ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಭಾನುವಾರ ಬೆಳಗ್ಗೆ 10.30ಕ್ಕೆ ಕುಂಬೂರು ಪವಿತ್ರ ಕುಟುಂಬದ ದೇವಾಲಯದಲ್ಲಿ ಹಟ್ಟಿಹೊಳೆ ಜಪಸರಮಾತೆ ದೇವಾಲಯದ ಧರ್ಮಗುರು ರೆ.ಫಾ. ಗಿಲ್ಬರ್ಟ್ ಡಿಸಿಲ್ವ, ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಸಹಾಯಕ ಧರ್ಮಗುರು ರೆ.ಫಾ.ನವೀನ್ ಕುಮಾರ್ ಹಾಗೂ ಪವಿತ್ರ ಕುಟುಂಬ ದೇವಾಲಯದ ಧರ್ಮಗುರು ರಾಜೇಶ್ ಅವರು ಅಡಂಬರ ಬಲಿಪೂಜೆ ನಡೆಸಿ ಮಕ್ಕಳಿಗೆ ನೂತನ ಪರಮ ಪ್ರಸಾದ ನೀಡಿದರು. ಮಾದಾಪುರ, ಸುಂಟಿಕೊಪ್ಪ, ಹಟ್ಟಿಹೊಳೆ ಮಡಿಕೇರಿ, ಸೋಮವಾರಪೇಟೆ ಸೇರಿದಂತೆ ವಿವಿಧೆಡೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಈ ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು.
.................ಕೂಡಿಗೆ ಗ್ರಾಮ ದೇವತೆಯ ಹಬ್ಬ
ಹಬ್ಬದ ಅಂಗವಾಗಿ ಶ್ರೀ ದಂಡಿನಮ್ಮ ದೇವಿಯ ವಾರ್ಷಿಕ ಪೂಜೆಯು ದೇವಾಲಯ ಆವರಣದಲ್ಲಿ ಆರಂಭಗೊಂಡು ಬೆಳಿಗ್ಗೆ ಹೋಮ ಹವನಗಳು ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆದು ನಂತರ ಮಧ್ಯಾಹ್ನ ಮಹಾಮಂಗಳಾತಿ ಪ್ರಸಾದ ವಿನಿಯೋಗ ನಡೆಯಿತು.ಅಗ್ನಿ ಸ್ಧಾಪನೆಯ ನಂತರ ಶ್ರೀ ಬಸವೇಶ್ವರ ದೇವಾಲಯದಿಂದ ಗ್ರಾಮಸ್ಥರು, ಮತ್ತು ಭಕ್ತಾದಿಗಳು ಕಾವೇರಿ ನದಿಗೆ ತೆರಳಿ ನದಿಯಲ್ಲಿ ಕಳಸ ಪೂಜೆ, ಕಾವೇರಿ ನದಿಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳ ವಾದ್ಯ, ನಾಡ ವಾದ್ಯ, ಸೇರಿದಂತೆ ಮದ್ದುಗುಂಡುಗಳ ಸಿಡಿಸುವಿಕೆ ಮೂಲಕ ಸಾಗಿ ದಂಡಿನಮ್ಮ ದೇವಿಯ ದೇವಾಲಯವನ್ನು ತಲುಪಿ ನಂತರ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿದ್ದ ಅಗ್ನಿ ಕೊಂಡೋತ್ಸವದಲ್ಲಿ ಪಾಲ್ಗೊಂಡರು.
ದೇವಾಲಯ ಆವರಣದಲ್ಲಿ ಜಾತ್ರೋತ್ಸವವು ನಡೆದು, ದಂಡಿನಮ್ಮ ದೇವಿಗೆ ಪೂಜೆ, ಮಹಾಮಂಗಳಾತಿ ಪ್ರಸಾದ ವಿನಿಯೋಗ, ಅಗಮಿಸಿದ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯಕ್ರಮವು ನಡೆದವು.ಕೂಡಿಗೆ, ಮದಲಾಪುರ ಕಣಿವೆ, ಸೀಗೆಹೊಸೂರು ಕೂಡುಮಂಗಳೂರು ಹುದುಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ನೂರಾರು ಭಕ್ತರು ಪಾಲ್ಗೊಂಡಿದ್ದರು.