ಟೆಂಗಿನಕಾಯಿ ಜನ್ಮದಿನ: ರಕ್ತದಾನ, ಆರೋಗ್ಯ ತಪಾಸಣೆ

KannadaprabhaNewsNetwork |  
Published : Jun 25, 2025, 01:18 AM IST
ಜನ್ಮದಿನ | Kannada Prabha

ಸಾರಾಂಶ

ರಕ್ತದಾನ ಶಿಬಿರದಲ್ಲಿ ನೂರಾರು ಜನರು ಆಗಮಿಸಿ, ರಕ್ತದಾನ ಮಾಡಿದರು. ನಂತರ ನಡೆದ ಕಾರ್ಯಕ್ರಮಗಳಲ್ಲಿ ವಿಕಲಚೇತನರಿಗೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಉಚಿತ ಕೃತಕ ಕಾಲು ಜೋಡಣಾ ಶಿಬಿರಕ್ಕೆ ಚಾಲನೆ ನೀಡಿದರು. 10ಕ್ಕೂ ಅಧಿಕ ವಿಕಲಚೇತನರಿಗೆ ಕೃತಕ ಕಾಲು ಜೋಡಣೆ ಮಾಡಲಾಯಿತು.

ಹುಬ್ಬಳ್ಳಿ: ಶಾಸಕ ಮಹೇಶ ಟೆಂಗಿನಕಾಯಿ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳಿಂದ ನಗರದಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು.

ನಗರದ ಗೋಕುಲ ರಸ್ತೆಯ ಹೋಟೆಲ್‌ ಸಭಾಭವನದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಶಾಸಕ ಟೆಂಗಿನಕಾಯಿ ಅವರಿಂದ ಜನ್ಮದಿನದ ಕೇಕ್‌ ಕತ್ತರಿಸುವ ಮೂಲಕ, ಜನ್ಮ ದಿನದ ಶುಭಾಶಯ ಕೋರಿದರು. ನಂತರ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

ರಕ್ತದಾನ ಶಿಬಿರದಲ್ಲಿ ನೂರಾರು ಜನರು ಆಗಮಿಸಿ, ರಕ್ತದಾನ ಮಾಡಿದರು. ನಂತರ ನಡೆದ ಕಾರ್ಯಕ್ರಮಗಳಲ್ಲಿ ವಿಕಲಚೇತನರಿಗೆ ಶಾಸಕ ಮಹೇಶ ಟೆಂಗಿನಕಾಯಿ ಅವರು ಉಚಿತ ಕೃತಕ ಕಾಲು ಜೋಡಣಾ ಶಿಬಿರಕ್ಕೆ ಚಾಲನೆ ನೀಡಿದರು. 10ಕ್ಕೂ ಅಧಿಕ ವಿಕಲಚೇತನರಿಗೆ ಕೃತಕ ಕಾಲು ಜೋಡಣೆ ಮಾಡಲಾಯಿತು. ಮೂರು ಸಾವಿರಮಠದ ಪೀಠಾಧ್ಯಕ್ಷರಾದ ಡಾ. ಗುರುಸಿದ್ಧರಾಜಯೋಗೀಂದ್ರ ಶ್ರೀಗಳ ತುಲಭಾರವನ್ನು ಟೆಂಗಿನಕಾಯಿ ನೆರವೇರಿಸಿದರು. ಇದೇ ವೇಳೆ ಶ್ರೀಗಳು ಶಾಸಕರನ್ನು ಆಶೀರ್ವದಿಸುವ ಮೂಲಕ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಮೇಯರ್‌ ವೀರಣ್ಣ ಸವಡಿ, ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಯುವ ಮುಖಂಡ ವೆಂಕಟೇಶ ಕಾಟವೆ, ವಿನೋದಕುಮಾರ ಪಿ. ಪಟವಾ ಸೇರಿದಂತೆ ಅನೇಕ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!