ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಬಾಪೂಜಿ ನಗರದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಬುಧವಾರ ಆಯೋಜಿಸಿದ್ದ ನೂತನ ಶಿಲಾಮಯ ಗರ್ಭಮಂದಿರ ಮತ್ತು ನೂತನ ಕೋದಂಡ ರಾಮ ಹಾಗೂ ಗರುಡಗಂಭ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಸಾನ್ನಿಧ್ಯ ವಹಿಸಿ, ಅವರು ಆಶೀರ್ವಚನ ನೀಡಿದರು.
ನಮ್ಮ ಹಿಂದೂ ಧರ್ಮದಲ್ಲಿ ದೇವತಾ ಸಾನ್ನಿಧ್ಯ ಗಟ್ಟಿಯಾಗಲು ಮೂರ್ತಿ ಪ್ರತಿಷ್ಠಾಪಿಸಿದ ನಂತರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಪ್ರಾಣಪ್ರತಿಷ್ಠೆ ನೆರವೇರಿಸಿ, 12 ವರ್ಷಗಳಿಗೊಮ್ಮೆ ಕುಂಬಾಭಿಷೇಕ ಇನ್ನಿತರ ಕಾರ್ಯಕ್ರಮಗಳನ್ನು ಮಾಡಿ, ವಿಶೇಷವಾದ ಪ್ರಾಣಶಕ್ತಿಯನ್ನು ನೀಡುತ್ತೇವೆ. ಅಲ್ಲಿ ದೇವತಾ ಸಾನ್ನಿಧ್ಯ ವೃದ್ಧಿ ಆಗುತ್ತಿರುತ್ತದೆ ಎಂದರು.ಬೇರೆ ಧರ್ಮಗಳಲ್ಲಿ ದೇವತಾ ಮಂದಿರ ಎನ್ನುವುದು ಪಾಪಗಳ ತೊಳೆದುಕೊಳ್ಳಲು, ಕ್ಷಮೆ ಕೇಳಲು ಮತ್ತು ಸತ್ತ ಮೇಲೆ ಪರಲೋಕದಲ್ಲಿ ಒಳ್ಳೆಯ ಸ್ಥಾನ ನೀಡುವಂತೆ ಪ್ರಾರ್ಥಿಸಲು ಹೋಗುವ ತಾಣವೆಂದು ಹೇಳುತ್ತಾರೆ. ಆದರೆ, ನಮ್ಮ ಹಿಂದೂ ಧರ್ಮದಲ್ಲಿ ದೇವರ ಮೂರ್ತಿ ಪ್ರತಿಷ್ಠಾಪನೆಗೂ ಮುನ್ನವೇ ಕಲ್ಲಿನ ಆಯ್ಕೆಯಿಂದ ಹಿಡಿದು, ಪ್ರಾಣಪ್ರತಿಷ್ಠೆಯವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳಿಂದ ಸಾನ್ನಿಧ್ಯ ಉಂಟು ಮಾಡಲಾಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಪ್ರಮುಖರಾದ ಕೆ.ಬಿ.ಪ್ರಸನ್ನಕುಮಾರ್, ಜ್ಯೋತಿಪ್ರಕಾಶ್, ಮೋಹನ್ ರೆಡ್ಡಿ, ಸುವರ್ಣ ಶಂಕರ್, ನಾಗರಾಜ್, ಸುರೇಖಾ ಮುರಳಿಧರ್ ಮತ್ತಿತರರು ಇದ್ದರು.
- - - -21ಎಸ್ಎಂಜಿಕೆಪಿ08:ಕಾರ್ಯಕ್ರಮದಲ್ಲಿ ಭಕ್ತರು ಶ್ರೀ ಅಭಿನವ ಶಂಕರ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದುಕೊಂಡರು.