ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಆ.1ರಂದು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಐತಿಹಾಸಿಕವಾಗಿದ್ದು, ಇದರಲ್ಲಿ ಒಳ ಮೀಸಲಾತಿ ಕುರಿತು ಇದ್ದ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಈ ತೀರ್ಪನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ ಎಂದು ಸ್ಪಷ್ಟವಾಗಿ ಹೇಳಿದೆ. ಸುಪ್ರೀಂಕೋರ್ಟ್ ಆದೇಶ ಬಂದು ಒಂದು ತಿಂಗಳು ಕಳೆದಿದ್ದರೂ ರಾಜ್ಯ ಸರ್ಕಾರ ಆದೇಶವನ್ನು ಅನುಷ್ಠಾನ ಗೊಳಿಸದೇ ಸುಮ್ಮನೆ ಇದೆ. ಒಂದು ರೀತಿಯಲ್ಲಿ ಸರ್ಕಾರ ನಿದ್ದೆ ಹೊಡೆಯುತ್ತಿದೆ. ಈ ನಿದ್ದೆ ಹೊಡೆಯುತ್ತಿರುವ ಸರ್ಕಾರವನ್ನು ಬಡಿದೆಬ್ಬಿಸಲು ಈ ತಮಟೆ ಚಳವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಜೊತೆಗೆ ಜೂ.9ರ ಡಿಎಸ್ ಎಸ್ ಸಂಸ್ಥಾಪಕ ಪ್ರೊ.ಬಿ.ಕೃಷ್ಣಪ್ಪನವರ ಜನ್ಮದಿನವನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸ ಬೇಕು, ಪ್ರೊ..ಕೃಷ್ಣಪ್ಪನವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು, ಬಾಕಿ ಉಳಿದಿರುವ ಬ್ಯಾಕ್ ಲ್ಯಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು, ಬಗರ್ ಹುಕುಂ ಸಾಗುವಳಿಯನ್ನು ಸಕ್ರಮಗೊಳಿಸಿ ಹಕ್ಕುಪತ್ರ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಪಡಿಸಿದರು.