಿಶಾಲಾಕ್ಷಿ, ರೋಟರಿ ಸಂಸ್ಥೆ ಕಾರ್ಯದರ್ಶಿ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಖಜಾಂಚಿ ಸರಸ್ವತಿ, ನಿರ್ದೇಶಕಿ ಗಾಯಿತ್ರಿ, ನಳಿನಿ, ಗುಣಶೇಖರಿ, ತರಬೇತಿದಾರರಾದ ರೂಪ ಸಂಘದ ಪದಾಧಿಕಾರಿಗಳು ಹಾಗೂ ಶಿಬಿರಾರ್ಥಿಗಳು ಇದ್ದರು.