ಹುಬ್ಬಳ್ಳಿ:
ಕೊಲೆ ಮಾಡಿ ಪರಾರಿಯಾಗುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಇಡೀ ನಗರವನ್ನೇ ತಲ್ಲಣಗೊಳಿಸಿದ್ದು, ವಿದ್ಯಾರ್ಥಿ ಸಮೂಹ ಬೆಚ್ಚಿ ಬಿದ್ದಿದೆ.
ಎಂಸಿಎ ಮೊದಲ ವರ್ಷದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (24) ಎಂಬುವಳೇ ಕೊಲೆಯಾದ ವಿದ್ಯಾರ್ಥಿನಿ. ಈಕೆ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಪುತ್ರಿ.ಅದೇ ಕಾಲೇಜಿನಲ್ಲಿ ಹಳೇ ವಿದ್ಯಾರ್ಥಿ ಫಯಾಜ್ ಎಂಬಾತನೇ ಕೊಲೆ ಮಾಡಿದವನು. ಈತ ಹಾಗೂ ನೇಹಾ ಇಬ್ಬರು ಬಿಸಿಎನಲ್ಲಿ ಸಹಪಾಠಿಗಳಾಗಿದ್ದರಂತೆ. ಈತ ಬಿಸಿಎನಲ್ಲಿ ಅನುತ್ತೀರ್ಣನಾಗಿದ್ದನಂತೆ. ಆದರೆ ನೇಹಾ ಉತ್ತೀರ್ಣಳಾಗಿ ಎಂಸಿಎ ಮಾಡುತ್ತಿದ್ದಳು. ಬೆಳಗಾವಿ ಜಿಲ್ಲೆಯ ಸವದತ್ತಿಯ ಮೂಲದವನಾದ ಈತನನ್ನು ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ನೇಹಾ ಗುರುವಾರ ಸಂಜೆ ತರಗತಿ ಮುಗಿಸಿಕೊಂಡು ಮನೆಗೆ ಹೊರಡುತ್ತಿದ್ದಾಗ ಕಾಲೇಜು ಕ್ಯಾಂಪಸ್ನಲ್ಲೇ ಮಾಸ್ಕ್ ಹಾಕಿಕೊಂಡು ಬಂದ ಫಯಾಜ್, ನೇಹಾ ಮೇಲೆ ಮನ ಬಂದಂತೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿಗೆ ಹೀಗೆ ಬರೋಬ್ಬರಿ 9 ಬಾರಿ ಇರಿದು ಚಾಕು ಅಲ್ಲೇ ಎಸೆದು ಪರಾರಿಯಾಗಿದ್ದಾನೆ.
ಅರ್ಧಗಂಟೆಯಲ್ಲೇ ಬಂಧನ:
ಪ್ರೀತಿಗೆ ನಿರಾಕರಣೆ ಕೊಲೆ?
ಮುಗಿಲು ಮುಟ್ಟಿದ ಆಕ್ರಂದನ:
ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ಪ್ರಸಾದ ಅಬ್ಬಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಕಾಂಗ್ರೆಸ್ ಮುಖಂಡರಾದ ಮೋಹನ ಅಸುಂಡಿ ಸೇರಿದಂತೆ ಹಲವರು ಸ್ಥಳಕ್ಕೆ ಆಗಮಿಸಿ ಪಾಲಕರಿಗೆ ಸಾಂತ್ವನ ಹೇಳಿದರು.
ಬೆಚ್ಚಿಬಿದ್ದ ಸಹಪಾಠಿಗಳು:
ತರಗತಿ ಮುಗಿಸಿಕೊಂಡು ಮನೆಗೆ ಹೊರಟಿದ್ದ ವಿದ್ಯಾರ್ಥಿಗಳ ಎದುರಿನಲ್ಲೇ ನಡೆದ ಈ ಭೀಕರ ಕೃತ್ಯ ಅವರನ್ನು ಬೆಚ್ಚಿ ಬೀಳುವಂತೆ ಮಾಡಿದೆ. ಏಕಾಏಕಿ ಚಾಕುವಿನಿಂದ ನೇಹಾಳಿಗೆ ಇರಿಯುವುದನ್ನು ಕಂಡು ಕೆಲ ವಿದ್ಯಾರ್ಥಿನಿಯರು ಅಲ್ಲಿಯೇ ಮೂರ್ಚೆ ಬಿದ್ದಿದ್ದಾರಲ್ಲದೇ, ಕೈಕಾಲುಗಳಲ್ಲಿ ನಡುಕ ಹುಟ್ಟಿ ಮನೆಗೆ ಹೋಗಲು ಆಗದೇ ಪಾಲಕರನ್ನು ಕಾಲೇಜಿಗೆ ಕರೆಯಿಸಿ ಅವರೊಂದಿಗೆ ಮನೆಗೆ ತೆರಳಿದ್ದಾರೆ. ಘಟನೆಯನ್ನು ಕಣ್ಣಾರೆ ನೋಡಿದ ಕೆಲ ವಿದ್ಯಾರ್ಥಿನಿಯರಿಗೆ ಜ್ವರ ಕೂಡಾ ಬಂದಿದೆ ಎಂದು ಹೇಳಲಾಗುತ್ತದೆ.ಎಬಿವಿಪಿ ಪ್ರತಿಭಟನೆ:
ನೇಹಾ ಕೊಲೆ ಘಟನೆ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಸಂಜೆ ಬಿವಿಬಿ ಕಾಲೇಜ್ ಎದುರಿಗೆ ಬೃಹತ್ ಪ್ರತಿಭಟನೆ ನಡೆಸಿದರು. ಕೊಲೆ ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿ ರಸ್ತೆತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಿವಿಬಿ ಕಾಲೇಜ್ನಲ್ಲಿ ವಿದ್ಯಾರ್ಥಿನಿಯೋರ್ವಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಕೆಲನಿಮಿಷದಲ್ಲೇ ಆರೋಪಿಯನ್ನು ಬಂಧಿಸಿದ್ದೇವೆ. ಕೊಲೆಗೆ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದ್ದಾರೆ.