ದೇವಸ್ಥಾನಗಳು ಸಂಸ್ಕೃತಿ ವರ್ಗಾಯಿಸುವ ಕೇಂದ್ರಗಳು

KannadaprabhaNewsNetwork |  
Published : Jan 29, 2026, 01:15 AM IST
೨೮ಶಿರಾ೪: ಶಿರಾ ತಾಲ್ಲೂಕಿನ ಚಿಕ್ಕಗುಳ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ನೂತನ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಮಾಜಿ ಶಾಸಕರಾದ ಡಾ. ರಾಜೇಶ್ ಗೌಡ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು. | Kannada Prabha

ಸಾರಾಂಶ

ಹಿಂದೂ ಧರ್ಮದಲ್ಲಿ ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಲ್ಲ, ಅವು ಧರ್ಮ, ಸಂಸ್ಕಾರ, ಸಂಸ್ಕೃತಿ ಮತ್ತು ಪೌರಾಣಿಕ ಜ್ಞಾನವನ್ನು ಪೀಳಿಗೆಗಳಿಂದ ಪೀಳಿಗೆಗಳಿಗೆ ವರ್ಗಾಯಿಸುವ ಮಹತ್ವದ ಕೇಂದ್ರಗಳು ಎಂದು ಮಾಜಿ ಶಾಸಕ ಡಾ. ಸಿ.ಎಂ.ರಾಜೇಶ್ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಹಿಂದು ಧರ್ಮದಲ್ಲಿ ದೇವಸ್ಥಾನಗಳು ಕೇವಲ ಪೂಜಾ ಸ್ಥಳಗಳಲ್ಲ, ಅವು ಧರ್ಮ, ಸಂಸ್ಕಾರ, ಸಂಸ್ಕೃತಿ ಮತ್ತು ಪೌರಾಣಿಕ ಜ್ಞಾನವನ್ನು ಪೀಳಿಗೆಗಳಿಂದ ಪೀಳಿಗೆಗಳಿಗೆ ವರ್ಗಾಯಿಸುವ ಮಹತ್ವದ ಕೇಂದ್ರಗಳು ಎಂದು ಮಾಜಿ ಶಾಸಕ ಡಾ. ಸಿ.ಎಂ.ರಾಜೇಶ್ ಗೌಡ ಹೇಳಿದರು.

ಅವರು ಶಿರಾ ತಾಲೂಕಿನ ಚಿಕ್ಕಗುಳ ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ನೂತನ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಪೂಜೆ ಸಲ್ಲಿಸಿ ಮಾತನಾಡಿದರು. ಪುರಾಣಗಳು ಮತ್ತು ಇತಿಹಾಸದ ಮೂಲಕ ದೇವಸ್ಥಾನಗಳು ಮಾನವ ಜೀವನಕ್ಕೆ ಅಗತ್ಯವಾದ ಮೌಲ್ಯಗಳು ಹಾಗೂ ತತ್ವಗಳನ್ನು ಸಮಾಜಕ್ಕೆ ಬೋಧಿಸುತ್ತಿವೆ. ಲಕ್ಷ್ಮೀದೇವಿಯ ಸಹಿತ ನರಸಿಂಹ ಸ್ವಾಮಿ ಶಕ್ತಿ ಮತ್ತು ಕರುಣೆಯ ಸಮತೋಲನದ ಪ್ರತೀಕವಾಗಿದ್ದು, ಭಕ್ತರಿಗೆ ಅಭಯ, ಐಶ್ವರ್ಯ ಮತ್ತು ರಕ್ಷಣೆಯನ್ನು ನೀಡುವ ದೇವರಾಗಿದ್ದಾರೆ ಎಂದು ಅವರು ತಿಳಿಸಿದರು.

ಸಮಾಜದಲ್ಲಿ ಧಾರ್ಮಿಕ ಶ್ರದ್ಧೆಯ ಜೊತೆಗೆ ಸಾಮಾಜಿಕ ಏಕತೆ, ಆತ್ಮಶುದ್ಧಿ ಮತ್ತು ನೈತಿಕ ಜೀವನ ಮೌಲ್ಯಗಳನ್ನು ಬೆಳೆಸುವ ಶಕ್ತಿಕೇಂದ್ರಗಳು ದೇವಸ್ಥಾನಗಳು. ಇಂತಹ ಪವಿತ್ರ ಕ್ಷೇತ್ರಗಳು ಯುವ ಪೀಳಿಗೆಗೆ ಧರ್ಮದ ನೈಜ ಅರ್ಥವನ್ನು ತಿಳಿಸುವ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮುಖಂಡರಾದ ಕುಮಾರ್, ಮಲ್ಲೇಶ್, ಮಂಜುನಾಥ್, ರಂಗನಾಥ್ ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

4 ದಿನದಲ್ಲಿ 37 ಜನರಿಗೆ ನಾಯಿ ಕಡಿತ, ಬಾಲಕಿ ಗಂಭೀರ - 4 ನಗರಗಳಲ್ಲಿ ಬೀದಿ ನಾಯಿ, ಹುಚ್ಚು ನಾಯಿ ಕಡಿತ
ವಿಧಾನಸಭೆಯಲ್ಲಿ ಗಂಭೀರ ಆರೋಪ - ಮತ್ತೆ ಟೆಲಿಫೋನ್‌ ಕದ್ದಾಲಿಕೆ ಗದ್ದಲ!