ಕನ್ನಡಪ್ರಭ ವಾರ್ತೆ ನಂಜನಗೂಡು
ತಾಲೂಕಿನ ಸಿಂಧುವಳ್ಳಿ ಗ್ರಾಮದ ಸರ್ವೆ ನಂ. 392 ರಲ್ಲಿ ತಾಲೂಕಿನ ವಸತಿ ರಹಿತ ಹಂದಿ ಜೋಗಿ ಸಮುದಾಯದ ಕುಟುಂಬಗಳಿಗೆ ನಿವೇಶನವನ್ನು ನೀಡಲು ಗುರುತು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಜಮೀನಿನ ಮಾಲೀಕ ಹೊರ ಹಾಕಿದ್ದರಿಂದ ಗುಡಿಸಲು ಕಳೆದುಕೊಂಡು ನೆಲೆ ಇಲ್ಲದೆ ಬೀದಿಗೆ ಬಿದ್ದಿರುವ ತಾಲೂಕಿನ ಹೊರಳವಾಡಿ ಹೊಸೂರು ಗ್ರಾಮದ ಪ. ಜಾತಿ ಹಂದಿಜೋಗಿ ಸಮುದಾಯದ ಎರಡು ಕುಟುಂಬಗಳನ್ನು ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು ನೇತೃತ್ವದ ಅಧಿಕಾರಿಗಳ ತಂಡ ಭೇಟಿ ಮಾಡಿ ಸಾಂತ್ವನ ಹೇಳಿದರು.ಸಂತ್ರಸ್ತ ಕುಟುಂಬಗಳು ನ್ಯಾಯಾಲಯದ ಆದೇಶದ ಹೆಸರಿನಲ್ಲಿ ಜಮೀನಿನ ಮಾಲೀಕರು ನಮ್ಮ ಮೇಲೆ ದಬ್ಬಾಳಿಕೆ ನಡೆಸಿದ್ದು, ಅವರ ವಿರುದ್ಧ ದೂರು ದಾಖಲಿಸಬೇಕು ಹಾಗೂ ಸ್ಥಳೀಯವಾಗಿ ವಾಸ್ತವ್ಯ ಹೂಡಲು ವಸತಿ ಸೌಕರ್ಯ ಕಲ್ಪಿಸಬೇಕು ಎಂದು ತಮ್ಮ ಅಳಲು ತೋಡಿಕೊಂಡರು.
ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಭೀಮರಾವ್ ವಡ್ಡಾರ್ ಮಾತನಾಡಿ, ವರ್ಲವಾಡಿ ವಸೂರು ಗ್ರಾಮದ ಸಂತ್ರಸ್ತ ಹಂದಿಜೋಗಿ ಕುಟುಂಬವನ್ನು ವಿದ್ಯಾಪೀಠದ ಕೌಶಲ್ಯ ಅಭಿವೃದ್ಧಿ ಇಲಾಖೆಗೆ ಸೇರಿದ ಜಾಗಕ್ಕೆ ತಾತ್ಕಾಲಿಕ ಸೌಕರ್ಯ ಒದಗಿಸಿ ಸ್ಥಳಾಂತರಿಸಲಾಗುವುದು, ಜೊತೆಗೆ ಒಂದು ತಿಂಗಳ ಪಡಿತರ ಸಾಮಗ್ರಿ ಸೇರಿದಂತೆ ಅಡುಗೆ ಸಾಮಗ್ರಿಗಳನ್ನು ವಿತರಿಸಲಾಗುವುದು ಎಂದರು.
ಮಾಜಿ ಸಚಿವ ಎನ್. ಮಹೇಶ್ ಭೇಟಿ:
ಬಳಿಕ ಮಾತನಾಡಿದ ಅವರು, ಕಳೆದ ಆರು ದಿನಗಳಿಂದ ಸಂತ್ರಸ್ಥರು ರಸ್ತೆ ಬದಿಯಲ್ಲಿಯೇ ಮಲಗಿದ್ದರೂ ತಾಲೂಕು ಆಡಳಿತದ ಪರ್ಯಾಯ ಕ್ರಮ ಕೈಗೊಳ್ಳದಿರುವುದು ಖಂಡನೀಯ, ಕಾಂಗ್ರೆಸ್ ಸರ್ಕಾರ ಹಾಗೂ ತಾಲೂಕು ಆಡಳಿತ ನಿಷ್ಕ್ರಿಯವಾಗಿದೆಯೇ ಎಂದು ಈ ಸಂದರ್ಭ ಆಕ್ರೋಶ ವ್ಯಕ್ತಪಡಿಸಿರಲ್ಲದೆ, ಈ ಕೂಡಲೇ ತಾಲೂಕು ಆಡಳಿತ ಸಂತ್ರಸ್ಥರಿಗೆ ಪರ್ಯಾಯ ಸೌಕರ್ಯ ಕಲ್ಪಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು.