ಕನ್ನಡಪ್ರಭ ವಾರ್ತೆ ಚಿಂತಾಮಣಿ
ನಗರಭಾಗದಲ್ಲಿ ವಾಹನಗಳನ್ನು ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಹಾಗೂ ಪಾದಚಾರಿ ಮಾರ್ಗದಲ್ಲಿ ವ್ಯಾಪಾರಸ್ಥರು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಕಾರಣ ಈ ತೆರವು ಕಾರ್ಯಾಚರಣೆ ಅನಿವಾರ್ಯವಾಗಿತ್ತು. ಚಿಂತಾಮಣಿ ನಗರವನ್ನು ಮಾದರಿ ನಗರವನ್ನಾಗಿಸುವುದೇ ನನ್ನ ಉದ್ದೇಶ ಎಂದು ಅವರು ಪತ್ರಕರ್ತರಿಗೆ ತಿಳಿಸಿದರು.
ಅಪಘಾತಕ್ಕೆ ಒತ್ತುವರಿ ಕಾರಣಚಿಂತಾಮಣಿ ನಗರದ ಪರಿಮಿತಿಯೊಳಗೆ ನಡೆಯುತ್ತಿದ್ದ ಅಪಘಾತಗಳಿಗೆ ಪಾದಚಾರಿ ಒತ್ತುವರಿಯೇ ಪ್ರಮುಖ ಕಾರಣವಾಗಿದೆ. ಅಧಿಕಾರಿಗಳು ಆಗಿಂದಾಗ್ಗೆ ವ್ಯಾಪಾರಸ್ಥರಿಗೆ ತಿಳಿವಳಿಕೆ ನೀಡಿ ವ್ಯಾಪಾರ, ವಹಿವಾಟುಗಳನ್ನು ನಿಮ್ಮ ಇತಿಮಿತಿಯೊಳಗೆ ಮಾಡಿಕೊಳ್ಳುವಂತೆ ಮನವರಿಕೆ ಮಾಡಿಕೊಟ್ಟಿದ್ದರೆ ಈ ಪರಿಸ್ಥಿತಿ ಎದುರಾಗುತ್ತಿರಲಿಲ್ಲ ಎಂದರು.
ಪಾದಚಾರಿ ರಸ್ತೆಗೆ ಟೆಂಡರ್
ಪಾದಚಾರಿ ರಸ್ತೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಪಾದಚಾರಿ ಮಾರ್ಗವನ್ನು ಆಧುನಿಕ ರೀತಿಯಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲಾಗುವುದು. ಪಾದಚಾರಿ ಮಾರ್ಗ ಹಾಗೂ ೮.೨೫ ಕೋಟಿ ವೆಚ್ಚದ ಪಾದಚಾರಿ ಹಾಗೂ ರಸ್ತೆ ಅಭಿವೃದ್ಧಿಗೂ ಬೇರೆ ರೀತಿಯ ವ್ಯವಸ್ಥೆಯನ್ನು ಕಲ್ಪಿಸುವುದಾಗಿ ನುಡಿದರು.ನಗರದ ಬೆಂಗಳೂರು ರಸ್ತೆಯ ಆಯ್ದ ಭಾಗ ಹಾಗೂ ಚೇಳೂರು ರಸ್ತೆಯ ಡಾಂಬರೀಕರಣವನ್ನು 5 ಕೋಟಿ ರು .ವೆಚ್ಚದಲ್ಲಿ ಮಾಡಲಾಗುವುದು. ಚಿಕ್ಕಬಳ್ಳಾಪುರದಿಂದ ಮುಳಬಾಗಿಲಿನವರೆಗಿನ (ಎಂ.ಜಿ.ರಸ್ತೆ) ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿರೊಂದಿಗೆ ಮಾತುಕತೆ ನಡೆಸಿದ್ದು ಕಾಮಗಾರಿ ಆರಂಭಗೊಂಡು ಶ್ರೀಘ ಮುಗಿಯಲಿದೆ ಎಂದರು.