ಭೀಕರ ರಸ್ತೆ ಅಪಘಾತ- ಟ್ಯ್ರಾಕ್ಟರ್‌ ಚಾಲಕ ಸಾವು

KannadaprabhaNewsNetwork |  
Published : May 13, 2026, 02:00 AM IST
ಜಮಖಂಡಿ ನಗರದ ಹೊರವಲಯ ಮುಧೋಳ ರಸ್ತೆಯ ಪಕ್ಕದ ಹಳ್ಳಕ್ಕೆ ಟ್ಯ್ರಾಕ್ಟರ್‌ ಉರುಳಿ ಬಿದ್ದಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. | Kannada Prabha

ಸಾರಾಂಶ

ಜಮಖಂಡಿ ನಗರದ ಹೊರವಲಯ ಮುಧೋಳ ರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ನಗರದ ಹೊರವಲಯ ಮುಧೋಳ ರಸ್ತೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ಶಿರನಾಳ ಗ್ರಾಮದ ಬಂದೇನವಾಜ ಲಾಲಸಾಹೇಬ ಶೇಖ (28) ಮೃತ ಚಾಲಕ.

ಡಾಂಬರ್‌ ಕಾಯಿಸುವ ಫೆವರ್‌ ವಾಹನವನ್ನು ಟ್ರ್ಯಾಕ್ಟರ್‌ ನೊಂದಿಗೆ ಎಳೆದುಕೊಂಡು ಮುಧೋಳ ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ ನಡೆದಿದೆ ಟ್ಯ್ರಾಕ್ಟರ್‌ ಚಾಕನ ಅಯ ತಪ್ಪಿದ ಪರಿಣಾಮ ಹಳ್ಳಕ್ಕೆ ವಾಹನ ಉರುಳಿಬಿದ್ದು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮುಧೋಳ ತಾಲುಕಿನ ಮುಗಳಖೋಡ ಗ್ರಾಮದ ರಾಜೇಸಾಹೇಬ ಜಾತಗಾರ ಅವರಿಗೆ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಪ್ಪ ಮಡ್ಡಿ. ಶಹರ ಪೊಲೀಸ್‌ ಠಾಣೆಯ ಪಿಎಸ್‌ಐ ಅನೀಲ ಕುಂಬಾರ, ಗ್ರಾಮೀಣ ಪಿಎಸ್‌ಐ ಗಂಗಾಧರ ಪೂಜಾರಿ ಹಾಗೂ ಅಗ್ನಿ ಶಾಮಕ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನದ ಕೆಳಭಾಗದಲ್ಲಿ ಸಿಲುಕಿದ್ದ ಚಾಲಕ ನನ್ನು ಹೊರತೆಗೆಯಲು ಹರ ಸಾಹಸ ಪಟಬೇಕಾಯಿತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

36 ಕೆರೆ ಭರ್ತಿಗೆ ಆಗ್ರಹ: ರೈತ ಸಂಘದ ಪ್ರತಿಭಟನೆ
ಶೈಕ್ಷಣಿಕ ಕ್ಷೇತ್ರದಲ್ಲಿ ಸಿಂದಗಿ ಉನ್ನತ ಸಾಧನೆ