ಸಂಭ್ರಮದಿಂದ ನಡೆದ 35ನೇ ವರ್ಷದ ಲಕ್ಷ ದೀಪೋತ್ಸವ

KannadaprabhaNewsNetwork |  
Published : Jan 15, 2025, 12:47 AM IST
14ಕೆಎಂಎನ್ ಡಿ29,40 | Kannada Prabha

ಸಾರಾಂಶ

ಬಸ್ ನಿಲ್ದಾಣ, ಪೇಟೆ ಬೀದಿಗಳನ್ನು ಸೇರಿದಂತೆ ಪುರಸಭ ವೃತ್ತ, ಅಂಬೇಡ್ಕರ್ ವೃತ್ತ, ಬಾತು ಕೋಳಿ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪ ಹಾಗೂ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಭಕ್ತರು, ದಾನಿಗಳು ನೆರವಿನಿಂದ ಲಕ್ಷ ದೀಪೋತ್ಸವ ಸಮಿತಿ ಕಾರ್ಯಕರ್ತರು ಎಣ್ಣೆ, ದೀಪಗಳನ್ನು ಸಂಗ್ರಹಿಸಿತ್ತು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಟ್ಟಣದ ಶ್ರೀರಂಗನಾಥಸ್ವಾಮಿ ದೇವಾಲಯದ ಮುಂಭಾಗದಲ್ಲಿ ಮಕರ ಸಂಕ್ರಾಂತಿ ಅಂಗವಾಗಿ 35ನೇ ವರ್ಷದ ಲಕ್ಷ ದೀಪೋತ್ಸವ ಸಡಗರ ಸಂಭ್ರಮದಿಂದ ಮಂಗಳವಾರ ಸಂಜೆ ನಡೆಯಿತು.

ದೀಪೋತ್ಸವದ ಅಂಗವಾಗಿ ಶ್ರೀರಂಗನಾಥಸ್ವಾಮಿ ದೇವಾಲಯ ಸೇರಿದಂತೆ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ದೇಗುಲದ ಮುಂಭಾಗದಿಂದ ಬಾತುಕೋಳಿ ವೃತ್ತದವರೆಗೆ ಸುಮಾರು 300 ಮೀಟರ್ ದೂರದವರೆಗೆ ಲಕ್ಷಾಂತರ ಮಣ್ಣಿನ ದೀಪಗಳನ್ನು ಹೊತ್ತಿಸಿ ಭಕ್ತಿ ಭಾವ ಮೆರೆದರು. ಇದರಿಂದ ದೇವಾಲಯದ ಅಂಗಳ ಬೆಳಕಿನೊಂದಿಗೆ ಕಂಗೊಳಿಸುತ್ತಿತ್ತು.

ರಸ್ತೆ ಎರಡು ಬದಿಗಳಲ್ಲಿ ಬಿದಿರಿನ ದಬ್ಬಗೆಳ ಪಟ್ಟಿ ಮೇಲೆ ಸಗಣಿ ಇಟ್ಟು ಮಣ್ಣಿನ ದೀಪಗಳನ್ನು ಜೋಡಿಸಿ ಅವುಗಳಿಗೆ ಎಣ್ಣೆ ಬತ್ತಿಗಳನ್ನು ಹಾಕಿ ಬೀಪಗಳನ್ನು ಹೊತ್ತಿಸುತ್ತಿದ್ದ ದೃಶ್ಯ ಕಣ್ಮನ ಸೆಳೆಯಿತು. ಪಟ್ಟಣದ ಕೋಟೆ ಬಾಗಿಲಿಗೆ ಸಂಕ್ರಾಂತಿ ಹಬ್ಬದ ಲಕ್ಷ ದೀಪೋತ್ಸವದ ಕಮಾನು ಹಾಕಲಾಗಿತ್ತು.

ಬಸ್ ನಿಲ್ದಾಣ, ಪೇಟೆ ಬೀದಿಗಳನ್ನು ಸೇರಿದಂತೆ, ಪುರಸಭ ವೃತ್ತ, ಅಂಬೇಡ್ಕರ್ ವೃತ್ತ, ಬಾತು ಕೋಳಿ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪ ಹಾಗೂ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು. ಭಕ್ತರು, ದಾನಿಗಳು ನೆರವಿನಿಂದ ಲಕ್ಷ ದೀಪೋತ್ಸವ ಸಮಿತಿ ಕಾರ್ಯಕರ್ತರು ಎಣ್ಣೆ, ದೀಪಗಳನ್ನು ಸಂಗ್ರಹಿಸಿತ್ತು.

ಬೆಳಗ್ಗೆ ಶ್ರೀರಂಗನಾಥಸ್ವಾಮಿ ದೇವರಿಗೆ ವಿಶೇಷ ಬೆಣ್ಣೆ ಅಲಂಕಾರ ಮಾಡಲಾಗಿತ್ತು. ಸಂಜೆ ಸೂರ್ಯ ಅಸ್ತಮ ಸಮಯಕ್ಕೆ ದೇವಾಲಯದ ಆವರಣದಲ್ಲಿ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಲಾಯಿತು. ಮಂಡ್ಯ, ಮೈಸೂರು, ಬೆಂಗಳೂರು, ಶ್ರೀರಂಗಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳು ಸೇರಿದಂತೆ ಲಕ್ಷಾಂತರ ಭಕ್ತರು ಆಗಮಿಸಿ ಲಕ್ಷದೀಪ ಹಾಗೂ ಶ್ರೀರಂಗನಾಥನ ದರ್ಶನ ಪಡೆದರು.

ದೇವಾಲಯದಲ್ಲಿ ವರ್ಷಕ್ಕೊಮ್ಮೆ ತೆಗೆಯುವ ಸ್ವರ್ಗದ ಬಾಗಿಲನ್ನು ತೆಗೆದು ಭಕ್ತರಿಗೆ ಒಳ ಪ್ರವೇಶಿಸಲು ಅವಕಾಶ ಮಾಡಲಾಗಿತ್ತು. ಇದಕ್ಕಾಗಿ ಸಹಸ್ರಾರು ಭಕ್ತರು ಸಾಲುಗಟ್ಟಿ ಸ್ವರ್ಗದ ಬಾಗಿಲನ್ನು ಪ್ರವೇಶಿಸಲು ದೇವಾಲಯದ ಒಳಗೆ ನಿಂತಿದ್ದ ದೃಶ್ಯ ಕಂಡು ಬಂತು.

ಲಕ್ಷ ದೀಪೋತ್ಸವದ ಅಂಗವಾಗಿ ಸಹಸ್ರಾರು ಭಕ್ತರು ಆಗಮಿಸಿದ್ದರಿಂದ ಪ್ರವೇಶ ದ್ವಾರ ಸೇರಿದಂತೆ ದೇವಾಲಯದ ಮುಂಭಾಗದ ದಕ್ಷಿಣ ಭಾಗ ಹಾಗೂ ಉತ್ತರ ಭಾಗದಲ್ಲಿನ ರಸ್ತೆಗಳಿಗೆ ಪೊಲೀಸರು ಬ್ಯಾರಿಕೇಡ್ ಅಳವಡಿಸಿ ವಾಹನಗಳ ದಟ್ಟಣೆ ಹೆಚ್ಚಾಗದಂತೆ ಜೊತೆಗೆ ಯಾವುದೇ ಅಹಿತಕರ ಘಟನೆಗಳು ಜರುಗಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಿ, ಬಿಗಿ ಭದ್ರತೆ ಒದಗಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!