ಬೆಳಗಾವಿಯಲ್ಲಿ ತಲೆಯೆತ್ತಲಿದೆ ತಿರುಪತಿ ವೆಂಕಟೇಶ ದೇಗುಲ

KannadaprabhaNewsNetwork |  
Published : Sep 21, 2025, 02:00 AM ISTUpdated : Sep 21, 2025, 05:59 AM IST
ತಿರುಪತಿ | Kannada Prabha

ಸಾರಾಂಶ

ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಭಕ್ತರಿಗಾಗಿ ಬೆಳಗಾವಿಯಲ್ಲಿ ತಿರುಪತಿ-ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಬಹುತೇಕ ವರ್ಷಾಂತ್ಯದಿಂದ ದೇವಸ್ಥಾನ ಕಾಮಗಾರಿ ಆರಂಭವಾಗಲಿದೆ ಎಂದು ಟಿಟಿಡಿ ಸದಸ್ಯ ಎಸ್‌.ನರೇಶ್‌ ಕುಮಾರ್‌ ತಿಳಿಸಿದ್ದಾರೆ.

  ಬೆಂಗಳೂರು :  ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ಭಕ್ತರಿಗಾಗಿ ಬೆಳಗಾವಿಯಲ್ಲಿ ತಿರುಪತಿ-ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಬಹುತೇಕ ವರ್ಷಾಂತ್ಯದಿಂದ ದೇವಸ್ಥಾನ ಕಾಮಗಾರಿ ಆರಂಭವಾಗಲಿದೆ ಎಂದು ಟಿಟಿಡಿ ಸದಸ್ಯ ಎಸ್‌.ನರೇಶ್‌ ಕುಮಾರ್‌ ತಿಳಿಸಿದ್ದಾರೆ.

ಶನಿವಾರ ನಗರದ ವೈಯಾಲಿಕಾವಲ್‌ ಟಿಟಿಡಿ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸೆ.16ರಂದು ನಡೆದ ಟಿಟಿಡಿ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಯಿತು. ಬೆಳಗಾವಿಯಲ್ಲಿ ತಿಮ್ಮಪ್ಪನ ದೇವಾಲಯ ನಿರ್ಮಿಸುವುದರಿಂದ ಆ ಭಾಗದ ಭಕ್ತರಿಗೆ ಅನುಕೂಲವಾಗಲಿದೆ. ಪ್ರತಿ ಬಾರಿಯೂ ತಿರುಪತಿ-ತಿರುಮಲಕ್ಕೆ ಭೇಟಿ ನೀಡುವ ಬದಲಾಗಿ ಸ್ಥಳೀಯವಾಗಿಯೇ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಭಾಗ್ಯ ಲಭಿಸಲಿದೆ ಎಂದರು.

ಬೆಳಗಾವಿ ಬಾಲಾಜಿ ಟ್ರಸ್ಟ್‌ನವರು ಸುವರ್ಣ ಸೌಧ ಬಳಿಯ 7ಎಕರೆ ಖಾಸಗಿ ಜಾಗ ದೇವಸ್ಥಾನಕ್ಕೆ ನೀಡಿದ್ದಾರೆ. ಮುಂದಿನ ತಿಂಗಳು ಟಿಟಿಡಿ ಅಧ್ಯಕ್ಷ ಬಿ.ಆರ್‌.ನಾಯ್ಡು ಅವರು ಬೆಳಗಾವಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಲಿದ್ದಾರೆ. ಪ್ರಾಥಮಿಕವಾಗಿ ಸುಮಾರು ₹ 70-₹100 ಕೋಟಿ ಮೊತ್ತದಲ್ಲಿ ದೇವಸ್ಥಾನ ನಿರ್ಮಾಣ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ವರ್ಷಾಂತ್ಯದಿಂದ ಕಾಮಗಾರಿ ಆರಂಭಿಸುವ ಉದ್ದೇಶವಿದೆ ಎಂದು ಹೇಳಿದರು.

- ಬೆಳಗಾವಿ ಸುವರ್ಣ ಸೌಧ ಬಳಿ ದೇಗುಲ ನಿರ್ಮಾಣಕ್ಕೆ 7 ಎಕರೆ ಜಾಗ

- ಸುಮಾರು ₹ 70-₹100 ಕೋಟಿ ಮೊತ್ತದಲ್ಲಿ ದೇವಸ್ಥಾನ ನಿರ್ಮಾಣ

- ವರ್ಷಾಂತ್ಯಕ್ಕೆ ದೇಗುಲ ನಿರ್ಮಾಣ ಕಾಮಗಾರಿ ಆರಂಭ ಉದ್ದೇಶ

- ತಿರುಮಲ ಬದಲು ಬೆಳಗಾವಿಯಲ್ಲೇ ವೆಂಕಟೇಶ್ವರ ದರ್ಶನ ಲಭ್ಯ

- ಗೋವಾ, ಮಹಾರಾಷ್ಟ್ರ. ಉತ್ತರ ಕರ್ನಾಟಕ ಭಕ್ತರಿಗೆ ಅನುಕೂಲ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ