10 ದಿನ ನಡೆದ ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ತೆರೆ

KannadaprabhaNewsNetwork |  
Published : Dec 20, 2025, 04:30 AM ISTUpdated : Dec 20, 2025, 05:52 AM IST
Belagavi session

ಸಾರಾಂಶ

ಗೃಹಲಕ್ಷ್ಮಿ ಬಾಕಿ, ದ್ವೇಷ ಭಾಷಣ ವಿಧೇಯಕದ ವಿಚಾರವಾಗಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದ 10 ದಿನಗಳ ಕಾಲ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಶುಕ್ರವಾರ ಸಂಪನ್ನವಾಗಿದ್ದು, ಉಭಯ ಸದನಗಳ ಕಲಾಪವನ್ನು ಅನಿರ್ಧಿಷ್ಟಾವಧಿವರೆಗೆ ಮುಂದೂಡಲಾಯಿತು.

ಸುವರ್ಣ ವಿಧಾನಸೌಧ : ಗೃಹಲಕ್ಷ್ಮಿ ಬಾಕಿ, ದ್ವೇಷ ಭಾಷಣ ವಿಧೇಯಕದ ವಿಚಾರವಾಗಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದ 10 ದಿನಗಳ ಕಾಲ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಶುಕ್ರವಾರ ಸಂಪನ್ನವಾಗಿದ್ದು, ಉಭಯ ಸದನಗಳ ಕಲಾಪವನ್ನು ಅನಿರ್ಧಿಷ್ಟಾವಧಿವರೆಗೆ ಮುಂದೂಡಲಾಯಿತು.

23 ವಿಧೇಯಕಗಳು ಈ ಅಧಿವೇಶನದಲ್ಲಿ ಅಂಗೀಕಾರ

ದ್ವೇಷ ಭಾಷಣ, ಸಾಮಾಜಿಕ ಬಹಿಷ್ಕಾರ ನಿಷೇಧ ಸೇರಿ ಬರೋಬ್ಬರಿ 23 ವಿಧೇಯಕಗಳು ಈ ಅಧಿವೇಶನದಲ್ಲಿ ಅಂಗೀಕಾರವಾದವು. ದ್ವೇಷ ಭಾಷಣ ಮಸೂದೆ ಸದನದಲ್ಲಿ ತೀವ್ರ ಚರ್ಚೆಗೆ ಒಳಪಟ್ಟಿದ್ದಷ್ಟೇ ಅಲ್ಲದೆ, ಪ್ರತಿಪಕ್ಷಗಳ ವಿರೋಧದ ನಡುವೆಯೇ ಅನುಮೋದನೆ ಪಡೆಯಿತು. ಪ್ರತಿಪಕ್ಷಗಳ ಸದಸ್ಯರು ವಿಧೇಯಕದ ಪ್ರತಿಗಳನ್ನು ಹರಿದು ಎಸೆಯವಂಥ ಘಟನೆಗೂ ಸಾಕ್ಷಿಯಾಯಿತು.

ಇದೇ ಮೊದಲ ಬಾರಿಗೆ ಸದನ ಪ್ರಾರಂಭವಾಗಿ 2ನೇ ದಿನದಿಂದಲೇ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಶುರುವಾಗಿದ್ದು ವಿಶೇಷ. ಉ.ಕ. ಸಮಸ್ಯೆ ಬಗ್ಗೆ ವಿಧಾನಸಭೆಯಲ್ಲಿ ಬರೋಬ್ಬರಿ 39 ಸದಸ್ಯರು 17.02 ಗಂಟೆಗಳ ಕಾಲ ಚರ್ಚೆ ಮಾಡಿದರೆ, ಪರಿಷತನಲ್ಲಿ 12 ಜನ ಸದಸ್ಯರು 5 ಗಂಟೆಗೂ ಹೆಚ್ಚು ಕಾಲ ಚರ್ಚಿಸಿದರು. ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ, ಭೀಮಾ ನದಿ ಹೆಚ್ಚುವರಿಯಾಗಿ ಪಡೆಯಲು ಮಹಾರಾಷ್ಟ್ರದವರು ನಿರ್ಮಿಸಿಕೊಂಡಿರುವ ಅಕ್ರಮ ಸುರಂಗ ಮಾರ್ಗ, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ಬೆಂಬಲ ಬೆಲೆ ನೀಡುವುದು, ಅತಿವೃಷ್ಟಿಯಿಂದ ಹಾನಿಗೀಡಾದ ಬೆಳೆಗೆ ಪರಿಹಾರ ಸೇರಿ ಹತ್ತು ಹಲವು ವಿಷಯಗಳ ಕುರಿತು ಸದಸ್ಯರು ಪಕ್ಷಾತೀತವಾಗಿ ಬೆಳಕು ಚೆಲ್ಲಿದರು.

ಇದೇ ವೇಳೆ ಪ್ರತಿವರ್ಷ ಪ್ರಸ್ತಾಪಿಸಿದ ವಿಷಯ, ಸಮಸ್ಯೆಗಳ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಆದರೆ ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಮಾತ್ರ ಪರಿಹಾರ ಸಿಗುತ್ತಿಲ್ಲ. ಸದನ ನಡೆಸುವುದೇಕೆ? ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಸಿಗುವುದು ಯಾವಾಗ? ಎಂದು ಸದಸ್ಯರು ಪ್ರಶ್ನಿಸಿದ್ದಕ್ಕೆ ಉತ್ತರ ಮಾತ್ರ ಸಿಗಲಿಲ್ಲ.

ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದ ಮುಖ್ಯಮಂತ್ರಿ

ಈ ನಡುವೆ ಉಭಯ ಸದನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ವಿಧಾನಸಭೆಯಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಹಾಗೂ ವಿಧಾನ ಪರಿಷತ್ತಿನಲ್ಲಿ ಸುಮಾರು ನಾಲ್ಕು ಗಂಟೆಗೂ ಹೆಚ್ಚು ಕಾಲ ಉತ್ತರ ನೀಡುವ ಮೂಲಕ ಸದಸ್ಯರನ್ನು ಸಮಾಧಾನಪಡಿಸಲು ಯತ್ನಿಸಿದರು. ಜತೆಗೆ ಉತ್ತರ ಕರ್ನಾಟಕದಲ್ಲಿ ಪ್ರಾದೇಶಿಕ ಅಸಮಾನತೆ ಇರುವುದನ್ನು ಒಪ್ಪಿಕೊಂಡರಲ್ಲದೆ ಅದರ ನಿವಾರಣೆಗೆ ಸರ್ಕಾರ ಏನೇನು ಕ್ರಮ ಕೈಗೊಳ್ಳುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿದರು.

ನಡುಗಿಸಿದ ಗೃಹಲಕ್ಷ್ಮಿ:

ಈ ನಡುವೆ ಶಾಸಕ ಮಹೇಶ ಟೆಂಗಿನಕಾಯಿ ಸದನದ ಮೂರನೇ ದಿನ ಪ್ರಸ್ತಾಪಿಸಿದ ಗೃಹಲಕ್ಷ್ಮಿ ಯೋಜನೆ ಎರಡು ಕಂತು ಬಾಕಿ ಸರ್ಕಾರವನ್ನು ಅಕ್ಷರಶಃ ನಡುಗಿಸಿತು. ಕೊನೆಗೆ ಸರ್ಕಾರದ ಪರ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸದನಕ್ಕೆ ಕ್ಷಮೆ ಕೇಳಿದ್ದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!