ಹುಬ್ಬಳ್ಳಿ:
ನಗರದ ಗೋಕುಲ ಬಸ್ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಧಾರವಾಡ ನಗರ ಬಸ್ ನಿಲ್ದಾಣ, ಗೋಕುಲ ರಸ್ತೆ ನವೀಕೃತ ಬಸ್ ನಿಲ್ದಾಣಗಳ ಉದ್ಘಾಟನೆ ಹಾಗೂ ಅಪಘಾತ, ಅಪರಾಧ ರಹಿತ ಸೇವೆ ಸಲ್ಲಿಸಿ ಚಾಲನಾ ಸಿಬ್ಬಂದಿಗೆ ಬೆಳ್ಳಿ ಪದಕ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
300 ಬಸ್ ಟೆಂಡರ್ ಕರೆದಿರುವ ಪೈಕಿ ಈಗಾಗಲೇ 150 ಬಸ್ಗೆ ಅನುಮೋದನೆ ನೀಡಿದ್ದು, ಚಳಿಗಾಲದ ಅಧಿವೇಶನ ಬಳಿಕ ಸಂಸ್ಥೆಗೆ ಮತ್ತಷ್ಟು ಬಸ್ ನೀಡಲಾಗುವುದು ಎಂದು ಭರವಸೆ ನೀಡಿದರು.ಬಸ್ ನಿಲ್ದಾಣಗಳಲ್ಲಿ ಮೂತ್ರಾಲಯ, ಶೌಚಾಲಯಗಳ ಅವ್ಯವಸ್ಥೆ ಮತ್ತು ಅನಗತ್ಯವಾಗಿ ಜನರಿಂದ ಹಣ ವಸೂಲಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಬರುತ್ತಿವೆ. ಇನ್ಮುಂದೆ ಬಂದರೆ ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ರಾಜ್ಯದ ಸಾರಿಗೆ ಸಂಸ್ಥೆಗೆ ಈವರೆಗೆ ದೊರೆತ 670 ಪ್ರಶಸ್ತಿಗಳಲ್ಲಿ 400 ಪ್ರಶಸ್ತಿಗಳು ರಾಮಲಿಂಗಾರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ ಬಂದಿವೆ ಎನ್ನುವುದು ಹೆಗ್ಗಳಿಕೆ. ಇಡೀ ದೇಶದಲ್ಲೇ ಕರ್ನಾಟಕವು ಜಿಎಸ್ಟಿ, ಎಫ್ಡಿಐ, ತಲಾದಾಯ, ಜಿಡಿಪಿಗಳಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.ಬಾಕಿ ಹಣ ಬಿಡುಗಡೆಗೆ ಮನವಿ:ವಾಕರಸಾ ಸಂಸ್ಥೆಯ ಅಧ್ಯಕ್ಷ ರಾಜು ಕಾಗೆ ಮಾತನಾಡಿ, ಸಂಸ್ಥೆಯು ನೋ ಲಾಸ್ ನೋ ಪ್ರಾಫಿಟ್ನಲ್ಲಿ ಸೇವೆ ನೀಡುತ್ತಿದ್ದು, ಸಂಸ್ಥೆಗೆ ಇನ್ನಷ್ಟು ಬಸ್ಗಳನ್ನು ಒದಗಿಸಬೇಕು. ವಿವಿಧ ಅಭಿವೃದ್ಧಿ ಕಾರ್ಯ ಹಮ್ಮಿಕೊಳ್ಳಲು ಶಕ್ತಿ ಯೋಜನೆಯ ಬಾಕಿ ಹಣ 930 ಕೋಟಿ ರೂ. ಬಿಡುಗಡೆಗೊಳಿಸಬೇಕೆಂದು ಮನವಿ ಮಾಡಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಸಂಸ್ಥೆಯಲ್ಲಿ ಬಸ್ಗಳ ಕೊರತೆ ನೀಗಿಸಬೇಕು. ನಿಲ್ದಾಣಗಳ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದರು.ವಿಧಾನ ಪರಿಷತ್ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಎಂಎಲ್ಸಿಗಳಾದ ಪ್ರದೀಪ ಶೆಟ್ಟರ, ಎಫ್.ಎಚ್. ಜಕ್ಕಪ್ಪನವರ, ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್.ಆರ್. ಪಾಟೀಲ, ಮೇಯರ್ ಜ್ಯೋತಿ ಪಾಟೀಲ, ಸಂಸ್ಥೆ ಉಪಾಧ್ಯಕ್ಷ ಸುನೀಲ ಹಣಮನ್ನವರ, ಜಿಪಂ ಸಿಇಒ ಭುವನೇಶ ಪಾಟೀಲ, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ, ಬಿಆರ್ಟಿಎಸ್ ಎಂಡಿ ಸಾವಿತ್ರಿ ಕಡಿ, ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಇಲಾಖಾ ಮುಖ್ಯಸ್ಥ ವಿವೇಕಾನಂದ ವಿಶ್ವಜ್ಞ ಇತರರು ಇದ್ದರು.ಬೆಳ್ಳಿ ಪದಕ ವಿತರಣೆ...
5 ವರ್ಷ ನಿರಂತರ ಅಪಘಾತ ರಹಿತ ಸೇವೆ ಸಲ್ಲಿಸಿದ 161 ಚಾಲಕರಿಗೆ ಬೆಳ್ಳಿ ಪದಕ ವಿತರಿಸಿ ಸನ್ಮಾನಿಸಲಾಯಿತು. ಮೃತ ಸಂಸ್ಥೆಯ ನೌಕರರ ಅಲವಂಬಿತರಿಗೆ ವಿಮೆ ಯೋಜನೆಯಡಿ ₹ 1 ಕೋಟಿ ಪರಿಹಾರ ಚೆಕ್ ವಿತರಿಸಲಾಯಿತು. ಗ್ರುಪ್ ಟರ್ಮ್ ಲೈಫ್ ಇನ್ಸೂರೆನ್ಸ್ ಯೋಜನೆಯಡಿ ಸಹಜ ನಿಧನ ಹೊಂದಿದ ನೌಕರರ ಕುಟುಂಬದ ಅವಲಂಬಿತರಿಗೆ ₹ 6 ಲಕ್ಷ ಪರಿಹಾರ ಚೆಕ್ ನೀಡಲಾಯಿತು.